AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಯರ್ ಎದುರೇ ಕಂದಾಯ ಅಧಿಕಾರಿಗೆ ಫೋನ್ ಮಾಡಿ ಭ್ರಷ್ಟಾಚಾರವನ್ನು ಬಯಲಿಗೆಳೆದ ಯುವಕ

ಮಧ್ಯಪ್ರದೇಶದ ಮೊರೆನಾದಲ್ಲಿ ಮೇಯರ್ ಮುಂದೆ ಯುವಕನೊಬ್ಬ ಕಂದಾಯ ಅಧಿಕಾರಿಗಳು ತನ್ನ ಬಳಿ ಲಂಚ ಕೇಳಿದ್ದಾರೆ, ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಿದ್ದ. ಆದರೆ, ಆ ಮೇಯರ್ ಈ ಆರೋಪಕ್ಕೆ ಸಾಕ್ಷಿ ಏನಿದೆ? ಎಂದು ಕೇಳಿದ್ದರು. ಕೊನೆಗೆ ಮೇಯರ್ ಎದುರಲ್ಲೇ ಕಂದಾಯ ಇಲಾಖೆ ಸಿಬ್ಬಂದಿಗೆ ಫೋನ್ ಮಾಡಿದ ಆ ಯುವಕ ಅವರ ಲಂಚಬಾಕತನವನ್ನು ಬಯಲು ಮಾಡಿದ್ದಾರೆ. ಈ ಭ್ರಷ್ಟಾಚಾರವನ್ನು ಕಂಡು ಮೇಯರ್ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.

ಮೇಯರ್ ಎದುರೇ ಕಂದಾಯ ಅಧಿಕಾರಿಗೆ ಫೋನ್ ಮಾಡಿ ಭ್ರಷ್ಟಾಚಾರವನ್ನು ಬಯಲಿಗೆಳೆದ ಯುವಕ
Madhya Pradesh Bribe Case
ಸುಷ್ಮಾ ಚಕ್ರೆ
|

Updated on: Nov 17, 2025 | 4:49 PM

Share

ಮೊರೆನಾ, ನವೆಂಬರ್ 17: ಮಧ್ಯಪ್ರದೇಶದ (Madhya Pradesh) ಮೊರೆನಾದ ಮೇಯರ್ ಮುಂದೆ ಸ್ಥಳೀಯ ನಿವಾಸಿಯಿಂದ ಲಂಚ ಕೇಳುತ್ತಿದ್ದ ಕಂದಾಯ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಒಂದು ದೊಡ್ಡ ಹಗರಣ ಬೆಳಕಿಗೆ ಬಂದಿದೆ. ಕಟ್ಟಡಕ್ಕೆ ಲೈಸೆನ್ಸ್ ನೀಡಲು ಪುರಸಭೆ ಮತ್ತು ಕಂದಾಯ ಇಲಾಖೆಯ ನೌಕರರು ಲಂಚ ಸ್ವೀಕರಿಸಿದ್ದಾರೆ ಎಂಬ ಗಂಭೀರ ಆರೋಪ ಮೇಯರ್ ಎದುರಲ್ಲೇ ಸಾಬೀತಾಗಿದೆ. ಪಂಕಜ್ ರಾಥೋಡ್ ಎಂಬ ಯುವಕ ತನ್ನ ಜಾಣತನದಿಂದ ಮೇಯರ್ ಮುಂದೆಯೇ ಕಂದಾಯ ಇಲಾಖೆಯ ಸಿಬ್ಬಂದಿಗೆ ಫೋನ್ ಮಾಡಿ ಅವರ ಕೃತ್ಯಗಳನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾನೆ.

ನೌಕರರೊಂದಿಗಿನ ಈ ಫೋನ್ ಸಂಭಾಷಣೆಯ ಸಮಯದಲ್ಲಿ ಮೇಯರ್ ಮುಂದೆಯೇ ಇಡೀ ಲಂಚ ಹಗರಣ ಬಯಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಆ ಯುವಕನ ಜಾಣತನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ ಮತ್ತು ಸರ್ಕಾರಿ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಕಂದಾಯ ಇಲಾಖೆಯ ಅಧಿಕಾರಿ ಸೇರಿದಂತೆ ಪುರಸಭೆಯ ನಿರ್ಮಾಣ ಸಂಸ್ಥೆಗೆ ಪರವಾನಗಿ ನೀಡುವಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳು ತಮ್ಮಿಂದ ಲಂಚ ಕೇಳಿದ್ದಾರೆ ಎಂದು ಪಂಕಜ್ ರಾಥೋಡ್ ಆರೋಪಿಸಿದ್ದರು. ಆದರೆ, ಇದಕ್ಕೆ ಸಾಕ್ಷಿ ಏನಿದೆ? ಎಂದು ಮೇಯರ್ ಕೇಳಿದ್ದರು. ಈ ವೇಳೆ ಮೇಯರ್ ಮುಂದೆಯೇ ಆ ಅಧಿಕಾರಿಯೊಂದಿಗೆ ಮಾತನಾಡಿದ ಪಂಕಜ್ ಯಾರಿಗೆ ಹಣ ನೀಡಬೇಕು, ಹೇಗೆ ನೀಡಬೇಕು, ಎಷ್ಟು ಕೊಡಬೇಕು? ಎಂದು ಆ ಅಧಿಕಾರಿಯಿಂದಲೇ ಮಾಹಿತಿ ಪಡೆದಿದ್ದಾನೆ. ಆ ಅಧಿಕಾರಿ ಹೇಳಿದ ಲೆಕ್ಕ ನೋಡಿ ಮೇಯರ್ ಕೂಡ ಶಾಕ್ ಆಗಿ ಕುಳಿತಿದ್ದಾರೆ.

ಇದನ್ನೂ ಓದಿ: ಕೊಡು ನನ್ ಮಾಮೂಲಿ 1000 ರೂ: ರಾಮನಗರ ಆರ್​ಟಿಒ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ, ವಿಡಿಯೋ ವೈರಲ್

ಪಂಕಜ್ ತನ್ನ ಜಮೀನನ್ನು ವರ್ಗಾಯಿಸಿ ಕಟ್ಟಡ ಪರವಾನಗಿಗಳನ್ನು ಪಡೆಯಬೇಕಾಗಿತ್ತು. ಇದಕ್ಕಾಗಿ, ಅವರು ಪುರಸಭೆಯ ಗುಮಾಸ್ತರನ್ನು ಸಂಪರ್ಕಿಸಿದರು. ಆಗ ಅವರ ಬಳಿ ಲಂಚ ಕೇಳಲಾಯಿತು. ಹಣವನ್ನು ಪಾವತಿಸಿದರೂ ಅವರ ಕೆಲಸ ಆಗಲಿಲ್ಲ. ಆಗ ಅವರು ಮೇಯರ್ ಬಳಿಗೆ ಹೋಗಿ ಸತ್ಯವನ್ನು ಬಹಿರಂಗಪಡಿಸಿದರು. ಆತನ ಆರೋಪವನ್ನು ಮೇಯರ್ ಒಪ್ಪಲಿಲ್ಲ.

ಆಗ ಆ ಯುವಕ ಅಧಿಕಾರಿಗಳಿಗೆ ಕರೆ ಮಾಡಿ ಮೇಯರ್‌ ಎದುರಲ್ಲೇ ದುಡ್ಡಿನ ಲೆಕ್ಕಾಚಾರದ ಬಗ್ಗೆ ಪ್ರಸ್ತಾಪಿಸಿದನು. ಆಗ ಆ ಅಧಿಕಾರಿ ಆ ಯುವಕ ಮೇಯರ್ ಜೊತೆಗಿದ್ದಾನೆ ಎಂಬುದರ ಅರಿವಿಲ್ಲದೆ ಯಾರಿಗೆ ಎಷ್ಟು ಲಂಚ ಕೊಡಬೇಕೆಂಬುದನ್ನು ವಿವರಿಸಿದನು. ಇದನ್ನು ಕೇಳಿ ಮೇಯರ್ ಕೂಡ ಆಘಾತಕ್ಕೊಳಗಾದರು.

ಇದನ್ನೂ ಓದಿ: ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ: ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮೇಯರ್, ಈ ವಿಷಯದಲ್ಲಿ ನಾನು ತಕ್ಷಣ ಆಯುಕ್ತರಿಗೆ ವರದಿಯನ್ನು ನೀಡಲು ಸೂಚಿಸಿದ್ದೇನೆ ಮತ್ತು ತಪ್ಪಿತಸ್ಥ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದೇನೆ ಎಂದು ಮೊರೆನಾ ಮೇಯರ್ ಶಾರದಾ ಸೋಲಂಕಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ