AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಶವ ನೋಡಿದ ಅಜ್ಜನಿಗೆ ಹೃದಯಾಘಾತ, ಒಟ್ಟಿಗೆ ಅಂತ್ಯಸಂಸ್ಕಾರ

ಮೊಮ್ಮಗನ ಶವ ಕಂಡು ಅಜ್ಜ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ಮೊಮ್ಮಗನ ಶವ ನೋಡಿದ ತಕ್ಷಣ ಅಜ್ಜನಿಗೆ ಹೃದಯಾಘಾತವಾಗಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಮೊಮ್ಮಗನ ಶವ ನೋಡಿದ ಅಜ್ಜನಿಗೆ ಹೃದಯಾಘಾತ, ಒಟ್ಟಿಗೆ ಅಂತ್ಯಸಂಸ್ಕಾರ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on:Jul 10, 2024 | 11:08 AM

Share

ಮೊಮ್ಮಗನ ಶವ ಕಂಡ ಅಜ್ಜನಿಗೆ ಹೃದಯಾಘಾತ(Heart Attack)ವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಭಾರವಾದ ಮನಸ್ಸಿನಿಂದ ಇಬ್ಬರ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್ ಗ್ರಾಮದಲ್ಲಿ ನಡೆದಿದೆ. ಮೊಮ್ಮಗ ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಮನೆಗೆ ತರಲಾಯಿತು ಅದನ್ನು ಕಂಡ ಅಜ್ಜ ತಕ್ಷಣವೇ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ.

ಅಲ್ಲಿದ್ದವರು ಅವರನ್ನು ಎತ್ತಿ ಕೂರಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಲ್ಲಿ ವೈದ್ಯರು ಸಾವನ್ನಪ್ಪಿದ್ದಾಗಿ ಘೋಷಿಸಿದ್ದಾರೆ. ವೈದ್ಯರ ಪ್ರಕಾರ ಆ ಆಘಾತವನ್ನು ತಾಳಲಾರದೆ ಅವರಿಗೆ ಹೃದಯಾಘಾತವಾಗಿದೆ.

ಬಡಮಲ್ಹಾರದ ಒಂದೇ ಮನೆಯಲ್ಲಿ ಇಬ್ಬರು ಸಾವಿಗೀಡಾಗಿರೋದು ಮಾತ್ರವಲ್ಲದೇ ಇಡೀ ನಗರದಲ್ಲಿ ಶೋಕ ಮಡುಗಟ್ಟಿದೆ.

ವಾರ್ಡ್ 11 ಬಡಮಲ್ಹಾರ ನಿವಾಸಿ ವಿವೇಕ್ ತಂದೆ ಪವನ್ ಜೈನ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯುವಕ ತನ್ನ ಮನೆಯ ಹಿಂದೆ ನಿರ್ಮಿಸಿದ್ದ ಗೋದಾಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಮತ್ತಷ್ಟು ಓದಿ: Viral Video: ಫ್ಯಾಮಿಲಿ ಜತೆ ಹೋಟೆಲ್​​​ಗೆ ಬಂದ ವ್ಯಕ್ತಿಗೆ ಹೃದಯಾಘಾತ, ತುತ್ತು ಅನ್ನ ತಿನ್ನುವ ಮೊದಲೇ ಬಲಿ

ಮೃತರ ಅಜ್ಜ ಮೊಮ್ಮಗನ ಶವವನ್ನು ನೋಡಿದಾಗ ಹೃದಯಾಘಾತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಪಂಚನಾಮ ಸಿದ್ಧಪಡಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ಸಾಲಬಾಧೆಯಿಂದ ಬೇಸತ್ತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಶೋಧದ ವೇಳೆ ಪೊಲೀಸರು ಪತ್ರವನ್ನೂ ವಶಪಡಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಪತ್ರದಲ್ಲಿ ಬರೆದಿರುವ ವಿಷಯಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಮೃತ ವಿವೇಕ್‌ಗೆ ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರ ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 10 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ