AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲಕ್ಕೆ ಹೋಗಲು ಹೆಲಿಕಾಪ್ಟರ್​ ಬೇಕು, ಸಾಲ ಕೊಡಿ: ರಾಷ್ಟ್ರಪತಿಗೆ ಪತ್ರಬರೆದ ರೈತ ಮಹಿಳೆ

’ಗ್ರಾಮ ಪಂಚಾಯಿತಿಯಿಂದ ಭೋಪಾಲ್​ನ ಹಿರಿಯ ಅಧಿಕಾರಿಗಳವರೆಗೆ ಹಲವರಿಗೆ ಈ ಕುರಿತು ದೂರು ನೀಡಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದೆ‘.

ಹೊಲಕ್ಕೆ ಹೋಗಲು ಹೆಲಿಕಾಪ್ಟರ್​ ಬೇಕು, ಸಾಲ ಕೊಡಿ: ರಾಷ್ಟ್ರಪತಿಗೆ ಪತ್ರಬರೆದ ರೈತ ಮಹಿಳೆ
ರಾಷ್ಟ್ರಪತಿಗೆ ಪತ್ರ ಬರೆದಿರುವ ರೈತ ಮಹಿಳೆ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Feb 12, 2021 | 10:11 PM

Share

ಭೋಪಾಲ್: ನನ್ನ ಹೊಲಕ್ಕೆ ಹೋಗಲು ಅಕ್ಕಪಕ್ಕದವರು ದಾರಿ ಬಿಡುತ್ತಿಲ್ಲ. ಕೃಷಿ ಕೆಲಸ ಮಾಡಲು, ಕೃಷಿ ಉಪಕರಣಗಳನ್ನು ಸಾಗಿಸಲು ಮತ್ತು ದನಕರುಗಳನ್ನು ಹೊಲಕ್ಕೆ ಕೊಂಡೊಯ್ಯಲು ಆಗುತ್ತಿಲ್ಲ. ಹೀಗಾಗಿ ನನಗೆ ಹೆಲಿಕಾಪ್ಟರ್ ಖರೀದಿಸಲು ಸಾಲ ಕೊಡಿಸಿ, ಹೆಲಿಕಾಪ್ಟರ್​ ಹಾರಿಸಲು ಲೈಸೆನ್ಸ್​ ಮಾಡಿಸಿಕೊಡಿ ಎಂದು ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯ ರೈತ ಮಹಿಳೆಯೊಬ್ಬರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ವ್ಯಕ್ತಿಯೊಬ್ಬ ತನ್ನಿಬ್ಬರು ಮಕ್ಕಳ ನೆರವಿನೊಂದಿಗೆ ಹೊಲಕ್ಕೆ ಹೋಗುವ ದಾರಿ ಮುಚ್ಚಿದ ಹಿನ್ನೆಲೆಯಲ್ಲಿ ಅಗರ್ ಗ್ರಾಮದ ಬಸಂತಿ ಲಾಲ್ ಲೊಹರ್ ಎಂಬಾಕೆ ರಾಷ್ಟ್ರಪತಿಗೆ ಪತ್ರ ಬರೆಯಲು ನಿರ್ಧರಿಸಿದರು. ಪರಮ್​ಚಂದ್ ಪಾಟೀದಾರ್ ಎಂಬಾತ ತನ್ನ ಮಕ್ಕಳಾದ ಲವ ಮತ್ತು ಕುಶ ಅವರ ಚಿತಾವಣೆಯಿಂದ ನನ್ನ ಹೊಲದ ದಾರಿ ಮುಚ್ಚಿದ್ದಾನೆ. ನನಗೆ ಹೊಲಕ್ಕೆ ಹೋಗಲು, ಕೆಲಸ ಮಾಡಲು ಆಗುತ್ತಿಲ್ಲ ಎಂದು ಹಿಂದಿಯಲ್ಲಿ ಟೈಪ್ ಮಾಡಿರುವ ಪತ್ರದಲ್ಲಿ ಹೇಳಲಾಗಿದೆ.

ಗ್ರಾಮ ಪಂಚಾಯಿತಿಯಿಂದ ಭೋಪಾಲ್​ನ ಹಿರಿಯ ಅಧಿಕಾರಿಗಳವರೆಗೆ ಹಲವರಿಗೆ ಈ ಕುರಿತು ದೂರು ನೀಡಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಆಕೆ ಹೇಳಿದ್ದಾರೆ.

Letter To President

ರಾಷ್ಟ್ರಪತಿಗೆ ಬರೆದ ಪತ್ರ ತೋರಿಸುತ್ತಿರುವ ರೈತ ಮಹಿಳೆ

ಆಕೆಯ ಹೆಬ್ಬೆಟ್ಟಿನ ಗುರುತು ಮತ್ತು ಸಹಿಯೊಂದಿಗೆ ಪತ್ರ ಅಂತ್ಯಗೊಂಡಿದೆ. ಕೃಷಿ ಉಪಕರಣಗಳನ್ನು ಹೊಲಕ್ಕೆ ಸಾಗಿಸಲು ನನಗೆ ಹೆಲಿಕಾಪ್ಟರ್​ ಅಗತ್ಯಗತ್ಯವಾಗಿ ಬೇಕಾಗಿದೆ ಎಂಬ ಮನವಿಯನ್ನು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಪತ್ರವು ವೈರಲ್ ಆದ ಹಿನ್ನೆಲೆಯಲ್ಲಿ ಮಂದ್ಸೌರ್ ಜಿಲ್ಲಾಡಳಿತವು ಬಸಂತಿ ಕಾಳಜಿಯನ್ನು ಪರಿಗಣಿಸಿ, ಸ್ಥಳಕ್ಕೆ ಕಂದಾಯ ಅಧಿಕಾರಿಗಳ ತಂಡ ಕಳಿಸಿಕೊಟ್ಟಿತ್ತು. ಈ ತಂಡವು ಸ್ಥಳಪರಿಶೀಲನೆ ನಡೆಸಿದಾಗ ಬಸಂತಿ ಅವರ ಹೊಲದ ದಾರಿಗೆ ಯಾವುದೇ ನಿರ್ಬಂಧ ಇರುವುದು ಪತ್ತೆಯಾಗಲಿಲ್ಲ ಎಂದು ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ಹೇಳಿದ್ದಾರೆ.

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ | ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಡೆದು ಬಂದ ಹಾದಿ

Published On - 10:07 pm, Fri, 12 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!