AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್

ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 12:39 PM

Share

ಚೆನ್ನೈ, ಡಿ.21: ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ (Education Minister Ponmudi) ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಪೊನ್ಮುಡಿ (72) ಅವರು 2006 ರಿಂದ 2011 ರ ಅವಧಿಯಲ್ಲಿ ಅಂದರೆ ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಿನಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ 65.99% ಮೂಲ ಆದಾಯಕ್ಕಿಂತ ಹೆಚ್ಚು ಆದಾಯದ ಆಸ್ತಿಯನ್ನು ಸಂಗ್ರಹಿಸಿದರು ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಆದರೆ ಮಂಗಳವಾರ ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಸಾಬೀತಾಗಿದೆ.

ವಿಲ್ಲುಪುರಂನ ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪು ನೀಡಿರುವುದು ತಪ್ಪಾಗಿದೆ. ವಿಶ್ವಾಸಾರ್ಹ ಪುರಾವೆಗಳ ಲೋಪ ಹಾಗೂ ಸಾಕ್ಷ್ಯಗಳ ಕೊರತೆಯಿಂದ ಈ ತೀರ್ಪು ನೀಡಿದೆ ಎಂದು ಹೈಕೋರ್ಟ್​​​ ನ್ಯಾಯಮೂರ್ತಿ ಜಯಚಂದ್ರನ್ ಹೇಳಿದ್ದಾರೆ. ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪುನ್ನು ಒಪ್ಪಲು ಸಾಧ್ಯವಿಲ್ಲ ಏಕೆಂದರೆ ಅಲ್ಲಿ ಸಾಕ್ಷ್ಯಗಳ ಕೊರತೆ ಇದೆ ಎಂದು ಎದ್ದು ಕಾಣುತ್ತಿದೆ. ಹಾಗೂ ಇದು ತಪ್ಪಾಗಿದೆ ಎಂದು ಹೈಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸಚಿವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಮದ್ರಾಸ್ ಹೈಕೋರ್ಟ್​ ಜಡ್ಜ್​ಗೆ ಸಿಜೆಐ ಶ್ಲಾಘನೆ

ಆರೋಪಿ-1 (ಪೊನ್ಮುಡಿ) ತನ್ನನ್ನು ಸಾರ್ವಜನಿಕ ಕ್ಷೇತ್ರದಲ್ಲಿ ತೋಡಗಿಸಿಕೊಂಡ ಕಾರಣ ಆರೋಪಿ -2 (ಪೊನ್ಮುಡಿ ಪತ್ನಿ) ಅವರ ಹೆಸರಿನಲ್ಲಿ ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಸಂಪಾದಿಸಿರುವುದು ತಪ್ಪು ಹಾಗೂ ಅದು ಅಕ್ರಮವಾಗಿದೆ. ಈ ಬಗ್ಗೆ ವಿಚಾರಣಾ ನ್ಯಾಯಾಲಯ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Thu, 21 December 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?