AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಯುವತಿಯಿಂದ ಮೊಬೈಲ್ ಕಸಿದುಕೊಂಡ ದುಷ್ಕರ್ಮಿಗಳು: ರಸ್ತೆಯ ಮೇಲೆ ಧರಧರನೆ ಎಳೆದೊಯ್ದು ಹೇಯಕೃತ್ಯ

ಯುವತಿಯೊಬ್ಬಳು ಮೊಬೈಲ್​​ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಇಬ್ಬರು ದುಷ್ಕರ್ಮಿಗಳು ಹಿಂದೆಯಿಂದ ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್​​ ಫೋನ್​​​ನ್ನು ಕಸಿದುಕೊಂಡು, ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರವೇಶದ ಇಂದೋರ್‌ನಲ್ಲಿ ನಡೆದಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 03, 2023 | 3:37 PM

ಇಂದೋರ್: ದಾರಿಯಲ್ಲಿ ಮೊಬೈಲ್​​ನಲ್ಲಿ ಮಾತನಾಡಿಕೊಂಡು ಹೋಗುವವರು ಈ ವೀಡಿಯೊವನ್ನು ಒಮ್ಮೆ ನೋಡಲೇಬೇಕು, ದೇಶದಲ್ಲಿ ಇಂತಹ ಅದೆಷ್ಟೊ ಘಟನೆಗಳು ನಡೆಯುತ್ತಿದೆ, ಮಹಿಳೆಯರು ದಾರಿಯಲ್ಲಿ ಹೋಗುವಾಗ ತಮ್ಮ ವಸ್ತುಗಳ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂಬುದಕ್ಕೆ ಈ ವೀಡಿಯೊ ಉದಾಹರಣೆ. ಯುವತಿಯೊಬ್ಬಳು ಮೊಬೈಲ್​​ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಇಬ್ಬರು ದುಷ್ಕರ್ಮಿಗಳು ಹಿಂದೆಯಿಂದ ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್​​ ಫೋನ್​​​ನ್ನು ಕಸಿದುಕೊಂಡು, ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರವೇಶದ ಇಂದೋರ್‌ನಲ್ಲಿ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಸಿಟಿವಿ ಫೂಟೇಜ್ ವೈರಲ್ ಆಗಿದೆ. ಇಬ್ಬರು ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಯುವತಿಯ ಮೊಬೈಲ್ ಫೋನ್ ಕಸಿದುಕೊಳ್ಳುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಈ ದೃಶ್ಯಾವಳಿ ಜೂನ್ 30ರಂದು ಸೆರೆಯಾಗಿದೆ ಎಂದು ಹೇಳಲಾಗಿದೆ.

ಈ ವೀಡಿಯೋದಲ್ಲಿ ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಮೇಲ್ನೋಟಕ್ಕೆ ಆಕೆಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಹಿಂದಿನಿಂದ ಬಂದು ಆಕೆಯ ಫೋನ್ ಕಸಿದುಕೊಂಡಿದ್ದಾರೆ. ಈ ಸಮಯದಲ್ಲಿ ತನ್ನ ಮೊಬೈಲ್ ಫೋನ್​​ನ್ನು ಉಳಿಸಿಕೊಳ್ಳಲು ಆಕೆ ಪ್ರಯತ್ನಪಟ್ಟಿದ್ದಾಳೆ, ಆದರೆ ಕಳ್ಳರು ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದು. ಎಳೆದು ರಭಸಕ್ಕೆ ಯುವತಿ ರಸ್ತೆಯ ಮೇಲೆ ಬೀಳುತ್ತಿರುವ ಭಯಾನಕ ದೃಶ್ಯವನ್ನು ಈ ವೀಡಿಯೊದಲ್ಲಿ ನೋಡಬಹುದು.

ಇದನ್ನೂ ಓದಿ:Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಬೈಕ್​​​​ನಲ್ಲಿ ಬಂದ ಇಬ್ಬರ ಪೈಕಿ ಹಿಂದೆ ಕೂತಿದ್ದ ವ್ಯಕ್ತಿ ಫೋನ್ ಕಸಿದುಕೊಂಡಿದ್ದು. ಯಾರಿಗೂ ಗುರುತು ಸಿಗದಂತೆ ಮುಖವನ್ನು ಬಟ್ಟೆಯಿಂದ ಮುಚ್ಚಿದ್ದರು ಎಂದು ಹೇಳಲಾಗಿದೆ. ಈ ಘಟನೆ ಇಂದೋರ್‌ನ ಹೈಕೋರ್ಟ್ ಕ್ರಾಸಿಂಗ್ ಪ್ರದೇಶದಿಂದ ನಡೆದಿದೆ ಎಂದು ವರದಿಯಾಗಿದೆ. ಹಗಲೊತ್ತು ಈ ಘಟನೆ ನಡೆದಿದ್ದು, ಜನಸಂದಣಿಯ ಪ್ರದೇಶವಾಗಿದ್ದರು ಈ ಕೃತ್ಯವನ್ನು ತಡೆಯಲಿಲ್ಲ ಮತ್ತು ಆಕೆ ಸಹಾಯ ಯಾರು ಬರಲಿಲ್ಲ.

ತುಕೋಗಂಜ್ ಪೊಲೀಸ್ ಠಾಣಾಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಹಿಡಿಯಲು ಯತ್ನಿಸುತ್ತಿದ್ದಾರೆ, ಇದುವರೆಗೂ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Mon, 3 July 23

ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು