ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

| Updated By: ವಿವೇಕ ಬಿರಾದಾರ

Updated on: Sep 13, 2022 | 11:02 PM

ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ರಸ್ತೆ ಅಪಘಾತದಲ್ಲಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಮದ್ರಾಸ್ ಹೈಕೋರ್ಟ್ ವಿಶೇಷ ಶಿಕ್ಷೆ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌
ಮದ್ರಾಸ್​ ಹೈಕೋರ್ಟ್
Follow us on

ಚೆನ್ನೈ: ಕುಡಿದ ಅಮಲಿನಲ್ಲಿ (Drink and Drive) ಕಾರು ಚಲಾಯಿಸಿ ರಸ್ತೆ ಅಪಘಾತದಲ್ಲಿ (Accident) ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಮದ್ರಾಸ್ ಹೈಕೋರ್ಟ್ (Madras High Court) ವಿಶೇಷ ಶಿಕ್ಷೆ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಯುವಕನಿಗೆ ನ್ಯಾಯಾಲಯ ಎರಡು ವಾರಗಳ ಕಾಲ ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಕರಪತ್ರಗಳನ್ನು ಹಂಚಬೇಕು ಎಂದು ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಆದೇಶ ನೀಡಿದ್ದಾರೆ.

ಕುಡಿದು ಗಾಡಿ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು. 25 ಸಾವಿರ ರೂಪಾಯಿ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ನೀಡಿದ ಮೇಲೆ ಜಾಮೀನು ನೀಡಲಾಗುತ್ತದೆ ಎಂದು ಸೈದಾಪೇಟ್​ IV ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಹೇಳಿದ್ದಾರೆ.

ಜಾಮೀನು ನೀಡುವುದನ್ನು ವಿರೋಧಿಸಿದ ಪ್ರತಿವಾದಿ ವಕೀಲರು ಆರೋಪಿಯು ಆಗಸ್ಟ್ 23 ರಂದು ಕುಡಿದ ಅಮಲಿನಲ್ಲಿ ವಾಹನವನ್ನು ದುಡುಕಿನ ಮತ್ತು ನಿರ್ಲಕ್ಷ್ಯದ ರೀತಿಯಲ್ಲಿ ಚಾಲನೆ ಮಾಡಿ ಮೂವರು ಪಾದಚಾರಿಗಳಿಗೆ ಗಾಯಗೊಳಿಸಿದ್ದಾನೆ ಎಂದು ವಾದಿಸಿದರು.

ಆದರೂ ಕೂಡ ಯುವಕ ತನ್ನ ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ಹಾಗೇ ಗಾಯಗೊಂಡ ಪಾದಾಚಾರಿಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರಿಂದ ನ್ಯಾಯಾಧೀಶರು ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

ಯುವಕ ಪ್ರತಿದಿನ ಎರಡು ವಾರಗಳ ಕಾಲ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಗತ್ಯವಿದ್ದಾಗ ಪೊಲೀಸರಗೆ ವರದಿ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Tue, 13 September 22