AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ

ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಮನಸ್ಸಿನ ಮೇಲೆ ಜಾಹೀರಾತು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ
preethi shettigar
| Edited By: |

Updated on: Dec 04, 2020 | 3:21 PM

Share

ಮದ್ರಾಸ್: ಟಿವಿ ಜಾಹೀರಾತುಗಳಲ್ಲಿ ಪ್ರಸಾರವಾಗುವ ಕಾಂಡೋಮ್​ ಜಾಹಿರಾತುಗಳ ಬಗ್ಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ. ಅಲ್ಲದೆ, ಈ ರೀತಿಯ ಜಾಹೀರಾತುಗಳು ಪೋರ್ನೋಗ್ರಫಿಗೆ ಸಮ ಎಂದೂ ಹೇಳಿದೆ.

ನ್ಯಾಯಮೂರ್ತಿ ಎನ್​ ಕಿರುಬಕರನ್​ ಹಾಗೂ ಬಿ ಪುಗಲೆಂದಿ ಅವರನ್ನೊಳಗೊಂಡ ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಹೀಗೆ ಕಳವಳ ವ್ಯಕ್ತಪಡಿಸಿದೆ. “ಬಹುತೇಕ ಎಲ್ಲ ಚಾನೆಲ್​ಗಳು ರಾತ್ರಿ 10 ಗಂಟೆಯ ನಂತರ ಕಾಂಡೋ​ಮ್​ ಮಾರಾಟವನ್ನು ಬೆಂಬಲಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ಕೆಲ ಜಾಹೀರಾತುಗಳು ನೀಲಿ ಚಿತ್ರಗಳಂತೆ ಕಾಣುತ್ತವೆ,” ಎಂದು ಛೀಮಾರಿ ಹಾಕಿದೆ.

ಈ ರೀತಿ ನಗ್ನತೆಯನ್ನು ಮುಕ್ತವಾಗಿ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂಥವರಿಗೆ ಶಿಕ್ಷೆ ನೀಡುವ ಅವಕಾಶ ಕೂಡ ಕಾನೂನಿನಲ್ಲಿದೆ. ಈ ರೀತಿಯ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಈ ರೀತಿಯ ಜಾಹೀರಾತುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿದೆ.

ಟಿವಿಗಳಲ್ಲಿ ಕಾಂಡೋಮ್​ ಜಾಹೀರಾತು ಪ್ರಸಾರ ಮಾಡುವ ವಿಚಾರದ ಬಗ್ಗೆ ಅನೇಕರು ಅಪಸ್ವರ ಎತ್ತಿದ್ದರು. ಅಲ್ಲದೆ, ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಕೆಲವರು ಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಇಂಥಕ್ಕೆಲ್ಲ ಕೋರ್ಟ್​ ನಿರ್ಬಂಧ ವಿಧಿಸಿದೆ.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ