AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

Madhya Pradesh: ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ
ಶಿವರಾಜ್ ಸಿಂಗ್ ಚೌಹಾಣ್
Follow us
ರಶ್ಮಿ ಕಲ್ಲಕಟ್ಟ
|

Updated on:May 13, 2021 | 2:16 PM

ಭೋಪಾಲ್: ಮಧ್ಯಪ್ರದೇಶದಲ್ಲಿ ಪೋಷಕರು ಕೊವಿಡ್ 19 ನಿಂದ ಮೃತಪಟ್ಟರೆ ಆ ಕುಟುಂಬದ ಮಕ್ಕಳಿಗೆ ಪ್ರತಿ ತಿಂಗಳು ₹5,000 ಪಿಂಚಣಿ ನೀಡಲಾಗುವುದು. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದಾರೆ.

ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಕೆಲಸ ಮಾಡಲು ಬಯಸುವ ಜನರಿಗೆ ರಾಜ್ಯ ಸರ್ಕಾರವು ಸರ್ಕಾರದ ಖಾತರಿಯ ಮೇರೆಗೆ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುವ ಉದ್ದೇಶವನ್ನು ಈ ಉಪಕ್ರಮಗಳು ಹೊಂದಿವೆ ಎಂದು ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಬುಧವಾರ 8,970 ಹೊಸ ಪ್ರಕರಣಗಳು ಮತ್ತು 84 ಸಾವು ವರದಿಯಾಗಿದೆ. ಈವರೆಗೆ ಒಟ್ಟು 6,679 ಮಂದಿ ಮೃತಪಟ್ಟಿದ್ದಾರೆ. ಕೊವಿಡ್ -19 ಉಲ್ಬಣವನ್ನು ನಿಯಂತ್ರಿಸಲು ಸರ್ಕಾರವು ಮೇ 15 ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

Published On - 2:13 pm, Thu, 13 May 21

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ