AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೈಕ್ ಸವಾರನಿಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಡಿಕ್ಕಿ, ಗಂಭೀರ ಗಾಯ

ಕಾಂಗ್ರೆಸ್​ ನಾಯಕರ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ರಾಜ್​ಗಢದಲ್ಲಿ ನಡೆದಿದೆ. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ.

Video: ಬೈಕ್ ಸವಾರನಿಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಡಿಕ್ಕಿ, ಗಂಭೀರ ಗಾಯ
ದಿಗ್ವಿಜಯ ಸಿಂಗ್ ಕಾರು ಅಪಘಾತ
ನಯನಾ ರಾಜೀವ್
|

Updated on: Mar 10, 2023 | 9:59 AM

Share

ಕಾಂಗ್ರೆಸ್​ ನಾಯಕರ ದಿಗ್ವಿಜಯ ಸಿಂಗ್ ಅವರ ಎಸ್​ಯುವಿ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ರಾಜ್​ಗಢದಲ್ಲಿ ನಡೆದಿದೆ. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ. ಕಾರಿಗೆ ಡಿಕ್ಕಿಯಾದ ನಂತರ ಬೈಕ್ ಸವಾರ ಹಾರಿ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ದಿಗ್ವಿಜಯ್ ಸಿಂಗ್ ಕಾರಿನಿಂದ ಕೆಳಗಿಳಿದು ಗಾಯಗೊಂಡ ಯುವಕನನ್ನು ಜಿರಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ, ಯುವಕನನ್ನು ಭೇಟಿ ಮಾಡಲು ದಿಗ್ವಿಜಯ್ ಸಿಂಗ್ ಸ್ವತಃ ಜಿರಾಪುರ್ ಆಸ್ಪತ್ರೆಗೆ ಬಂದಿದ್ದರು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಭೋಪಾಲ್‌ಗೆ ಕಳುಹಿಸಲಾಗಿದೆ.

ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ಈ ಘಟನೆ ಜಿರಾಪುರದಲ್ಲಿ ನಡೆದಿದೆ, ಆದರೆ ದೇವರ ದಯೆಯಿಂದ ಯುವಕನಿಗೆ ಹೆಚ್ಚು ಗಾಯವಾಗಿಲ್ಲ. ಅವರನ್ನು ಚಿಕಿತ್ಸೆಗಾಗಿ ಭೋಪಾಲ್‌ಗೆ ಕಳುಹಿಸಲಾಗಿದೆ. ಸಾಕಷ್ಟು ಜನಸಂದಣಿ ಇತ್ತು, ಅದೇ ವೇಳೆಗೆ ಬೈಕ್ ಸವಾರ ಏಕಾಏಕಿ ಕಾರಿನ ಮುಂದೆ ಬಂದಿದ್ದಾನೆ. ಚಾಲಕ ನಿಯಂತ್ರಣ ತಪ್ಪಿ ಗುದ್ದಿದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಗಾಯಾಳುಗಳ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಬೈಕ್ ಚಾಲಕ ಬೆಂಗಾವಲು ಪಡೆಯ ಮುಂದೆ ಬಂದರು ವಾಸ್ತವವಾಗಿ, ದಿಗ್ವಿಜಯ್ ಸಿಂಗ್ ಅವರು ಗುರುವಾರ ಒಂದು ದಿನದ ಪ್ರವಾಸಕ್ಕೆಂದು ರಾಜ್‌ಗಢ ತಲುಪಿದ್ದರು, ಅಲ್ಲಿಂದ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಕಾಶ್ ಪುರೋಹಿತ್ ಅವರ ಮನೆಗೆ ಕೊಡಕ್ಯಾ ಗ್ರಾಮಕ್ಕೆ ತೆರಳಿ ಸಾಂತ್ವನ ಹೇಳಿದರು. ಸ್ವಲ್ಪ ಹೊತ್ತಿನ ನಂತರ ಅವರು ತಮ್ಮ ಕಪ್ಪು ಬಣ್ಣದ ಕಾರಿನಲ್ಲಿ ರಾಜಗಢಕ್ಕೆ ಹೊರಟರು.

ಅದೇ ಸಮಯದಲ್ಲಿ ಜಿರಾಪುರ ಬಳಿಯ ವಿಜಯ್ ಕಾನ್ವೆಂಟ್ ಶಾಲೆಯ ಮುಂದೆ ಇವರ ಬೆಂಗಾವಲು ವಾಹನ ಹೊರಡುತ್ತಿದ್ದಾಗ ಏಕಾಏಕಿ ಬೈಕ್ ಸವಾರನೊಬ್ಬ ಬೆಂಗಾವಲು ವಾಹನದ ಮುಂದೆ ಬಂದಿದ್ದಾನೆ, ವೇಗವಾಗಿ ಬಂದ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು.

ಯುವಕನಿಗೆ ಪ್ರಥಮ ಚಿಕಿತ್ಸೆ ನೀಡಿದ ನಂತರ ವೈದ್ಯರು ಆತನನ್ನು ಭೋಪಾಲ್‌ಗೆ ಕಳುಹಿಸಿದ್ದಾರೆ. ವ್ಯಕ್ತಿಯ ದೂರಿನ ಮೇರೆಗೆ ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಪಡಿಸಿಕೊಂಡಿದ್ದಾರೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!