AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್​ನಲ್ಲಿ ಒಂದೇ ದಿನ 40 ಮಂದಿಗೆ ಕಚ್ಚಿದ ಬೀದಿ ನಾಯಿಗಳು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. 6 ತಿಂಗಳಲ್ಲಿ ಒಟ್ಟು 10 ಚೀತಾಗಳು ಮೃತಪಟ್ಟಿವೆ. ಮೃತ ಚೀತಾ ಹೆಸರು ಶೌರ್ಯ, ಸಾವಿನ ಕಾರಣವನ್ನು ಖಚಿತಪಡಿಸಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಾಜೆಕ್ಟ್ ಚೀತಾ ಅಡಿಯಲ್ಲಿ, ಸೆಪ್ಟೆಂಬರ್ 2022 ರಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು ತರಲಾಗಿತ್ತು. ಮತ್ತು 2023 ರ ಆರಂಭದಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಲಾಯಿತು. ಇದುವರೆಗೆ 10 ಚೀತಾಗಳು ಸಾವನ್ನಪ್ಪಿವೆ.

ಭೋಪಾಲ್​ನಲ್ಲಿ ಒಂದೇ ದಿನ 40 ಮಂದಿಗೆ ಕಚ್ಚಿದ ಬೀದಿ ನಾಯಿಗಳು
ಬೀದಿನಾಯಿಗಳುImage Credit source: India Today
ನಯನಾ ರಾಜೀವ್
|

Updated on: Jan 17, 2024 | 11:52 AM

Share

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಬೀದಿ ನಾಯಿ(Stray Dog)ಗಳ ಕಾಟ ಹೆಚ್ಚಾಗಿದೆ. ಮಂಗಳವಾರ ನಗರದಲ್ಲಿ ಸುಮಾರು 40 ಮಂದಿಗೆ ಬೀದಿ ನಾಯಿಗಳು ಕಚ್ಚಿವೆ. ಮಂಗಳವಾರ ಸಂಜೆ ವೇಳೆಗೆ ಬೀದಿನಾಯಿಗಳಿಂದ ಕಚ್ಚಿಸಿಕೊಂಡ 40ಕ್ಕೂ ಹೆಚ್ಚು ವ್ಯಕ್ತಿಗಳು ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದರು. ಜನವರಿ ಮೊದಲ ವಾರವೊಂದರಲ್ಲೇ ನಗರದ ವಿವಿಧೆಡೆ ನಾಯಿ ಕಡಿತದ ಹತ್ತಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಜನವರಿ 10 ರಂದು ಭೋಪಾಲ್‌ನಲ್ಲಿ ಏಳು ತಿಂಗಳ ಮಗುವನ್ನು ಬೀದಿ ನಾಯಿಗಳು ಕೊಂದು ಹಾಕಿದ್ದವು. ಅಂದಿನಿಂದ ಮುನ್ಸಿಪಲ್ ಕಾರ್ಪೊರೇಷನ್ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಿದೆ.

ಮಂಗಳವಾರ ಸಂಜೆ, ಮೇಯರ್ ಮಾಲ್ತಿ ರೈ ಅವರು ಪಾಲಿಕೆ ಅಧಿಕಾರಿಗಳ ಸಭೆಯನ್ನು ಕರೆದರು, ಪಾಲಿಕೆ ಆಯುಕ್ತ ನೋಬಲ್ ಫ್ರಾಂಕ್ ಸಹ ಹಾಜರಿದ್ದರು.

ಮತ್ತಷ್ಟು ಓದಿ: ಭೋಪಾಲ್​: ಗುಡಿಸಲಿನಿಂದ 6 ತಿಂಗಳ ಮಗುವನ್ನು ಎಳೆದೊಯ್ದು ಕಚ್ಚಿ ಕೊಂದ ಬೀದಿ ನಾಯಿಗಳು

ಆದಷ್ಟು ಬೇಗ ಬೀದಿ ನಾಯಿಗಳನ್ನು ಹಿಡಿಯುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದರು. ಸಾಕುಪ್ರಾಣಿಗಳ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮನೆಯಲ್ಲಿ ಅಥವಾ ಗೂಡಿನಲ್ಲಿ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ. ಮಹಾನಗರ ಪಾಲಿಕೆಯ ಕಾಮಗಾರಿಗೆ ಅಡ್ಡಿಪಡಿಸಿದರೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ