AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ ಟಿ.ಎಂ ಕೃಷ್ಣಗೆ ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್​ ತಡೆ

ಖ್ಯಾತ ಗಾಯಕಿ ಎಂ.ಎಸ್​. ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಗಾಯಕ ಟಿ.ಎಂ. ಕೃಷ್ಣ ಅವರಿಗೆ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ ಹೇರಿದೆ. ಮದ್ರಾಸ್​ ಮ್ಯೂಸಿಕ್ ಅಕಾಡೆಮಿ ಈ ಪ್ರಶಸ್ತಿ ನೀಡುವುದಾಗಿ ಘೋಷಿಸಿತ್ತು. ಆದರೆ, ಆ ಪ್ರಶಸ್ತಿಗೆ ಎಂ.ಎಸ್​. ಸುಬ್ಬುಲಕ್ಷ್ಮಿ ಹೆಸರು ಇಡದಂತೆ ಹೈಕೋರ್ಟ್​ ಸೂಚಿಸಿದೆ.

ಗಾಯಕ ಟಿ.ಎಂ ಕೃಷ್ಣಗೆ ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್​ ತಡೆ
ಟಿಎಂ ಕೃಷ್ಣ
ಸುಷ್ಮಾ ಚಕ್ರೆ
|

Updated on: Nov 19, 2024 | 8:04 PM

Share

ನವದೆಹಲಿ: ಖ್ಯಾತ ಕರ್ನಾಟಕ ಸಂಗೀತ ಗಾಯಕ ಟಿ.ಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಎಂ.ಎಸ್​. ಸುಬ್ಬುಲಕ್ಷ್ಮಿ ಹೆಸರಿನಲ್ಲಿ ಪ್ರಶಸ್ತಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಈ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್​ ಇಂದು ಮದ್ರಾಸ್ ಮ್ಯೂಸಿಕ್ ಅಕಾಡೆಮಿಗೆ ತಡೆ ನೀಡಿದೆ. ಎಂ.ಎಸ್​. ಸುಬ್ಬುಲಕ್ಷ್ಮಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಬಂದಿರುವ ಟಿಎಂ ಕೃಷ್ಣಗೆ ಸುಬ್ಬುಲಕ್ಷ್ಮಿ ಅವರ ಹೆಸರಿನ ಈ ಪ್ರಶಸ್ತಿ ನೀಡುವುದು ಸರಿಯಲ್ಲ ಎಂದು ಎಂ.ಎಸ್​. ಸುಬ್ಬುಲಕ್ಷ್ಮಿ ಅವರ ಮೊಮ್ಮಗ ವಿ. ಶ್ರೀನಿವಾಸನ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿರುವ ನ್ಯಾಯಮೂರ್ತಿಗಳು ಈ ಪ್ರಶಸ್ತಿ ನೀಡದಂತೆ ನಿರ್ಬಂಧ ಹೇರಿದ್ದಾರೆ.

ಸಂಗೀತ ಕಲಾನಿಧಿ ಎಂ.ಎಸ್​. ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದನ್ನು ಮದ್ರಾಸ್ ಹೈಕೋರ್ಟ್ ತಡೆಹಿಡಿದಿದೆ. ಹಾಗಂತ ಸಂಗೀತ ಅಕಾಡೆಮಿ ಪ್ರಶಸ್ತಿಗಳನ್ನು ನೀಡಲು ಅಥವಾ ವಿಶೇಷವಾಗಿ ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಲು ಯಾವುದೇ ನಿರ್ಬಂಧವಿಲ್ಲ. ಆದರೆ ಆ ಪ್ರಶಸ್ತಿಗೆ ಸುಬ್ಬುಲಕ್ಷ್ಮಿ ಹೆಸರಿಡಬಾರದು ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 10, 12ನೇ ತರಗತಿ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ; ಶಾಲೆಗಳಲ್ಲಿ ಆನ್​ಲೈನ್ ಕ್ಲಾಸ್​ಗೆ ಸೂಚನೆ

ಕರ್ನಾಟಕ ಸಂಗೀತ ಗಾಯಕ ಟಿ.ಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಎಂ.ಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿಯನ್ನು ನೀಡದಂತೆ ಮದ್ರಾಸ್ ಹೈಕೋರ್ಟ್ ಇಂದು ಮದ್ರಾಸ್ ಮ್ಯೂಸಿಕ್ ಅಕಾಡೆಮಿಗೆ ತಡೆಯಾಜ್ಞೆ ನೀಡಿದೆ. ಟಿ.ಎಂ ಕೃಷ್ಣ ಅವರಿಗೆ ಇಂತಹ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಸಂಗೀತಗಾರ್ತಿ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ವಿ. ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು ಅಂಗೀಕರಿಸಿದ್ದಾರೆ.

“ಯಾವುದೇ ವ್ಯಕ್ತಿ ನಿಜವಾಗಿಯೂ ಎಂಎಸ್ ಸುಬ್ಬುಲಕ್ಷ್ಮಿ ಅವರ ಬಗ್ಗೆ ಗೌರವ ಮತ್ತು ಗೌರವವನ್ನು ಹೊಂದಿದ್ದರೆ, ಅವರ ಆಸೆ ಮತ್ತು ಆದೇಶವನ್ನು ತಿಳಿದ ನಂತರವೂ ಅವರು ಅವರ ಹೆಸರಿನಲ್ಲಿ ಯಾವುದೇ ಪ್ರಶಸ್ತಿಗಳನ್ನು ನೀಡಬಾರದು” ಎಂದು ಹೈಕೋರ್ಟ್ ಹೇಳಿದೆ. ಎಂ.ಎಸ್​. ಸುಬ್ಬುಲಕ್ಷ್ಮಿ ಅವರು ತಮ್ಮ ನಿಧನದ ನಂತರ ತಮ್ಮ ಹೆಸರಿನಲ್ಲಿ ಯಾವುದೇ ಟ್ರಸ್ಟ್ ಅಥವಾ ಸ್ಮಾರಕ ಮಾಡಬಾರದು ಎಂದು ವಿಲ್ ಬರೆದಿದ್ದರು. ಈ ವಿಷಯವನ್ನು ಕೂಡ ಕೋರ್ಟ್ ಪ್ರಸ್ತಾಪಿಸಿದೆ.

ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಿಂದ ಬದಲಾದ ಬದುಕು: ಮಧುರೈನ ಮಹಿಳೆ ಬರೆದ ಪತ್ರ ಹಂಚಿಕೊಂಡ ಪ್ರಧಾನಿ ಮೋದಿ

ಶ್ರೀನಿವಾಸನ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದನ್ನು ನಿರ್ಬಂಧಿಸುವುದು ಮಾತ್ರವಲ್ಲದೆ, ಒಟ್ಟಾರೆಯಾಗಿ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡದಂತೆ ಆದೇಶ ನೀಡಬೇಕೆಂದು ಕೋರಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ