AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾ ಫೌಂಡೇಶನ್​ ಸ್ಮಶಾನ ನಿರ್ಮಿಸುವುದರ ವಿರುದ್ಧ ಹೈಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಇಶಾ ಫೌಂಡೇಶನ್ ಸ್ಮಶಾನ ನಿರ್ಮಾಣದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆದರೆ, ಇಕ್ಕರೈ ಬೊಲುವಾಂಪಟ್ಟಿ ಗ್ರಾಮ ಪಂಚಾಯತ್‌ನ ಆದೇಶಗಳ ವಿರುದ್ಧ ಸಲ್ಲಿಸಲಾದ 3 ರಿಟ್ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಇನ್ನೂ ನಡೆಸುತ್ತಿದೆ. ಲೈಸೆನ್ಸ್ ಪಡೆದ ಪ್ರದೇಶದಲ್ಲಿ ಮಾತ್ರ ಅಂತ್ಯಕ್ರಿಯೆಗಳನ್ನು ನಡೆಸಬೇಕೆಂದು ಅದು ಆದೇಶಿಸಿದೆ.

ಇಶಾ ಫೌಂಡೇಶನ್​ ಸ್ಮಶಾನ ನಿರ್ಮಿಸುವುದರ ವಿರುದ್ಧ ಹೈಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ
Isha Foundation SadguruImage Credit source: isha foundation
ಸುಷ್ಮಾ ಚಕ್ರೆ
|

Updated on: Jan 28, 2026 | 7:09 PM

Share

ಚೆನ್ನೈ, ಜನವರಿ 28: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ (Isha Foundation) ನಿರ್ಮಿಸುತ್ತಿರುವ ಗ್ಯಾಸ್ ಆಧಾರಿತ ಸ್ಮಶಾನದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆ ಸ್ಮಶಾನವು ಸಾಮಾಜಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುತ್ತದೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇಶಾ ಫೌಂಡೇಶನ್ ಸ್ಮಶಾನ ನಿರ್ಮಾಣ ಮಾಡುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇಶಾ ಫೌಂಡೇಶನ್​ನಿಂದ ಕಾಲಭೈರವ ಧಗನ ಮಂಟಪದ ನಿರ್ಮಾಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ತಮಿಳುನಾಡು ಗ್ರಾಮ ಪಂಚಾಯತ್ ನಿಯಮಗಳ ಅಡಿಯಲ್ಲಿ ವಸತಿ ಪ್ರದೇಶ ಅಥವಾ ಕುಡಿಯುವ ನೀರು ಸರಬರಾಜು ಇರುವ ಪ್ರದೇಶದಿಂದ ಸುಮಾರು 90 ಮೀಟರ್ ಒಳಗೆ ಸ್ಮಶಾನಕ್ಕೆ ಪರವಾನಗಿ ನೀಡುವುದಕ್ಕೆ ಯಾವುದೇ ನಿಷೇಧವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠ ಹೇಳಿದೆ. ನಿಯಮಗಳ ಪ್ರಕಾರ, ಗ್ರಾಮ ಪಂಚಾಯತ್‌ನಿಂದ ಪರವಾನಗಿ ಪಡೆಯುವುದು ಮಾತ್ರ ಅಗತ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಷನ್​ಗೆ ಬಿಗ್​ ರಿಲೀಫ್​: ಶೋಕಾಸ್‌ ನೋಟಿಸ್‌ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ

ಸೂಕ್ತ ಅನುಮತಿ ಪಡೆದಿದ್ದರೆ ಸ್ಮಶಾನ ನಿರ್ಮಿಸುವುದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಗ್ಯಾಸ್ ಆಧಾರಿತ ಸ್ಮಶಾನವು ಪರಿಸರದ ಮೇಲೆ ಕಡಿಮೆ ಪರಿಣಾಮ ಬೀರುವ ಆಧುನಿಕ ಸೌಲಭ್ಯವಾಗಿರುವುದರಿಂದ, ಅದು ಸಮಾಜಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಇಕಾರೈ ಪೊಲುವಂಪಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮೀಣ ಪಂಚಾಯತ್‌ಗಳ ಸಹಾಯಕ ನಿರ್ದೇಶಕರು ಮತ್ತು ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಯಮತ್ತೂರು ದಕ್ಷಿಣ ಜಿಲ್ಲಾ ಪರಿಸರ ಎಂಜಿನಿಯರ್ ಅವರ ಆದೇಶಗಳ ವಿರುದ್ಧ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದೆ. ಈ ಆದೇಶ ಇಶಾ ಫೌಂಡೇಶನ್‌ಗೆ ಸ್ಮಶಾನವನ್ನು ಸ್ಥಾಪಿಸಲು ಅನುಮತಿ ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ