AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?

ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾದ ಗಡಿಗಳ ಸಮೀಪವಿರುವ ದೂರದ ಕ್ಯಾಂಪ್‌ನಲ್ಲಿ ಕೋಬ್ರಾ ಘಟಕವೊಂದು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಮಾವೋವಾದಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?
ಮದ್ವಿ ಹಿದ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 12, 2023 | 2:49 PM

ಭೋಪಾಲ್: ಮಾವೋವಾದಿ ಬಂಡುಕೋರರ ನಾಯಕ ಮತ್ತು ಭದ್ರತಾ ಪಡೆಗಳ ಮೇಲಿನ ಕೆಲವು ದೊಡ್ಡ ದಾಳಿಗಳ ಮಾಸ್ಟರ್ ಮೈಂಡ್ ಮದ್ವಿ ಹಿದ್ಮಾ (Madvi Hidma) ಬುಧವಾರ ಸರ್ಜಿಕಲ್ ಸ್ಟ್ರೈಕ್ ವೇಳೆ ಛತ್ತೀಸ್‌ಗಢದಲ್ಲಿ (Chhattisgarh) ಎನ್‌ಕೌಂಟರ್‌ನಲ್ಲಿ  ಹತನಾಗಿದ್ದಾನೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ಅತಿದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಮೂಲಗಳು ವಿವರಿಸಿವೆ. ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಗಣ್ಯ ಕೋಬ್ರಾ ಘಟಕದ ಕಮಾಂಡೋಗಳು, ಛತ್ತೀಸ್‌ಗಢ ಪೊಲೀಸ್ ಮತ್ತು ತೆಲಂಗಾಣ ಪೊಲೀಸರ ಗ್ರೇಹೌಂಡ್ ವಿಶೇಷ ಪಡೆಗಳ ಘಟಕವನ್ನು ಬೆಟಾಲಿಯನ್ 1 ಎಂದು ಕರೆಯಲಾಗುವ ಹಿದ್ಮಾ ಅವರ ಗುಂಪನ್ನು ಪತ್ತೆಹಚ್ಚಲು ಕಳುಹಿಸಲಾಗಿದೆ.2024 ರ ರಾಷ್ಟ್ರೀಯ ಚುನಾವಣೆಯ ಮೊದಲು ಮಾವೋವಾದಿ ಬಂಡಾಯವನ್ನು ಸಂಪೂರ್ಣವಾಗಿ ತಟಸ್ಥಗೊಳಿಸಲಾಗುವುದು ಎಂದು ಛತ್ತೀಸ್‌ಗಢದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ.

ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾದ ಗಡಿಗಳ ಸಮೀಪವಿರುವ ದೂರದ ಕ್ಯಾಂಪ್‌ನಲ್ಲಿ ಕೋಬ್ರಾ ಘಟಕವೊಂದು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಮಾವೋವಾದಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. “CRPF ನ ಕೋಬ್ರಾ ಬೆಟಾಲಿಯನ್‌ನ ಒಂದು ಘಟಕವನ್ನು ಚಾಪರ್‌ನಲ್ಲಿ ಫಾರ್ವರ್ಡ್ ಆಪರೇಟಿಂಗ್ ಬೇಸ್‌ಗೆ ಕಳುಹಿಸಲಾಗುತ್ತಿದೆ. ತಂಡವು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಕೋಬ್ರಾ ಕಮಾಂಡೋಗಳು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಸಿಆರ್‌ಪಿಎಫ್‌ನ ಛತ್ತೀಸ್‌ಗಢ ಸೆಕ್ಟರ್, ಇನ್ಸ್‌ಪೆಕ್ಟರ್ ಜನರಲ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಭದ್ರತಾ ಸಿಬ್ಬಂದಿಗಳು ತಮ್ಮ ಮೇಲೆ ದಾಳಿ ನಡೆಸುತ್ತಿರುವುದನ್ನು ಕಂಡು ಮಾವೋವಾದಿಗಳು ಪರಾರಿಯಾಗಿದ್ದಾರೆ. ಕೋಬ್ರಾ ಕಮಾಂಡೋಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಮತ್ತು ಘಟನೆಯಲ್ಲಿ ಮಾವೋವಾದಿಗಳಿಗೆ ಉಂಟಾದ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನ ನಡೆಯುತ್ತಿದೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಭದ್ರತಾ ಪಡೆಗಳು ಬೆಳಗ್ಗೆ 11 ಗಂಟೆಗೆ ಹಲವು ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದವು ಎಂದು ಮಾವೋವಾದಿಗಳು ಹೇಳಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಾಚರಣೆಯಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆ, ಆದರೆ ಅವರು ಸುರಕ್ಷಿತವಾಗಿದ್ದಾರೆ. ಒಂದು ಹೆಲಿಕಾಪ್ಟರ್‌ಗೆ ಗುಂಡುಗಳು ತಾಗಿದ್ದು ಅದು ಸುಕ್ಮಾದ ಎಲ್ಮಗುಂಡಾ ಕ್ಯಾಂಪ್‌ನಲ್ಲಿ ಇಳಿಯಿತು.

ಈ ಕಾರ್ಯಾಚರಣೆಯಲ್ಲಿ 55 ವರ್ಷದ ಮದ್ವಿ ಹಿದ್ಮಾ ಸಾವಿನ ವರದಿಗಳನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. 2013ರಲ್ಲಿ ದಾಂತೇವಾಡದಲ್ಲಿ 76 ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಬಲಿತೆಗೆದುಕೊಂಡ ದಾಳಿ ಸೇರಿದಂತೆ 2004ರಿಂದ ಎರಡು ಡಜನ್‌ಗಿಂತಲೂ ಹೆಚ್ಚು ದಾಳಿಗಳಲ್ಲಿ ಹಿದ್ಮಾ ಭಾಗಿಯಾಗಿದ್ದಾನೆ. ಅದೇ ವರ್ಷದಲ್ಲಿ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ನಾಯಕತ್ವವನ್ನು ನಾಶಪಡಿಸಿದ ಜಿರಾಮ್ ಘಾಟಿ ದಾಳಿಯಲ್ಲಿ ಈತನಿದ್ದು ಈತನ ತಲೆಗೆ ₹ 45 ಲಕ್ಷ ಬಹುಮಾನವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Thu, 12 January 23

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್