AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಒಂದೇ ದಿನದಲ್ಲಿ 548 ಮಂದಿಗೆ ಕಚ್ಚಿದ ಬೀದಿ ನಾಯಿಗಳು

ಮಧ್ಯಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಜನವರಿ 23ರಂದು ಮಂಗಳವಾರ ನಗರದಲ್ಲಿ ಒಟ್ಟು 548 ಮಂದಿಗೆ ಬೀದಿ ನಾಯಿಗಳು ಕಚ್ಚಿರುವ ಸಂಗತಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ 548 ಜನರಲ್ಲಿ, 197 ಜನರು ಆಂಟಿ ರೇಬಿಸ್ ಲಸಿಕೆಗಾಗಿ ಮೊರಾರ್‌ನ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ ಮತ್ತು 131 ಜನರು ಆಂಟಿ ರೇಬಿಸ್ ಲಸಿಕೆಗಾಗಿ ಜಯ ಆರೋಗ್ಯ ಆಸ್ಪತ್ರೆಯನ್ನು ಸಂಪರ್ಕಿಸಿದ್ದಾರೆ.

ಮಧ್ಯಪ್ರದೇಶ: ಒಂದೇ ದಿನದಲ್ಲಿ 548 ಮಂದಿಗೆ ಕಚ್ಚಿದ ಬೀದಿ ನಾಯಿಗಳು
ನಾಯಿಗಳುImage Credit source: Indian Express
ನಯನಾ ರಾಜೀವ್
|

Updated on: Jan 25, 2024 | 8:04 AM

Share

ಮಧ್ಯಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಜನವರಿ 23ರಂದು ಮಂಗಳವಾರ ನಗರದಲ್ಲಿ ಒಟ್ಟು 548 ಮಂದಿಗೆ ಬೀದಿ ನಾಯಿಗಳು(Stray Dogs) ಕಚ್ಚಿರುವ ಸಂಗತಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ 548 ಜನರಲ್ಲಿ, 197 ಜನರು ಆಂಟಿ ರೇಬಿಸ್ ಲಸಿಕೆಗಾಗಿ ಮೊರಾರ್‌ನ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ ಮತ್ತು 131 ಜನರು ಆಂಟಿ ರೇಬಿಸ್ ಲಸಿಕೆಗಾಗಿ ಜಯ ಆರೋಗ್ಯ ಆಸ್ಪತ್ರೆಯನ್ನು ಸಂಪರ್ಕಿಸಿದ್ದಾರೆ.

ಏತನ್ಮಧ್ಯೆ, ಆಂಟಿ ರೇಬಿಸ್ ಲಸಿಕೆಗಾಗಿ 153 ಜನರು ಹಜೀರಾ ಸಿವಿಲ್ ಆಸ್ಪತ್ರೆಗೆ ಬಂದರೆ, ಆಂಟಿ ರೇಬಿಸ್ ಲಸಿಕೆಗಾಗಿ 39 ಜನರು ದಾಬ್ರಾ ಸಿವಿಲ್ ಆಸ್ಪತ್ರೆಯಲ್ಲಿ ಮತ್ತು 28 ಜನರು ಆಂಟಿ ರೇಬಿಸ್ ಲಸಿಕೆಗಾಗಿ ಭಿತರ್ವಾರ್ ಆಸ್ಪತ್ರೆಗೆ ಹೋಗಿದ್ದರು.

ಗ್ವಾಲಿಯರ್ ನಾಯಿ ಕಡಿತದ ಪ್ರಕರಣ ಕ್ರಮೇಣವಾಗಿ ಹೆಚ್ಚುತ್ತಿದೆ. ಪ್ರತಿದಿನ 100ಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿವೆ. ಮಧ್ಯಪ್ರದೇಶದ ಇತರ ನಗರಗಳಲ್ಲಿ ಪರಿಸ್ಥಿತಿ ಅಷ್ಟೇ ಘನಘೋರವಾಗಿದೆ. ಜನವರಿ 17 ರಂದು, ರಾಜಧಾನಿ ಭೋಪಾಲ್‌ನಲ್ಲಿ ಬೀದಿ ನಾಯಿಗಳು 40 ಜನರನ್ನು ಕಚ್ಚಿದ್ದವು.

ಮತ್ತಷ್ಟು ಓದಿ: ಭೋಪಾಲ್​: ಗುಡಿಸಲಿನಿಂದ 6 ತಿಂಗಳ ಮಗುವನ್ನು ಎಳೆದೊಯ್ದು ಕಚ್ಚಿ ಕೊಂದ ಬೀದಿ ನಾಯಿಗಳು

ಇದಕ್ಕೂ ಮುನ್ನ ಜನವರಿ 10 ರಂದು ಭೋಪಾಲ್‌ನಲ್ಲಿ ಏಳು ತಿಂಗಳ ಮಗುವನ್ನು ಬೀದಿ ನಾಯಿಗಳು ಕೊಂದು ಹಾಕಿದ್ದವು. ಅಂದಿನಿಂದ ಮುನ್ಸಿಪಲ್ ಕಾರ್ಪೊರೇಷನ್ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಿದೆ.

ಪಾಲಕರು ಹಾಗೂ ಸ್ಥಳೀಯರು ಮಗುವನ್ನು ಹುಡುಕಲು ಆರಂಭಿಸಿದಾಗ ಅವರ ಗುಡಿಸಲು ಬಳಿ ಇರುವ ಪೊದೆಯಲ್ಲಿ ಶವ ಪತ್ತೆಯಾಗಿತ್ತು, ಕೈ ಸೇರಿದಂತೆ ಹಲವೆಡೆ ಕಚ್ಚಿದ ಗಾಯಗಳಿದ್ದವು. ಮಗುವಿನ ತಂದೆ-ತಾಯಿ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕೆ ತೆರಳಿದ್ದ ವೇಳೆ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ.

ನಗರದಲ್ಲಿ ಬೀದಿ ನಾಯಿಗಳ ದಾಳಿಯ ನಡುವೆಯೇ ಮಿನಲ್ ರೆಸಿಡೆನ್ಸಿ ನೆರೆಹೊರೆಯಲ್ಲಿ ಈ ಘಟನೆ ಸ್ಥಳೀಯರನ್ನು ಕೆರಳಿಸಿದೆ. ಕಳೆದ ಮೂರು ದಿನಗಳಲ್ಲಿ ಭೋಪಾಲ್ 33 ಬೀದಿ ನಾಯಿಗಳ ದಾಳಿಗೆ ಸಾಕ್ಷಿಯಾಗಿದೆ. ಇತ್ತೀಚಿನ ಘಟನೆಯನ್ನು ಗಮನಿಸಿದ ಆಡಳಿತವು ಮೃತರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತು.

ಶಿಶುವಿನ ಸಾವಿಗೆ ಸಂಬಂಧಿಸಿದಂತೆ ಎಫ್‌ಐಆರ್ ಅನ್ನು ಸಹ ದಾಖಲಿಸಲಾಗಿದೆ ಎಂದು ಹೇಳಿದರು. ಭೋಪಾಲ್‌ನಲ್ಲಿ ಬೀದಿ ನಾಯಿಗಳನ್ನು ಹಿಡಿಯಲು ಪುರಸಭೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ