AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಮುಖ್ಯಮಂತ್ರಿ ಚೌಹಾಣ್​ರನ್ನು ಬಿಜೆಪಿ ಕಡೆಗಣಿಸುತ್ತಿದೆಯೇ? ಅಚ್ಚರಿ ಮೂಡಿಸಿದ ಸಿಎಂ ನಡೆ

ಮಧ್ಯಪ್ರದೇಶ(Madhya Pradesh)ದಲ್ಲಿ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹಾಗೆಯೇ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್(Shivraj Singh chouhan) ಅವರು ನಡೆದುಕೊಳ್ಳುತ್ತಿರುವ ರೀತಿ ಬಿಜೆಪಿ ಮುಖ್ಯಮಂತ್ರಿಯನ್ನು ಕಡೆಗಣಿಸುತ್ತಿದ್ದೆಯೇ ಎನ್ನುವ ಅನುಮಾನ ಮೂಡುವಂತೆ ಮಾಡಿದೆ. ಮಧ್ಯಪ್ರದೇಶ ವಿಧಾನಸಭೆಗೆ ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು ಹಾಗೂ 7 ಸಂಸದರ ಹೆಸರುಗಳಿವೆ.

ಮಧ್ಯಪ್ರದೇಶ: ಮುಖ್ಯಮಂತ್ರಿ ಚೌಹಾಣ್​ರನ್ನು ಬಿಜೆಪಿ ಕಡೆಗಣಿಸುತ್ತಿದೆಯೇ? ಅಚ್ಚರಿ ಮೂಡಿಸಿದ ಸಿಎಂ ನಡೆ
ಶಿವರಾಜ್ ಸಿಂಗ್ ಚೌಹಾಣ್Image Credit source: Hindustan Times
ನಯನಾ ರಾಜೀವ್
|

Updated on: Sep 27, 2023 | 2:38 PM

Share

ಮಧ್ಯಪ್ರದೇಶ(Madhya Pradesh)ದಲ್ಲಿ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹಾಗೆಯೇ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್(Shivraj Singh chouhan) ಅವರು ನಡೆದುಕೊಳ್ಳುತ್ತಿರುವ ರೀತಿ ಬಿಜೆಪಿ ಮುಖ್ಯಮಂತ್ರಿಯನ್ನು ಕಡೆಗಣಿಸುತ್ತಿದ್ದೆಯೇ ಎನ್ನುವ ಅನುಮಾನ ಮೂಡುವಂತೆ ಮಾಡಿದೆ. ಮಧ್ಯಪ್ರದೇಶ ವಿಧಾನಸಭೆಗೆ ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು ಹಾಗೂ 7 ಸಂಸದರ ಹೆಸರುಗಳಿವೆ. ಇದುವರೆಗೆ ಬಿಡುಗಡೆ ಮಾಡಿರುವ 78 ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಸರು ಇಲ್ಲದಿರುವುದರಿಂದ ಅವರನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ ಎನ್ನುವ ಸಂಶಯ ಮೂಡಿದೆ.

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ, ಪ್ರಹ್ಲಾದ್ ಪಟೇಲ್ ಸೇರಿದಂತೆ ಏಳು ಮಂದಿ ಸಂಸದರನ್ನು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾರಣವೇನು?

ಶಿವರಾಜ್ ಸಿಂಗ್ ಚೌಹಾಣ್ ಇನ್ನು ಮುಂದೆ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಏಕೈಕ ಸ್ಪರ್ಧಿಯಾಗಿರುವುದಿಲ್ಲ. ಏಕೆಂದರೆ ಕೈಲಾಶ್ ವಿಜಯವರ್ಗಿಯಾ, ನರೇಂದ್ರ ಸಿಂಗ್ ಜಿ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ, ಅಂತಹ ಹೆಸರು ಕೈಲಾಶ್ ಪಟೇಲ್ ಅವರು ಕಳೆದ ಹತ್ತು ವರ್ಷಗಳಿಂದ ಮಧ್ಯಪ್ರದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ನೀತಿ ಸಂಹಿತೆ ಜಾರಿಗೂ ಮುನ್ನ ಸಿಎಂ ಶಿವರಾಜ್ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಈ ವೇಳೆ ಹಾಲಿ ಸಚಿವರಿಗೆ ಧನ್ಯವಾದ ಅರ್ಪಿಸಿದರು. ಇದರೊಂದಿಗೆ ಮಾಜಿ ಮುಖ್ಯಮಂತ್ರಿಗಳನ್ನು ಸ್ಮರಿಸಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.

ಮೂರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಚೌಹಾಣ್ ತಮ್ಮ ಅಭಿಪ್ರಾಯ ಮಂಡಿಸುತ್ತಿರುವ ರೀತಿ, ಇದೀಗ ಶಿವರಾಜ್ ಸಿಂಗ್ ಚೌಹಾಣ್ ಪಾತ್ರ ಬದಲಾಗಲಿದೆಯೇ ಎಂಬ ಚರ್ಚೆ ಮಧ್ಯಪ್ರದೇಶ ರಾಜಕಾರಣದಲ್ಲಿ ತೀವ್ರಗೊಂಡಿದೆ.

ಚುನಾವಣಾ ಉಸ್ತುವಾರಿ ಅಮಿತ್ ಶಾ, ಮೋದಿಯದ್ದು

ಮಧ್ಯಪ್ರದೇಶದ ಚುನಾವಣಾ ಉಸ್ತುವಾರಿಯನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಹಿಸಿಕೊಂಡಿದ್ದಾರೆ. ಚುನಾವಣಾ ಪ್ರಚಾರದಿಂದ ಹಿಡಿದು ಅಭ್ಯರ್ಥಿಗಳ ಆಯ್ಕೆಯವರೆಗೂ ಬಿಜೆಪಿ ಕೇಂದ್ರವೇ ನಿರ್ಧರಿಸುತ್ತದೆ. ಶಿವರಾಜ್ ಸಿಂಗ್ ಅವರ ಕಾರ್ಯವೈಖರಿಯಿಂದಾಗಿ ಕಾಂಗ್ರೆಸ್ ನಾಯಕರು ಇದನ್ನು ಶಿವರಾಜ್ ಈ ಬಾರಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳುತ್ತಿದ್ದಾರೆ.

ಮಾಜಿ ಸಿಎಂ, ಸಂಸದರ ಕೊಡುಗೆ ಶ್ಲಾಘನೀಯ ಮಂಗಳವಾರ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಎಲ್ಲಾ ಮುಖ್ಯಮಂತ್ರಿಗಳು ಮಧ್ಯಪ್ರದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಅನುಪಮ ಕೊಡುಗೆ ನೀಡಿದ್ದಾರೆ. ಇಂದು ನಾನು ಅವರೆಲ್ಲರ ಪಾದಗಳಿಗೆ ನಮಸ್ಕರಿಸುತ್ತೇನೆ. ಇವರೆಲ್ಲರೂ ಮಧ್ಯಪ್ರದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ.

ಎಲ್ಲಾ ಮುಖ್ಯಮಂತ್ರಿಗಳ ಹೆಸರನ್ನು ತೆಗೆದುಕೊಂಡ ಶಿವರಾಜ್, ರವಿಶಂಕರ್ ಶುಕ್ಲಾ, ಭಗವಂತ್ ರೈ ಮಂಡ್ಲೋಯ್, ಕೈಲಾಸನಾಥ್ ಕಾಟ್ಜು, ದ್ವಾರಕಾ ಪ್ರಸಾದ್ ಮಿಶ್ರಾ, ಗೋವಿಂದ್ ನಾರಾಯಣ್ ಸಿಂಗ್, ನರೇಂದ್ರ ಚಂದ್ರ ಸಿಂಗ್, ಶ್ಯಾಮಚರಣ್ ಶುಕ್ಲಾ, ಪ್ರಕಾಶ್ ಚಂದ್ರ ಸೇಥಿ, ಕೈಲಾಶ್ಚಂದ್ರ ಜೋಶಿ, ವೀರೇಂದ್ರ ಕುಮಾರ್ ಸಖಲೇಚಾ, ಸುಂದರ್ಲಾಲ್ಚಾ ಪಟ್ವಾ, ಅರ್ಜುನ್ ಸಿಂಗ್, ಮೋತಿಲಾಲ್ ವೋರಾ ಮತ್ತು ಬಾಬುಲಾಲ್ ಗೌರ್ ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿದರು.

ಮತ್ತಷ್ಟು ಓದಿ: ಸನಾತನ ಧರ್ಮವನ್ನು ಅವಮಾನಿಸಿದ್ದಕ್ಕೆ ಜನರು ಸಿಟ್ಟಾದ ಕಾರಣ ‘ಇಂಡಿಯಾ’ದ ಮೊದಲ ರ‍್ಯಾಲಿ ರದ್ದು: ಬಿಜೆಪಿ

13 ಗಂಟೆಗಳ ಬಳಿಕ ಅಭಿನಂದನೆ ಸೋಮವಾರ ಸಂಜೆ ಬಿಜೆಪಿ ತನ್ನ 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪಟ್ಟಿಯನ್ನು ಹಂಚಿಕೊಳ್ಳುವುದರೊಂದಿಗೆ ಅಭಿನಂದಿಸಲು ಪ್ರಾರಂಭಿಸಿದರು. ಆದರೆ, ಎರಡನೇ ಪಟ್ಟಿ ಬಿಡುಗಡೆಯಾದ 13 ಗಂಟೆಗಳ ನಂತರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ, ಈ ಕಾರಣದಿಂದಾಗಿ ವಿವಿಧ ರೀತಿಯ ಚರ್ಚೆಗಳು ಪ್ರಾರಂಭವಾಗಿವೆ.

ಬಿಜೆಪಿ ಧುರೀಣರು ಚುನಾವಣಾ ಸಮರಕ್ಕೆ ಇಳಿದಿದ್ದಾರೆ ಬಿಜೆಪಿ ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸದರಿಗೆ ಟಿಕೆಟ್ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿದೆ. ಕೇಂದ್ರ ಸಚಿವರಾದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲಾಗಿದ್ದು, ಸಂಸದರಾದ ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್, ಗಣೇಶ್ ಸಿಂಗ್ ಮತ್ತು ರಿತಿ ಪಾಠಕ್ ಅವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಶಿವರಾಜ್ ಚೌಹಾಣ್‌ಗೆ ಸರಿಸಮನಾದ ನಾಯಕರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಹಲವರು ಸಿಎಂ ಆಗುವ ಮಹತ್ವಾಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಬಾರಿ ಬಿಜೆಪಿ ಯಾವುದೇ ನಾಯಕರನ್ನು ಸಿಎಂ ಮಾಡದೆ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಮೂಲಕ ಸಿಎಂ ಮುಖದ ಆಯ್ಕೆಯನ್ನು ತೆರೆದಿಟ್ಟಿರುವುದು ಶಿವರಾಜ್‌ಗೆ ನೇರ ಸಂಜ್ಞೆ ಎಂದೇ ಪರಿಗಣಿಸಲಾಗುತ್ತಿದೆ.

ಪ್ರಧಾನಿ ಮೋದಿ ಒಮ್ಮೆಯೂ ಶಿವರಾಜ್ ಸಿಂಗ್ ಚೌಹಾಣ್ ಹೆಸರು ಪ್ರಸ್ತಾಪಿಸಿರಲಿಲ್ಲ ಪ್ರಧಾನಿ ಮೋದಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ರ್ಯಾಲಿ ನಡೆಸಿದ್ದರು, ಆದರೆ ಒಮ್ಮೆಯೂ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲ. ಸೋಮವಾರ ಭೋಪಾಲ್‌ನಲ್ಲಿ ಜನಾಶೀರ್ವಾದ ಯಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಿಎಂ ಶಿವರಾಜ್ ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲ ಅಥವಾ ಅವರ ಯೋಜನೆಗಳನ್ನು ಪ್ರಸ್ತಾಪಿಸಲಿಲ್ಲ. ಇದೇ ಕಾರಣಕ್ಕೆ ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗಳು ಶುರುವಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ