AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

Madhya Pradesh: ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on:May 13, 2021 | 2:16 PM

Share

ಭೋಪಾಲ್: ಮಧ್ಯಪ್ರದೇಶದಲ್ಲಿ ಪೋಷಕರು ಕೊವಿಡ್ 19 ನಿಂದ ಮೃತಪಟ್ಟರೆ ಆ ಕುಟುಂಬದ ಮಕ್ಕಳಿಗೆ ಪ್ರತಿ ತಿಂಗಳು ₹5,000 ಪಿಂಚಣಿ ನೀಡಲಾಗುವುದು. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದಾರೆ.

ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಕೆಲಸ ಮಾಡಲು ಬಯಸುವ ಜನರಿಗೆ ರಾಜ್ಯ ಸರ್ಕಾರವು ಸರ್ಕಾರದ ಖಾತರಿಯ ಮೇರೆಗೆ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುವ ಉದ್ದೇಶವನ್ನು ಈ ಉಪಕ್ರಮಗಳು ಹೊಂದಿವೆ ಎಂದು ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಬುಧವಾರ 8,970 ಹೊಸ ಪ್ರಕರಣಗಳು ಮತ್ತು 84 ಸಾವು ವರದಿಯಾಗಿದೆ. ಈವರೆಗೆ ಒಟ್ಟು 6,679 ಮಂದಿ ಮೃತಪಟ್ಟಿದ್ದಾರೆ. ಕೊವಿಡ್ -19 ಉಲ್ಬಣವನ್ನು ನಿಯಂತ್ರಿಸಲು ಸರ್ಕಾರವು ಮೇ 15 ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

Published On - 2:13 pm, Thu, 13 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?