AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ

ಸಂಪ್ರದಾಯದ ಹೆಸರಿನಲ್ಲಿ ಪೋಷಕರೇ ಹೆಣ್ಣುಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ
ಯುವತಿImage Credit source: Shutterstock
Follow us
ನಯನಾ ರಾಜೀವ್
|

Updated on: Sep 18, 2024 | 10:59 AM

ಮಧ್ಯಪ್ರದೇಶದಲ್ಲಿ ಪದ್ಧತಿ ಹೆಸರಿನಲ್ಲಿ ಹೆಣ್ಣುಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡುವ ಸಂಪ್ರದಾಯ ಇನ್ನೂ ಕೂಡ ಚಾಲ್ತಿಯಲ್ಲಿದೆ. ಯುವತಿಯರನ್ನು ಹರಾಜಿನಲ್ಲಿ ಮಾರಾಟ ಮಾಡಲಾಗುತ್ತದೆ, ಜೀ ನ್ಯೂಸ್​ ಈ ಕುರಿತು ವರದಿ ಮಾಡಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಪೊಲೀಸ್​ ಅಧಿಕಾರಿಗಳು ಸೇರಿದಂತೆ ಹಲವರಿಗೆ ಈ ವಿಚಾರ ತಿಳಿದಿದ್ದರೂ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಜಗಡಾ ನಾಥರಾ ಎನ್ನುವ ಸಂಪ್ರದಾಯದಂತೆ ಮಕ್ಕಳನ್ನು ಹರಾಜು ಹಾಕಲಾಗುತ್ತದೆ.

ಮಗಳಿಗೆ ಬಿಡ್ಡಿಂಗ್ ನಡೆದು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಮಗಳನ್ನು ಒಪ್ಪಿಸಲಾಗುತ್ತದೆ.ಈ ಗ್ರಾಮದಲ್ಲಿ ಮದುವೆಯಾದ ಅಥವಾ ಮದುವೆಯಾಗಲಿರುವ ಎಷ್ಟೋ ಹೆಣ್ಣು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: Viral: ಗಂಡ ಪ್ರತಿದಿನ ಸ್ನಾನ ಮಾಡೊಲ್ಲ, ಮದುವೆಯಾದ 40 ದಿನಕ್ಕೆ ಡಿವೋರ್ಸ್‌ ಕೇಳಿದ ಮಹಿಳೆ

ಈ ಪದ್ಧತಿಯಲ್ಲಿ ಮೊದಲು ಮಹಿಳೆ ಬಾಲ್ಯವಿವಾಹಕ್ಕೆ ಒಳಗಾಗುತ್ತಾಳೆ. ನಂತರ ಬಾಲಕಿಯನ್ನು ದೈಹಿಕವಾಗಿ ನಿಂದಿಸಿ ಹಲವು ಮಂದಿ ಬಿಟ್ಟು ಹೋಗಿದ್ದಾರೆ, ಆದರೆ ಈ ಹೊರತಾಗಿಯೂ ಪತ್ನಿ ಆತನಿಗೆ ವಿಚ್ಛೇದನ ನೀಡುವುದಿಲ್ಲ.

ವಿಚ್ಛೇದನಕ್ಕಾಗಿ, ಹುಡುಗಿಯ ತಂದೆ ಆಕೆಯ ಅತ್ತೆಗೆ ದೊಡ್ಡ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಹಣಕ್ಕಾಗಿ, ಹುಡುಗಿಯ ತಂದೆ ಮಗಳನ್ನು ಹರಾಜು ಹಾಕುತ್ತಾನೆ.

ರಾಜ್‌ಗಢದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನ ಪತ್ನಿಯನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿ ಸಿಕ್ಕಿಬಿದ್ದಿದ್ದ. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಮಧ್ಯಪ್ರದೇಶ ಸರ್ಕಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್