AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು

Madras High Court: ಆದರೆ ಈ ವಾದಕ್ಕೆ ಪ್ರತ್ಯುತ್ತರಿಸಿದ ಆರೋಪಿಗಳ ಪರ ವಕೀಲರು, ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿಕೊಂಡರು. ಅವರ ಕೋರಿಕೆಯನ್ನು ಮನ್ನಿಸಿದ ಮದ್ರಾಸ್ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಿತು.

ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು
ಮದ್ರಾಸ್ ಹೈಕೋರ್ಟ್ ಮತ್ತು ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on: May 04, 2021 | 9:18 PM

Share

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದ್ದ ದೇಶದ್ರೋಹದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ವ್ಯಕ್ತಿಗಳಿಗೆ ಮದ್ರಾಸ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪೊಲೀಸ್ ಎನ್​ಕೌಂಟರ್ ಒಂದರಲ್ಲಿ ಹತನಾಗಿದ್ದ ಮಾವೋವಾದಿ ನಾಯಕನ ಪರ ಪ್ರತಿಭಟನೆಯಲ್ಲಿ ಘೋಷಣೆ ಕೂಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿತ್ತು. 2019ರಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ಪ್ರತಿಭಟನಾಕರರು ಎನ್​ಕೌಂಟರ್ ಆದ ಮಾವೋವಾದಿ ನಾಯಕನ ಪರ ಘೋಷಣೆ ಕೂಗಿದ್ದರು ಎಂದು ಆರೋಪಿಸಲಾಗಿತ್ತು.

ಆರೋಪಿಗಳ ಜಾಮೀನು ನಿರಾಕರಣೆ ಅರ್ಜಿಯನ್ನು ನಿರಾಕರಿಸುವಂತೆ ಮನವಿ ಮಾಡಿದ ಪ್ರಾಸಿಕ್ಯೂಟರ್, ಆರೋಪಿಗಳು ನಿಷೇಧಿತ ಸಂಘಟನೆಯೊಂದರ ಬೆಂಬಲಿಗರಾಗಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕಾರಣಗಳಿಂದ ಜಾಮೀನು ನೀಡಬಾರದು ಎಂದು ಕೋರ್ಟ್​ಗೆ ಮನವಿ ಮಾಡಿದರು.

ಆದರೆ ಈ ವಾದಕ್ಕೆ ಪ್ರತ್ಯುತ್ತರಿಸಿದ ಆರೋಪಿಗಳ ಪರ ವಕೀಲರು, ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿಕೊಂಡರು. ಅವರ ಕೋರಿಕೆಯನ್ನು ಮನ್ನಿಸಿದ ಮದ್ರಾಸ್ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಿತು.

ಇದನ್ನೂ ಓದಿ: ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ 

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ

(Madras High Court grants bail accused slogans against PM Narendra Modi)

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು