AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್

ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 12:39 PM

Share

ಚೆನ್ನೈ, ಡಿ.21: ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ (Education Minister Ponmudi) ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಪೊನ್ಮುಡಿ (72) ಅವರು 2006 ರಿಂದ 2011 ರ ಅವಧಿಯಲ್ಲಿ ಅಂದರೆ ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಿನಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ 65.99% ಮೂಲ ಆದಾಯಕ್ಕಿಂತ ಹೆಚ್ಚು ಆದಾಯದ ಆಸ್ತಿಯನ್ನು ಸಂಗ್ರಹಿಸಿದರು ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಆದರೆ ಮಂಗಳವಾರ ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಸಾಬೀತಾಗಿದೆ.

ವಿಲ್ಲುಪುರಂನ ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪು ನೀಡಿರುವುದು ತಪ್ಪಾಗಿದೆ. ವಿಶ್ವಾಸಾರ್ಹ ಪುರಾವೆಗಳ ಲೋಪ ಹಾಗೂ ಸಾಕ್ಷ್ಯಗಳ ಕೊರತೆಯಿಂದ ಈ ತೀರ್ಪು ನೀಡಿದೆ ಎಂದು ಹೈಕೋರ್ಟ್​​​ ನ್ಯಾಯಮೂರ್ತಿ ಜಯಚಂದ್ರನ್ ಹೇಳಿದ್ದಾರೆ. ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪುನ್ನು ಒಪ್ಪಲು ಸಾಧ್ಯವಿಲ್ಲ ಏಕೆಂದರೆ ಅಲ್ಲಿ ಸಾಕ್ಷ್ಯಗಳ ಕೊರತೆ ಇದೆ ಎಂದು ಎದ್ದು ಕಾಣುತ್ತಿದೆ. ಹಾಗೂ ಇದು ತಪ್ಪಾಗಿದೆ ಎಂದು ಹೈಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸಚಿವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಮದ್ರಾಸ್ ಹೈಕೋರ್ಟ್​ ಜಡ್ಜ್​ಗೆ ಸಿಜೆಐ ಶ್ಲಾಘನೆ

ಆರೋಪಿ-1 (ಪೊನ್ಮುಡಿ) ತನ್ನನ್ನು ಸಾರ್ವಜನಿಕ ಕ್ಷೇತ್ರದಲ್ಲಿ ತೋಡಗಿಸಿಕೊಂಡ ಕಾರಣ ಆರೋಪಿ -2 (ಪೊನ್ಮುಡಿ ಪತ್ನಿ) ಅವರ ಹೆಸರಿನಲ್ಲಿ ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಸಂಪಾದಿಸಿರುವುದು ತಪ್ಪು ಹಾಗೂ ಅದು ಅಕ್ರಮವಾಗಿದೆ. ಈ ಬಗ್ಗೆ ವಿಚಾರಣಾ ನ್ಯಾಯಾಲಯ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Thu, 21 December 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ