AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡವಾಗಿ ಬಂದಿದ್ದಕ್ಕೆ ಬೈದ ಪ್ರಿನ್ಸಿಪಾಲ್​ಗೆ ಟಾಯ್ಲೆಟ್​ನಲ್ಲಿ ಶೂಟ್ ಮಾಡಿ ಕೊಂದ ವಿದ್ಯಾರ್ಥಿ!

ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆಯ ವಿದ್ಯಾರ್ಥಿಯೊಬ್ಬ ತಮ್ಮ ಪ್ರಾಂಶುಪಾಲರನ್ನು ಟಾಯ್ಲೆಟ್​ ರೂಂನಲ್ಲಿ ಶೂಟ್ ಮಾಡಿ ಕೊಂದು ಪರಾರಿಯಾಗಿದ್ದಾನೆ. ಶಾಲೆಯ ವಾಶ್ ರೂಂ ಒಳಗೆ ಪ್ರಾಂಶುಪಾಲರ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದನ್ನು ನೋಡಿದ ಬೇರೆ ವಿದ್ಯಾರ್ಥಿಗಳು ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದಾರೆ.

ತಡವಾಗಿ ಬಂದಿದ್ದಕ್ಕೆ ಬೈದ ಪ್ರಿನ್ಸಿಪಾಲ್​ಗೆ ಟಾಯ್ಲೆಟ್​ನಲ್ಲಿ ಶೂಟ್ ಮಾಡಿ ಕೊಂದ ವಿದ್ಯಾರ್ಥಿ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 06, 2024 | 9:29 PM

Share

ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದಿದ್ದಾನೆ. ಪ್ರಾಂಶುಪಾಲರ ತಲೆಗೆ ಗುಂಡು ತಗುಲಿದ್ದು, ಬಳಿಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಧಮೋರಾ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಮತ್ತು ಪ್ರಾಂಶುಪಾಲರು ಒಂದೇ ಸಮಯದಲ್ಲಿ ಶಾಲೆಯ ವಾಶ್ ರೂಂ ಒಳಗೆ ಇದ್ದರು. ಮಧ್ಯಾಹ್ನ 1.30ರ ಸುಮಾರಿಗೆ ವಾಶ್‌ರೂಮ್ ಪ್ರವೇಶದ್ವಾರದಲ್ಲಿ ವಿದ್ಯಾರ್ಥಿಯು ಇದ್ದಕ್ಕಿದ್ದಂತೆ ಪಿಸ್ತೂಲ್ ತೆಗೆದುಕೊಂಡು ಪ್ರಾಂಶುಪಾಲರ ಮೇಲೆ ಗುಂಡು ಹಾರಿಸಿದ್ದಾನೆ.

ಇದನ್ನೂ ಓದಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಬೆಳಗಾವಿ: ಪ್ರೀತಿಗೆ ಅಡ್ಡಬಂದ ಪ್ರೇಯಸಿಯ ತಾಯಿ, ಮಗನ ಹತ್ಯೆ

ಬೆಳಗ್ಗೆ ಶಾಲೆಗೆ ತಡವಾಗಿ ಬಂದಿದ್ದಕ್ಕೆ ಆ ವಿದ್ಯಾರ್ಥಿಗೆ ಪ್ರಿನ್ಸಿಪಾಲ್ ಶಿಕ್ಷೆ ನೀಡಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಆತ ಶೂಟ್ ಮಾಡಿ ಕೊಂದು, ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾನೆ. ಶಾಲೆಯ ವಾಶ್ ರೂಂ ಪ್ರವೇಶದ್ವಾರದಲ್ಲಿ ಪ್ರಾಂಶುಪಾಲರ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಅಲ್ಲದೆ, ಕೊಂದ ನಂತರ, ಆರೋಪಿ ವಿದ್ಯಾರ್ಥಿಯು ಅದೇ ಶಾಲೆಯಲ್ಲಿ ಓದುತ್ತಿದ್ದ ಗೆಳೆಯನೊಂದಿಗೆ ಪ್ರಿನ್ಸಿಪಾಲ್​ ಸ್ಕೂಟರ್‌ನಲ್ಲಿಯೇ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿ ವಿದ್ಯಾರ್ಥಿ ಪಿಯುಸಿ ಓದುತ್ತಿದ್ದು, ಮೃತ ಪ್ರಾಂಶುಪಾಲರನ್ನು ಎಸ್‌ಕೆ ಸಕ್ಸೇನಾ (55) ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ವರ್ಷಗಳಿಂದ ಧಮೋರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ