AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಯುವತಿಯಿಂದ ಮೊಬೈಲ್ ಕಸಿದುಕೊಂಡ ದುಷ್ಕರ್ಮಿಗಳು: ರಸ್ತೆಯ ಮೇಲೆ ಧರಧರನೆ ಎಳೆದೊಯ್ದು ಹೇಯಕೃತ್ಯ

ಯುವತಿಯೊಬ್ಬಳು ಮೊಬೈಲ್​​ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಇಬ್ಬರು ದುಷ್ಕರ್ಮಿಗಳು ಹಿಂದೆಯಿಂದ ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್​​ ಫೋನ್​​​ನ್ನು ಕಸಿದುಕೊಂಡು, ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರವೇಶದ ಇಂದೋರ್‌ನಲ್ಲಿ ನಡೆದಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Jul 03, 2023 | 3:37 PM

Share

ಇಂದೋರ್: ದಾರಿಯಲ್ಲಿ ಮೊಬೈಲ್​​ನಲ್ಲಿ ಮಾತನಾಡಿಕೊಂಡು ಹೋಗುವವರು ಈ ವೀಡಿಯೊವನ್ನು ಒಮ್ಮೆ ನೋಡಲೇಬೇಕು, ದೇಶದಲ್ಲಿ ಇಂತಹ ಅದೆಷ್ಟೊ ಘಟನೆಗಳು ನಡೆಯುತ್ತಿದೆ, ಮಹಿಳೆಯರು ದಾರಿಯಲ್ಲಿ ಹೋಗುವಾಗ ತಮ್ಮ ವಸ್ತುಗಳ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂಬುದಕ್ಕೆ ಈ ವೀಡಿಯೊ ಉದಾಹರಣೆ. ಯುವತಿಯೊಬ್ಬಳು ಮೊಬೈಲ್​​ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಇಬ್ಬರು ದುಷ್ಕರ್ಮಿಗಳು ಹಿಂದೆಯಿಂದ ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್​​ ಫೋನ್​​​ನ್ನು ಕಸಿದುಕೊಂಡು, ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರವೇಶದ ಇಂದೋರ್‌ನಲ್ಲಿ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಸಿಟಿವಿ ಫೂಟೇಜ್ ವೈರಲ್ ಆಗಿದೆ. ಇಬ್ಬರು ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಯುವತಿಯ ಮೊಬೈಲ್ ಫೋನ್ ಕಸಿದುಕೊಳ್ಳುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಈ ದೃಶ್ಯಾವಳಿ ಜೂನ್ 30ರಂದು ಸೆರೆಯಾಗಿದೆ ಎಂದು ಹೇಳಲಾಗಿದೆ.

ಈ ವೀಡಿಯೋದಲ್ಲಿ ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಮೇಲ್ನೋಟಕ್ಕೆ ಆಕೆಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಹಿಂದಿನಿಂದ ಬಂದು ಆಕೆಯ ಫೋನ್ ಕಸಿದುಕೊಂಡಿದ್ದಾರೆ. ಈ ಸಮಯದಲ್ಲಿ ತನ್ನ ಮೊಬೈಲ್ ಫೋನ್​​ನ್ನು ಉಳಿಸಿಕೊಳ್ಳಲು ಆಕೆ ಪ್ರಯತ್ನಪಟ್ಟಿದ್ದಾಳೆ, ಆದರೆ ಕಳ್ಳರು ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದು. ಎಳೆದು ರಭಸಕ್ಕೆ ಯುವತಿ ರಸ್ತೆಯ ಮೇಲೆ ಬೀಳುತ್ತಿರುವ ಭಯಾನಕ ದೃಶ್ಯವನ್ನು ಈ ವೀಡಿಯೊದಲ್ಲಿ ನೋಡಬಹುದು.

ಇದನ್ನೂ ಓದಿ:Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಬೈಕ್​​​​ನಲ್ಲಿ ಬಂದ ಇಬ್ಬರ ಪೈಕಿ ಹಿಂದೆ ಕೂತಿದ್ದ ವ್ಯಕ್ತಿ ಫೋನ್ ಕಸಿದುಕೊಂಡಿದ್ದು. ಯಾರಿಗೂ ಗುರುತು ಸಿಗದಂತೆ ಮುಖವನ್ನು ಬಟ್ಟೆಯಿಂದ ಮುಚ್ಚಿದ್ದರು ಎಂದು ಹೇಳಲಾಗಿದೆ. ಈ ಘಟನೆ ಇಂದೋರ್‌ನ ಹೈಕೋರ್ಟ್ ಕ್ರಾಸಿಂಗ್ ಪ್ರದೇಶದಿಂದ ನಡೆದಿದೆ ಎಂದು ವರದಿಯಾಗಿದೆ. ಹಗಲೊತ್ತು ಈ ಘಟನೆ ನಡೆದಿದ್ದು, ಜನಸಂದಣಿಯ ಪ್ರದೇಶವಾಗಿದ್ದರು ಈ ಕೃತ್ಯವನ್ನು ತಡೆಯಲಿಲ್ಲ ಮತ್ತು ಆಕೆ ಸಹಾಯ ಯಾರು ಬರಲಿಲ್ಲ.

ತುಕೋಗಂಜ್ ಪೊಲೀಸ್ ಠಾಣಾಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಹಿಡಿಯಲು ಯತ್ನಿಸುತ್ತಿದ್ದಾರೆ, ಇದುವರೆಗೂ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Mon, 3 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ