AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

Madhya Pradesh: ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on:May 13, 2021 | 2:16 PM

Share

ಭೋಪಾಲ್: ಮಧ್ಯಪ್ರದೇಶದಲ್ಲಿ ಪೋಷಕರು ಕೊವಿಡ್ 19 ನಿಂದ ಮೃತಪಟ್ಟರೆ ಆ ಕುಟುಂಬದ ಮಕ್ಕಳಿಗೆ ಪ್ರತಿ ತಿಂಗಳು ₹5,000 ಪಿಂಚಣಿ ನೀಡಲಾಗುವುದು. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದಾರೆ.

ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಕೆಲಸ ಮಾಡಲು ಬಯಸುವ ಜನರಿಗೆ ರಾಜ್ಯ ಸರ್ಕಾರವು ಸರ್ಕಾರದ ಖಾತರಿಯ ಮೇರೆಗೆ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುವ ಉದ್ದೇಶವನ್ನು ಈ ಉಪಕ್ರಮಗಳು ಹೊಂದಿವೆ ಎಂದು ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಬುಧವಾರ 8,970 ಹೊಸ ಪ್ರಕರಣಗಳು ಮತ್ತು 84 ಸಾವು ವರದಿಯಾಗಿದೆ. ಈವರೆಗೆ ಒಟ್ಟು 6,679 ಮಂದಿ ಮೃತಪಟ್ಟಿದ್ದಾರೆ. ಕೊವಿಡ್ -19 ಉಲ್ಬಣವನ್ನು ನಿಯಂತ್ರಿಸಲು ಸರ್ಕಾರವು ಮೇ 15 ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

Published On - 2:13 pm, Thu, 13 May 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ