AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mobile Ban in Temples: ತಮಿಳುನಾಡಿನ ದೇವಸ್ಥಾನಗಳಲ್ಲಿ ಇನ್ನುಮುಂದೆ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ

ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು.

Mobile Ban in Temples: ತಮಿಳುನಾಡಿನ ದೇವಸ್ಥಾನಗಳಲ್ಲಿ ಇನ್ನುಮುಂದೆ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ
ತಮಿಳುನಾಡಿನ ದೇವಸ್ಥಾನ
TV9 Web
| Updated By: ಸುಷ್ಮಾ ಚಕ್ರೆ|

Updated on:Dec 03, 2022 | 11:16 AM

Share

ಚೆನ್ನೈ: ದೇವಸ್ಥಾನಗಳ ಒಳಗೆ ‘ಶುದ್ಧತೆ ಮತ್ತು ಧಾರ್ಮಿಕ ಪಾವಿತ್ರ್ಯತೆ’ಯನ್ನು ಕಾಪಾಡಿಕೊಳ್ಳಲು ತಮಿಳುನಾಡಿನ (Tamil Nadu) ಎಲ್ಲಾ ದೇವಾಲಯಗಳಲ್ಲಿ ಇನ್ನುಮುಂದೆ ಮೊಬೈಲ್ ಫೋನ್ (Mobiles) ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ (Madras High Court) ಶುಕ್ರವಾರ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ. ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ನಿಷೇಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಎಂ. ಸೀತಾರಾಮನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ. ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು.

ಇದು ಆಗಮಗಳಿಗೆ ವಿರುದ್ಧವಾಗಿರುವುದರಿಂದ ತಿರುಚೆಂದೂರು ದೇವಸ್ಥಾನದೊಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ್, ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಲು ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು. ಫೋನ್ ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಈ ಅತಿಥಿಯ ಆಗಮನದ ನಂತರವೇ ಮಂಗಳಾರತಿ ನಡೆಯುತ್ತದೆ

ಮೊಬೈಲ್ ಫೋನ್‌ಗಳ ಮೇಲಿನ ನಿಷೇಧವನ್ನು ದೇಶಾದ್ಯಂತ ಹಲವು ದೇವಾಲಯಗಳಲ್ಲಿ (ಉದಾಹರಣೆಗೆ: ಗುರುವಾಯೂರ್‌ನಲ್ಲಿರುವ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ) ಪರಿಚಯಿಸಲಾಗಿದೆ. ಈ ನಿಯಮವನ್ನು ಆ ದೇವಾಲಯಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.

ತಿರುಚೆಂದೂರಿನ ದೇವಾಲಯದ ಅಧಿಕಾರಿಗಳು ಈಗಾಗಲೇ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ನಿಷೇಧ, ಯೋಗ್ಯವಾದ ಡ್ರೆಸ್ ಕೋಡ್ ಮತ್ತು ಇತರರಿಗೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇದನ್ನು ಅನುಸರಿಸಲು ಕೋರ್ಟ್​ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Sat, 3 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!