AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ

ಸಂಪ್ರದಾಯದ ಹೆಸರಿನಲ್ಲಿ ಪೋಷಕರೇ ಹೆಣ್ಣುಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ
ಯುವತಿImage Credit source: Shutterstock
ನಯನಾ ರಾಜೀವ್
|

Updated on: Sep 18, 2024 | 10:59 AM

Share

ಮಧ್ಯಪ್ರದೇಶದಲ್ಲಿ ಪದ್ಧತಿ ಹೆಸರಿನಲ್ಲಿ ಹೆಣ್ಣುಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡುವ ಸಂಪ್ರದಾಯ ಇನ್ನೂ ಕೂಡ ಚಾಲ್ತಿಯಲ್ಲಿದೆ. ಯುವತಿಯರನ್ನು ಹರಾಜಿನಲ್ಲಿ ಮಾರಾಟ ಮಾಡಲಾಗುತ್ತದೆ, ಜೀ ನ್ಯೂಸ್​ ಈ ಕುರಿತು ವರದಿ ಮಾಡಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಪೊಲೀಸ್​ ಅಧಿಕಾರಿಗಳು ಸೇರಿದಂತೆ ಹಲವರಿಗೆ ಈ ವಿಚಾರ ತಿಳಿದಿದ್ದರೂ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಜಗಡಾ ನಾಥರಾ ಎನ್ನುವ ಸಂಪ್ರದಾಯದಂತೆ ಮಕ್ಕಳನ್ನು ಹರಾಜು ಹಾಕಲಾಗುತ್ತದೆ.

ಮಗಳಿಗೆ ಬಿಡ್ಡಿಂಗ್ ನಡೆದು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಮಗಳನ್ನು ಒಪ್ಪಿಸಲಾಗುತ್ತದೆ.ಈ ಗ್ರಾಮದಲ್ಲಿ ಮದುವೆಯಾದ ಅಥವಾ ಮದುವೆಯಾಗಲಿರುವ ಎಷ್ಟೋ ಹೆಣ್ಣು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: Viral: ಗಂಡ ಪ್ರತಿದಿನ ಸ್ನಾನ ಮಾಡೊಲ್ಲ, ಮದುವೆಯಾದ 40 ದಿನಕ್ಕೆ ಡಿವೋರ್ಸ್‌ ಕೇಳಿದ ಮಹಿಳೆ

ಈ ಪದ್ಧತಿಯಲ್ಲಿ ಮೊದಲು ಮಹಿಳೆ ಬಾಲ್ಯವಿವಾಹಕ್ಕೆ ಒಳಗಾಗುತ್ತಾಳೆ. ನಂತರ ಬಾಲಕಿಯನ್ನು ದೈಹಿಕವಾಗಿ ನಿಂದಿಸಿ ಹಲವು ಮಂದಿ ಬಿಟ್ಟು ಹೋಗಿದ್ದಾರೆ, ಆದರೆ ಈ ಹೊರತಾಗಿಯೂ ಪತ್ನಿ ಆತನಿಗೆ ವಿಚ್ಛೇದನ ನೀಡುವುದಿಲ್ಲ.

ವಿಚ್ಛೇದನಕ್ಕಾಗಿ, ಹುಡುಗಿಯ ತಂದೆ ಆಕೆಯ ಅತ್ತೆಗೆ ದೊಡ್ಡ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಹಣಕ್ಕಾಗಿ, ಹುಡುಗಿಯ ತಂದೆ ಮಗಳನ್ನು ಹರಾಜು ಹಾಕುತ್ತಾನೆ.

ರಾಜ್‌ಗಢದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನ ಪತ್ನಿಯನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿ ಸಿಕ್ಕಿಬಿದ್ದಿದ್ದ. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಮಧ್ಯಪ್ರದೇಶ ಸರ್ಕಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ