AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೈಕ್ ಸವಾರನಿಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಡಿಕ್ಕಿ, ಗಂಭೀರ ಗಾಯ

ಕಾಂಗ್ರೆಸ್​ ನಾಯಕರ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ರಾಜ್​ಗಢದಲ್ಲಿ ನಡೆದಿದೆ. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ.

Video: ಬೈಕ್ ಸವಾರನಿಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಡಿಕ್ಕಿ, ಗಂಭೀರ ಗಾಯ
ದಿಗ್ವಿಜಯ ಸಿಂಗ್ ಕಾರು ಅಪಘಾತ
ನಯನಾ ರಾಜೀವ್
|

Updated on: Mar 10, 2023 | 9:59 AM

Share

ಕಾಂಗ್ರೆಸ್​ ನಾಯಕರ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ರಾಜ್​ಗಢದಲ್ಲಿ ನಡೆದಿದೆ. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ. ಕಾರಿಗೆ ಡಿಕ್ಕಿಯಾದ ನಂತರ ಬೈಕ್ ಸವಾರ ಹಾರಿ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ದಿಗ್ವಿಜಯ್ ಸಿಂಗ್ ಕಾರಿನಿಂದ ಕೆಳಗಿಳಿದು ಗಾಯಗೊಂಡ ಯುವಕನನ್ನು ಜಿರಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ, ಯುವಕನನ್ನು ಭೇಟಿ ಮಾಡಲು ದಿಗ್ವಿಜಯ್ ಸಿಂಗ್ ಸ್ವತಃ ಜಿರಾಪುರ್ ಆಸ್ಪತ್ರೆಗೆ ಬಂದಿದ್ದರು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಭೋಪಾಲ್‌ಗೆ ಕಳುಹಿಸಲಾಗಿದೆ.

ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ಈ ಘಟನೆ ಜಿರಾಪುರದಲ್ಲಿ ನಡೆದಿದೆ, ಆದರೆ ದೇವರ ದಯೆಯಿಂದ ಯುವಕನಿಗೆ ಹೆಚ್ಚು ಗಾಯವಾಗಿಲ್ಲ. ಅವರನ್ನು ಚಿಕಿತ್ಸೆಗಾಗಿ ಭೋಪಾಲ್‌ಗೆ ಕಳುಹಿಸಲಾಗಿದೆ. ಸಾಕಷ್ಟು ಜನಸಂದಣಿ ಇತ್ತು, ಅದೇ ವೇಳೆಗೆ ಬೈಕ್ ಸವಾರ ಏಕಾಏಕಿ ಕಾರಿನ ಮುಂದೆ ಬಂದಿದ್ದಾನೆ. ಚಾಲಕ ನಿಯಂತ್ರಣ ತಪ್ಪಿ ಗುದ್ದಿದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಗಾಯಾಳುಗಳ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಬೈಕ್ ಚಾಲಕ ಬೆಂಗಾವಲು ಪಡೆಯ ಮುಂದೆ ಬಂದರು ವಾಸ್ತವವಾಗಿ, ದಿಗ್ವಿಜಯ್ ಸಿಂಗ್ ಅವರು ಗುರುವಾರ ಒಂದು ದಿನದ ಪ್ರವಾಸಕ್ಕೆಂದು ರಾಜ್‌ಗಢ ತಲುಪಿದ್ದರು, ಅಲ್ಲಿಂದ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಕಾಶ್ ಪುರೋಹಿತ್ ಅವರ ಮನೆಗೆ ಕೊಡಕ್ಯಾ ಗ್ರಾಮಕ್ಕೆ ತೆರಳಿ ಸಾಂತ್ವನ ಹೇಳಿದರು. ಸ್ವಲ್ಪ ಹೊತ್ತಿನ ನಂತರ ಅವರು ತಮ್ಮ ಕಪ್ಪು ಬಣ್ಣದ ಕಾರಿನಲ್ಲಿ ರಾಜಗಢಕ್ಕೆ ಹೊರಟರು.

ಅದೇ ಸಮಯದಲ್ಲಿ ಜಿರಾಪುರ ಬಳಿಯ ವಿಜಯ್ ಕಾನ್ವೆಂಟ್ ಶಾಲೆಯ ಮುಂದೆ ಇವರ ಬೆಂಗಾವಲು ವಾಹನ ಹೊರಡುತ್ತಿದ್ದಾಗ ಏಕಾಏಕಿ ಬೈಕ್ ಸವಾರನೊಬ್ಬ ಬೆಂಗಾವಲು ವಾಹನದ ಮುಂದೆ ಬಂದಿದ್ದಾನೆ, ವೇಗವಾಗಿ ಬಂದ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು.

ಯುವಕನಿಗೆ ಪ್ರಥಮ ಚಿಕಿತ್ಸೆ ನೀಡಿದ ನಂತರ ವೈದ್ಯರು ಆತನನ್ನು ಭೋಪಾಲ್‌ಗೆ ಕಳುಹಿಸಿದ್ದಾರೆ. ವ್ಯಕ್ತಿಯ ದೂರಿನ ಮೇರೆಗೆ ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಪಡಿಸಿಕೊಂಡಿದ್ದಾರೆ

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ