AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಕುಳದ ದೂರು ನೀಡಿ ಕೆಲವೇ ದಿನಗಳಲ್ಲಿ ಯುವತಿಗೆ ಬೆಂಕಿ ಹಚ್ಚಿದ ಆರೋಪಿಯ ಮಗ

ವ್ಯಕ್ತಿಯೊಬ್ಬರು ಯುವತಿಗೆ ಕಿರುಕುಳ ನೀಡಿದ್ದಕ್ಕೆ ಆಕೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿಯ ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 7 ರಂದು ಯುವತಿ ದೂರು ನೀಡಿದ್ದರು, ಅವರು ಹೊಲದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆರೋಪಿ ಆಕೆಗೆ ಕಿರುಕುಳ ನೀಡಿದ್ದ.

ಕಿರುಕುಳದ ದೂರು ನೀಡಿ ಕೆಲವೇ ದಿನಗಳಲ್ಲಿ ಯುವತಿಗೆ ಬೆಂಕಿ ಹಚ್ಚಿದ ಆರೋಪಿಯ ಮಗ
ಆಸ್ಪತ್ರೆ Image Credit source: India Today
ನಯನಾ ರಾಜೀವ್
|

Updated on: Oct 14, 2024 | 9:27 AM

Share

ವ್ಯಕ್ತಿಯೊಬ್ಬರು ಯುವತಿಗೆ ಕಿರುಕುಳ ನೀಡಿದ್ದಕ್ಕೆ ಆಕೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿಯ ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 7 ರಂದು ಯುವತಿ ದೂರು ನೀಡಿದ್ದರು, ಅವರು ಹೊಲದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆರೋಪಿ ಆಕೆಗೆ ಕಿರುಕುಳ ನೀಡಿದ್ದ.

ಆತನನ್ನು ಬಂಧಿಸಿ ಅಕ್ಟೋಬರ್ 8ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಯುವತಿಯ ಕುಟುಂಬದವರಿಗೆ ಆತ ಬೆದರಿಕೆ ಹಾಕಿದ್ದ. ಶುಕ್ರವಾರ ಮಂಗೀಲಾಲ್ ಅವರ ಮಗ ಅರ್ಜುನ್ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಆಕೆ ತಪ್ಪಿಸಿಕೊಂಡು ಹೊರಗೆ ಬಂದಿದ್ದು, ಕೂಡಲೇ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಮಹಿಳೆಯನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಹದ ಶೇ.27ರಷ್ಟು ಭಾಗಕ್ಕೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಅರ್ಜುನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಫ್ಟ್‌ನಲ್ಲಿ ಮೈ ಮುಟ್ಟಿ ಕಿರುಕುಳ ಕೊಟ್ಟವನ ಗ್ರಹಚಾರ ಬಿಡಿಸಿದ ಮಹಿಳೆ ಹೆಚ್ಚಾಗಿ ಜನಜಂಗುಳಿ ಸ್ಥಳಗಳಲ್ಲಿ, ಬಸ್‌, ಟ್ರೈನ್‌ಗಳಲ್ಲಿ ಕೆಲ ಕಾಮುಕರು ಬೇಕು ಬೇಕಂತಲೇ ಹೆಣ್ಣು ಮಕ್ಕಳ ಮೈ ಮುಟ್ಟಿ ಅನುಚಿತವಾಗಿ ವರ್ತಿಸುತ್ತಿರುತ್ತಾರೆ. ಪ್ರತಿನಿತ್ಯ ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿದ್ದ ಒಂಟಿ ಮಹಿಳೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.

ಮತ್ತಷ್ಟು ಓದಿ: ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಇದರಿಂದ ಕೋಪಗೊಂಡ ಆ ದಿಟ್ಟ ಹೆಣ್ಣು ಆತನ ಖಾಸಗಿ ಅಂಗಕ್ಕೆ ಜಾಡಿಸಿ ಒದ್ದು ತಕ್ಕ ಶಾಸ್ತಿ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಆ ಮಹಿಳೆಯ ಈ ದಿಟ್ಟ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಈ ಕುರಿತ ವಿಡಿಯೋವನ್ನು TheFigen_ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ತುಂಬಾ ಪರಿಪೂರ್ಣವಾದ ಕಿಕ್‌! ಮಹಿಳೆಯರೆಲ್ಲರೂ ಇದೇ ರೀತಿ ತಮ್ಮ ಸ್ವ-ರಕ್ಷಣೆಯನ್ನು ಮಾಡಿಕೊಳ್ಳಬೇಕು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಲಿಫ್ಟ್‌ ಒಳಗೆ ಪ್ರವೇಶಿಸಿದ ಒಂಟಿ ಮಹಿಳೆಯ ಮೈ ಮುಟ್ಟಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈತತನ್ನು ಹೀಗೆ ಬಿಟ್ರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರಲಾರದು ಎನ್ನುತ್ತಾ, ಆ ದಿಟ್ಟ ಮಹಿಳೆ, ಆತ ಇನ್ನೊಂದು ಬಾರಿ ಮೈ ಮುಟ್ಟಲು ಯತ್ನಿಸಿದಾಗ ಆತನ ಕಪಾಳಕ್ಕೆ ಬಾರಿಸಿ, ಖಾಸಗಿ ಅಂಗಕ್ಕೆ ಸರಿಯಾಗಿ ಒದ್ದು ಬುದ್ಧಿ ಕಲಿಸಿದ್ದಾಳೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ