AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಕುರ್​ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ 8 ವರ್ಷದ ಬಾಲಕ!

ಮಗನಿಗೆ ಕುರ್ಕುರೆ ಕೊಡಿಸಲು ಒಪ್ಪದ ತಾಯಿಯ ವಿರುದ್ಧ 8 ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿರುವ ಶಾಕಿಂಗ್ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಂಗ್ರೌಲಿಯ ಎಂಟು ವರ್ಷದ ಬಾಲಕನೊಬ್ಬ ತನ್ನ ತಾಯಿ ಕುರ್ಕುರೆ ಪ್ಯಾಕೆಟ್ ಕೊಡಿಸಲು ನಿರಾಕರಿಸಿದ ನಂತರ ಪೊಲೀಸರಿಗೆ ಕರೆ ಮಾಡಿದ್ದಾನೆ. ಈ ಫೋನ್ ಕರೆಯ ವೀಡಿಯೊ ವೈರಲ್ ಆಗಿದ್ದು, ಪೊಲೀಸರು ಆಮೇಲೆ ಏನು ಮಾಡಿದರು? ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

ಅಮ್ಮ ಕುರ್​ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ 8 ವರ್ಷದ ಬಾಲಕ!
Police Given Kurkure To Boy
ಸುಷ್ಮಾ ಚಕ್ರೆ
|

Updated on: Oct 05, 2025 | 10:24 PM

Share

ನವದೆಹಲಿ, ಅಕ್ಟೋಬರ್ 5: ಮಧ್ಯಪ್ರದೇಶದದಲ್ಲಿ ಆಘಾತಕಾರಿ (Shocking News) ಮತ್ತು ಅಪರೂಪದ ಘಟನೆಯೊಂದು ನಡೆದಿದೆ. ಸಿಂಗ್ರೌಲಿಯ ಚಿತರ್‌ವೈ ಕಲಾ ಗ್ರಾಮದ 8 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಅಕ್ಕ ತನಗೆ ಕುರ್​ಕುರೆ ಕೊಡಿಸಿ ಎಂದಿದ್ದಕ್ಕೆ ಹೊಡೆದಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಅಮ್ಮನ ಮೊಬೈಲ್ ತೆಗೆದುಕೊಂಡು ಪೊಲೀಸ್ ತುರ್ತು ಸಹಾಯವಾಣಿ ನಂಬರ್ 112ಗೆ ಫೋನ್ ಮಾಡಿದ ಬಾಲಕ ಚಿಪ್ಸ್ ಪ್ಯಾಕೆಟ್ ಕೊಡಿಸಿ ಎಂದಿದ್ದಕ್ಕೆ ಅಮ್ಮ ಮತ್ತು ಅಕ್ಕ ಸೇರಿ ನನಗೆ ಹೊಡೆದಿದ್ದಾರೆ ಎಂದು ಹೇಳುತ್ತಾ ಅಳಲಾರಂಭಿಸಿದ್ದಾನೆ.

ಕುರ್ಕುರೆ ಪ್ಯಾಕೆಟ್ ಖರೀದಿಸಲು ಆ ಬಾಲಕ ತನ್ನ ತಾಯಿಯ ಬಳಿ 20 ರೂ. ಕೊಡುವಂತೆ ಕೇಳಿದ. ಅದಕ್ಕೆ ಆಕೆ ಒಪ್ಪಲಿಲ್ಲ. ಆತ ಹಠ ಮಾಡಿದಾಗ ಆ ತಾಯಿ ಮತ್ತು ಅವರ ಮಗಳು ಸೇರಿ ಆ ಬಾಲಕನನ್ನು ಹೊಡೆದಿದ್ದಾರೆ. ಇದರಿಂದ ನೊಂದ ಬಾಲಕ ಭಾರತದ ಪೊಲೀಸ್ ತುರ್ತು ಸಂಖ್ಯೆ 112ಗೆ ಕರೆ ಮಾಡಿದ.

ಇದನ್ನೂ ಓದಿ: Viral: ಇಲ್ಲಿ ರೊಮ್ಯಾನ್ಸ್ ಮಾಡುವಂತಿಲ್ಲ; ವೈರಲ್ ಆಯ್ತು ಬೆಂಗಳೂರಿನ ಆಟೋದಲ್ಲಿ ಅಂಟಿಸಲಾದ ಪೋಸ್ಟರ್

ಈ ಕರೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಯುವಕ ತನ್ನ ಪರಿಸ್ಥಿತಿಯನ್ನು ವಿವರಿಸುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ಶಾಂತವಾಗಿ ಅವನಿಗೆ ಧೈರ್ಯ ತುಂಬುತ್ತಿರುವುದು ನೆಟ್ಟಿಗರ ಮೆಚ್ಚುಗೆಗೆ ಕಾರಣವಾಗಿದೆ. ಆ ಪೊಲೀಸ್ ಬಾಲಕನಿಗೆ ಸಮಾಧಾನ ಮಾಡಿದ್ದು ಮಾತ್ರವಲ್ಲದೆ ಆತನ ಅಮ್ಮನಿಗೆ ಇನ್ಮುಂದೆ ಆ ಮಗುವನ್ನು ಹೊಡೆಯಬೇಡಿ ಎಂದು ಹೇಳಿದ್ದಾರೆ. ನಂತರ ಆ ಮಗುವಿನ ಮನೆಗೆ ಹೋಗಿ ತಾವೇ ಐದಾರು ಕುರ್​ಕುರೆ ಪ್ಯಾಕೆಟ್​​ಗಳನ್ನು ಆತನಿಗೆ ನೀಡಿ ಸರ್​ಪ್ರೈಸ್ ಕೊಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?