AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್

ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 12:39 PM

Share

ಚೆನ್ನೈ, ಡಿ.21: ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ (Education Minister Ponmudi) ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಪೊನ್ಮುಡಿ (72) ಅವರು 2006 ರಿಂದ 2011 ರ ಅವಧಿಯಲ್ಲಿ ಅಂದರೆ ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಿನಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ 65.99% ಮೂಲ ಆದಾಯಕ್ಕಿಂತ ಹೆಚ್ಚು ಆದಾಯದ ಆಸ್ತಿಯನ್ನು ಸಂಗ್ರಹಿಸಿದರು ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಆದರೆ ಮಂಗಳವಾರ ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಸಾಬೀತಾಗಿದೆ.

ವಿಲ್ಲುಪುರಂನ ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪು ನೀಡಿರುವುದು ತಪ್ಪಾಗಿದೆ. ವಿಶ್ವಾಸಾರ್ಹ ಪುರಾವೆಗಳ ಲೋಪ ಹಾಗೂ ಸಾಕ್ಷ್ಯಗಳ ಕೊರತೆಯಿಂದ ಈ ತೀರ್ಪು ನೀಡಿದೆ ಎಂದು ಹೈಕೋರ್ಟ್​​​ ನ್ಯಾಯಮೂರ್ತಿ ಜಯಚಂದ್ರನ್ ಹೇಳಿದ್ದಾರೆ. ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪುನ್ನು ಒಪ್ಪಲು ಸಾಧ್ಯವಿಲ್ಲ ಏಕೆಂದರೆ ಅಲ್ಲಿ ಸಾಕ್ಷ್ಯಗಳ ಕೊರತೆ ಇದೆ ಎಂದು ಎದ್ದು ಕಾಣುತ್ತಿದೆ. ಹಾಗೂ ಇದು ತಪ್ಪಾಗಿದೆ ಎಂದು ಹೈಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸಚಿವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಮದ್ರಾಸ್ ಹೈಕೋರ್ಟ್​ ಜಡ್ಜ್​ಗೆ ಸಿಜೆಐ ಶ್ಲಾಘನೆ

ಆರೋಪಿ-1 (ಪೊನ್ಮುಡಿ) ತನ್ನನ್ನು ಸಾರ್ವಜನಿಕ ಕ್ಷೇತ್ರದಲ್ಲಿ ತೋಡಗಿಸಿಕೊಂಡ ಕಾರಣ ಆರೋಪಿ -2 (ಪೊನ್ಮುಡಿ ಪತ್ನಿ) ಅವರ ಹೆಸರಿನಲ್ಲಿ ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಸಂಪಾದಿಸಿರುವುದು ತಪ್ಪು ಹಾಗೂ ಅದು ಅಕ್ರಮವಾಗಿದೆ. ಈ ಬಗ್ಗೆ ವಿಚಾರಣಾ ನ್ಯಾಯಾಲಯ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Thu, 21 December 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು