AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ

ಗಂಡನ ಮನೆಯಲ್ಲಿ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಮಧ್ಯಪ್ರದೇಶದ ನರಸಿಂಗ್‌ಪುರದ ರಾನು ಅವರ ತಂದೆ ಕಿಶನ್ ಲಾಲ್ ಸಾಹು ಅವರು ನೀಡಿದ ದೂರಿನ ನಂತರ ಮಹಿಳೆ ರಾನು ಸಾಹು ಅವರನ್ನು ರಕ್ಷಿಸಲಾಗಿದೆ ಎಂದು ಜಹಾಂಗೀರಾಬಾದ್ ಮಹಿಳಾ ಠಾಣಾ ಪೊಲೀಸ್ ಠಾಣೆಯ ಉಸ್ತುವಾರಿ ಶಿಲ್ಪಾ ಕೌರವ್ ಮಾಹಿತಿ ನೀಡಿದ್ದಾರೆ.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ
ಮಹಿಳೆ-ಸಾಂದರ್ಭಿಕ ಚಿತ್ರImage Credit source: Amarujala.com
ನಯನಾ ರಾಜೀವ್
|

Updated on: Oct 06, 2024 | 8:46 AM

Share

ಗಂಡನ ಮನೆಯಲ್ಲಿ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಮಧ್ಯಪ್ರದೇಶದ ನರಸಿಂಗ್‌ಪುರದ ರಾನು ಅವರ ತಂದೆ ಕಿಶನ್ ಲಾಲ್ ಸಾಹು ಅವರು ನೀಡಿದ ದೂರಿನ ನಂತರ ಮಹಿಳೆ ರಾನು ಸಾಹು ಅವರನ್ನು ರಕ್ಷಿಸಲಾಗಿದೆ ಎಂದು ಜಹಾಂಗೀರಾಬಾದ್ ಮಹಿಳಾ ಠಾಣಾ ಪೊಲೀಸ್ ಠಾಣೆಯ ಉಸ್ತುವಾರಿ ಶಿಲ್ಪಾ ಕೌರವ್ ಮಾಹಿತಿ ನೀಡಿದ್ದಾರೆ.

ರಾಣು ಅವರು 2006ರಲ್ಲಿ ಮದುವೆಯಾಗಿದ್ದರು, 2008 ರಿಂದ ಆಕೆಯ ತಂದೆಯಾಗಲಿ ಅಥವಾ ಇನ್ಯಾರಿಗೂ ಆಕೆಯ ಮುಖವನ್ನು ನೋಡಲು ಕೂಡ ಬಿಟ್ಟಿಲ್ಲ, ಆಕೆ 16 ವರ್ಷಗಳಿಂದ ಮನೆಯಿಂದ ಹೊರಗೂ ಕಾಲಿಡಲೂ ಬಿಡದೆ ಮನೆಯಲ್ಲೇ ಬಂಧಿಯಾಗಿದ್ದಳು.

ಆಕೆಗೆ ನಿತ್ಯ ಕಿರುಕುಳ ನೀಡುತ್ತಿದ್ದರು. ರಾಣುವನ್ನು ತನ್ನ ಮಗ ಹಾಗೂ ಮಗಳಿಂದ ಕೂಡ ದೂರವಿಟ್ಟಿದ್ದಾರೆ ಎಂದು ಅವರ ತಂದೆ ಕಿಶನ್ ಲಾಲ್​ ತಿಳಿಸಿದ್ದಾರೆ.

ಮತ್ತಷ್ಟು ಓದಿ: Shocking News: 22 ವರ್ಷದ ಸೇಡು; ಸಾಲ ಮಾಡಿ ಟ್ರಕ್ ಖರೀದಿಸಿ ತಂದೆಯ ಹಂತಕರನ್ನು ಕೊಂದ ಮಗ

ರಾಣುವಿನ ಅತ್ತೆಯ ಅಕ್ಕಪಕ್ಕದ ಮನೆಯವರು ಕಿಶನ್ ಲಾಲ್ ಅವರಿಗೆ ಕರೆ ಮಾಡಿ ಆಕೆಯ ಮನೆಯಲ್ಲಿ ಪತಿ ಸೇರಿದಂತೆ ಹಲವರು ಕಿರುಕುಳ ನೀಡುತ್ತಿದ್ದಾರೆ, ಆಕೆಯ ಸ್ಥಿತಿ ತುಂಬಾ ಹದಗೆಡುತ್ತಿದೆ ನೀವು ಆಕೆಯನ್ನು ಕರೆದುಕೊಂಡು ಹೋಗಿ ಎಂದು ಕರೆ ಮಾಡಿದ್ದರು. ನಂತರ ಕಿಶನ್ ಅವರು ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಪೊಲೀಸ್ ಸಿಬ್ಬಂದಿ ತಂಡವು ಎನ್‌ಜಿಒ ಸಹಾಯದಿಂದ ರಾಣುವನ್ನು ರಕ್ಷಿಸಿತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್