AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ

ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಮನಸ್ಸಿನ ಮೇಲೆ ಜಾಹೀರಾತು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ
preethi shettigar
| Edited By: |

Updated on: Dec 04, 2020 | 3:21 PM

Share

ಮದ್ರಾಸ್: ಟಿವಿ ಜಾಹೀರಾತುಗಳಲ್ಲಿ ಪ್ರಸಾರವಾಗುವ ಕಾಂಡೋಮ್​ ಜಾಹಿರಾತುಗಳ ಬಗ್ಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ. ಅಲ್ಲದೆ, ಈ ರೀತಿಯ ಜಾಹೀರಾತುಗಳು ಪೋರ್ನೋಗ್ರಫಿಗೆ ಸಮ ಎಂದೂ ಹೇಳಿದೆ.

ನ್ಯಾಯಮೂರ್ತಿ ಎನ್​ ಕಿರುಬಕರನ್​ ಹಾಗೂ ಬಿ ಪುಗಲೆಂದಿ ಅವರನ್ನೊಳಗೊಂಡ ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಹೀಗೆ ಕಳವಳ ವ್ಯಕ್ತಪಡಿಸಿದೆ. “ಬಹುತೇಕ ಎಲ್ಲ ಚಾನೆಲ್​ಗಳು ರಾತ್ರಿ 10 ಗಂಟೆಯ ನಂತರ ಕಾಂಡೋ​ಮ್​ ಮಾರಾಟವನ್ನು ಬೆಂಬಲಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ಕೆಲ ಜಾಹೀರಾತುಗಳು ನೀಲಿ ಚಿತ್ರಗಳಂತೆ ಕಾಣುತ್ತವೆ,” ಎಂದು ಛೀಮಾರಿ ಹಾಕಿದೆ.

ಈ ರೀತಿ ನಗ್ನತೆಯನ್ನು ಮುಕ್ತವಾಗಿ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂಥವರಿಗೆ ಶಿಕ್ಷೆ ನೀಡುವ ಅವಕಾಶ ಕೂಡ ಕಾನೂನಿನಲ್ಲಿದೆ. ಈ ರೀತಿಯ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಈ ರೀತಿಯ ಜಾಹೀರಾತುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿದೆ.

ಟಿವಿಗಳಲ್ಲಿ ಕಾಂಡೋಮ್​ ಜಾಹೀರಾತು ಪ್ರಸಾರ ಮಾಡುವ ವಿಚಾರದ ಬಗ್ಗೆ ಅನೇಕರು ಅಪಸ್ವರ ಎತ್ತಿದ್ದರು. ಅಲ್ಲದೆ, ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಕೆಲವರು ಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಇಂಥಕ್ಕೆಲ್ಲ ಕೋರ್ಟ್​ ನಿರ್ಬಂಧ ವಿಧಿಸಿದೆ.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್