AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ದರೋಡೆಕೋರರು ನಡುರಸ್ತೆಯಲ್ಲಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ
ಗರ್ಭಿಣಿ
Follow us
ನಯನಾ ರಾಜೀವ್
|

Updated on: May 05, 2024 | 11:08 AM

ದರೋಡೆ ಮಾಡಲು ಬಂದವರು ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿ(Pregnant)ಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಧೋಟಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. . ಕಾಜರವಾರದ ನಿವಾಸಿ ಶುಭಂ ಚೌಧರಿ ಅವರು ಪತ್ನಿ ರೇಷ್ಮಾ ಹಾಗೂ ಒಂದೂವರೆ ವರ್ಷದ ಪುತ್ರನೊಂದಿಗೆ ವಾಕಿಂಗ್‌ಗೆ ತೆರಳಿದ್ದರು.

ಪಟ್ಬಾಬಾದಿಂದ ಹಿಂದಿರುಗಿದ ನಂತರ, ಮದರ್ ತೆರೆಸಾ ನಗರದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಲು ಬೊಲೆರೋ ಕಾರಿನಲ್ಲಿ ಹೊರಟಿದ್ದಾಗ, ದಾರಿಯಲ್ಲಿ 3-4 ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಆಗ ಪ್ರತಿಭಟಿಸಲು ಮುಂದಾದ ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ಪತಿಯನ್ನೂ ಥಳಿಸಿದ್ದಾರೆ ಶುಭಂ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಶುಭಂ ತಲೆಗೆ ಇಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಆತನ ಪತ್ನಿಯ ಮಂಗಲಸೂತ್ರವನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಮಾಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರ ಪ್ರಕಾರ, ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ:ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?

ಘಟನೆಯ ಬಗ್ಗೆ ಶುಭಂ ಹಲವು ಮಂದಿಗೆ ಮಾಹಿತಿ ನೀಡಿದರು, ಅವರು ಸ್ಥಳಕ್ಕೆ ತಲುಪಿದರು ರೇಷ್ಮಾ ಅವರನ್ನು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಡರಾತ್ರಿಯವರೆಗೂ ಘಟನೆಯ ತನಿಖೆಯಲ್ಲಿ ನಿರತರಾಗಿದ್ದರು.

ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮಧೋಳ ಠಾಣೆ ಪ್ರಭಾರಿ ವಿಪಿನ್ ತಾಮ್ರಕರ ತಿಳಿಸಿದ್ದಾರೆ. ದುಷ್ಕರ್ಮಿಗಳ ಜೀಪ್‌ಗೆ ಶುಭಂ ಅವರ ಜೀಪ್ ಡಿಕ್ಕಿ ಹೊಡೆದಿದ್ದು, ಬಳಿಕ ವಿವಾದ ವಿಕೋಪಕ್ಕೆ ತಿರುಗಿ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದರೆ ರೇಷ್ಮಾ ಸಾವಿಗೆ ಕಾರಣ ತಿಳಿಯಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ