AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಶಿವರಾಜ್ ಸಿಂಗ್ ಚೌಹಾಣ್​ಗೆ ತಣ್ಣನೆ ಚಹಾ ನೀಡಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ; ಆಮೇಲೇನಾಯ್ತು?

ಸೋಮವಾರ ಬೆಳಗ್ಗೆ 11.30ಕ್ಕೆ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಸಾರಿಗೆ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ರಾಕೇಶ್ ಕನ್ಹುವಾ ವಹಿಸಿಕೊಂಡಿದ್ದರು.

ಸಿಎಂ ಶಿವರಾಜ್ ಸಿಂಗ್ ಚೌಹಾಣ್​ಗೆ ತಣ್ಣನೆ ಚಹಾ ನೀಡಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ; ಆಮೇಲೇನಾಯ್ತು?
ಸಿಎಂ ಶಿವರಾಜ್ ಸಿಂಗ್ ಚೌಹಾಣ್
TV9 Web
| Edited By: |

Updated on: Jul 13, 2022 | 1:20 PM

Share

ಭೋಪಾಲ್: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರಿಗೆ ತಣ್ಣನೆಯ ಮತ್ತು ಕಳಪೆ ಗುಣಮಟ್ಟದ ಚಹಾದ ವ್ಯವಸ್ಥೆ ಮಾಡಿದ್ದಕ್ಕಾಗಿ ಮಧ್ಯಪ್ರದೇಶದ ಸರ್ಕಾರಿ ಅಧಿಕಾರಿಯೊಬ್ಬರಿಗೆ ನೋಟಿಸ್ ನೀಡಲಾಗಿದೆ. ಆದರೆ, ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಗಲಾಟೆಯೆದ್ದ ಹಿನ್ನೆಲೆಯಲ್ಲಿ ಆ ನೋಟಿಸ್ ಅನ್ನು ಹಿಂಪಡೆಯಲಾಗಿದೆ. ಸೋಮವಾರ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡಿದ ಕಿರಿಯ ಸರಬರಾಜು ಅಧಿಕಾರಿ ರಾಕೇಶ್ ಕನ್ಹುವಾ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ರಾಜನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಡಿಪಿ ದ್ವಿವೇದಿ ತಿಳಿಸಿದ್ದಾರೆ.

ಶೋಕಾಸ್ ನೋಟಿಸ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಛತ್ತರ್‌ಪುರ ಜಿಲ್ಲಾಧಿಕಾರಿ ಸಂದೀಪ್ ಜಿ.ಆರ್ ದ್ವಿವೇದಿ ನೀಡಿದ್ದ ನೋಟಿಸ್ ರದ್ದುಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 11.30ಕ್ಕೆ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಸಾರಿಗೆ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ರಾಕೇಶ್ ಕನ್ಹುವಾ ವಹಿಸಿಕೊಂಡಿದ್ದರು ಎಂದು ದ್ವಿವೇದಿ ಹೇಳಿದ್ದಾರೆ.

ಇದನ್ನೂ ಓದಿ: Akshata Murthy: ಬಂಗಲೆ ಹೊರಗೆ ಕಾದಿದ್ದ ಪತ್ರಕರ್ತರಿಗೆ ಚಹಾ ನೀಡಿದ ಅಕ್ಷತಾ ಮೂರ್ತಿ; ಮತ್ತೆ ಟೀಕೆಗೀಡಾದ ರಿಷಿ ಸುನಕ್

ರಾಕೇಶ್ ಕನ್ಹುವಾ ವ್ಯವಸ್ಥೆ ಮಾಡಿದ್ದ ಚಹಾ ತಣ್ಣಗಿದ್ದು, ಕಳಪೆ ಗುಣಮಟ್ಟದ್ದಾಗಿತ್ತು ಎಂದು ಅವರು ಹೇಳಿದ್ದಾರೆ. ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ನಿಮಗೆ ವಹಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳಿಗೆ ನೀಡಿದ ಚಹಾದ ಗುಣಮಟ್ಟವು ಕೆಳಮಟ್ಟದ್ದಾಗಿದೆ ಮತ್ತು ಅದು ತಣ್ಣಗಾಗಿತ್ತು ಎಂದು ಎಸ್‌ಡಿಎಂ ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಇದು ಜಿಲ್ಲಾಡಳಿತಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಅಲ್ಲದೆ, ವಿವಿಐಪಿಗಳಿಗೆ ಮೀಸಲಾದ ಪ್ರೋಟೋಕಾಲ್ ಬಗ್ಗೆ ಪ್ರಶ್ನೆಯನ್ನು ಎತ್ತುತ್ತದೆ. ಹೀಗಾಗಿ, ಮೂರು ದಿನಗಳಲ್ಲಿ ಕಿರಿಯ ಸರಬರಾಜು ಅಧಿಕಾರಿಯಿಂದ ಎಸ್‌ಡಿಎಂ ವಿವರಣೆ ಕೇಳಿದೆ.

ಈ ನೋಟಿಸ್‌ನ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಟೀಕೆಗೆ ಒಳಗಾಗಿದ್ದರಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕಿರಿಯ ಅಧಿಕಾರಿಗೆ ನೀಡಿದ್ದ ಶೋಕಾಸ್ ನೋಟಿಸ್ ಅನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ