AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?

ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾದ ಗಡಿಗಳ ಸಮೀಪವಿರುವ ದೂರದ ಕ್ಯಾಂಪ್‌ನಲ್ಲಿ ಕೋಬ್ರಾ ಘಟಕವೊಂದು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಮಾವೋವಾದಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?
ಮದ್ವಿ ಹಿದ್ಮಾ
TV9 Web
| Edited By: |

Updated on:Jan 12, 2023 | 2:49 PM

Share

ಭೋಪಾಲ್: ಮಾವೋವಾದಿ ಬಂಡುಕೋರರ ನಾಯಕ ಮತ್ತು ಭದ್ರತಾ ಪಡೆಗಳ ಮೇಲಿನ ಕೆಲವು ದೊಡ್ಡ ದಾಳಿಗಳ ಮಾಸ್ಟರ್ ಮೈಂಡ್ ಮದ್ವಿ ಹಿದ್ಮಾ (Madvi Hidma) ಬುಧವಾರ ಸರ್ಜಿಕಲ್ ಸ್ಟ್ರೈಕ್ ವೇಳೆ ಛತ್ತೀಸ್‌ಗಢದಲ್ಲಿ (Chhattisgarh) ಎನ್‌ಕೌಂಟರ್‌ನಲ್ಲಿ  ಹತನಾಗಿದ್ದಾನೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ಅತಿದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಮೂಲಗಳು ವಿವರಿಸಿವೆ. ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಗಣ್ಯ ಕೋಬ್ರಾ ಘಟಕದ ಕಮಾಂಡೋಗಳು, ಛತ್ತೀಸ್‌ಗಢ ಪೊಲೀಸ್ ಮತ್ತು ತೆಲಂಗಾಣ ಪೊಲೀಸರ ಗ್ರೇಹೌಂಡ್ ವಿಶೇಷ ಪಡೆಗಳ ಘಟಕವನ್ನು ಬೆಟಾಲಿಯನ್ 1 ಎಂದು ಕರೆಯಲಾಗುವ ಹಿದ್ಮಾ ಅವರ ಗುಂಪನ್ನು ಪತ್ತೆಹಚ್ಚಲು ಕಳುಹಿಸಲಾಗಿದೆ.2024 ರ ರಾಷ್ಟ್ರೀಯ ಚುನಾವಣೆಯ ಮೊದಲು ಮಾವೋವಾದಿ ಬಂಡಾಯವನ್ನು ಸಂಪೂರ್ಣವಾಗಿ ತಟಸ್ಥಗೊಳಿಸಲಾಗುವುದು ಎಂದು ಛತ್ತೀಸ್‌ಗಢದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ.

ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾದ ಗಡಿಗಳ ಸಮೀಪವಿರುವ ದೂರದ ಕ್ಯಾಂಪ್‌ನಲ್ಲಿ ಕೋಬ್ರಾ ಘಟಕವೊಂದು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಮಾವೋವಾದಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. “CRPF ನ ಕೋಬ್ರಾ ಬೆಟಾಲಿಯನ್‌ನ ಒಂದು ಘಟಕವನ್ನು ಚಾಪರ್‌ನಲ್ಲಿ ಫಾರ್ವರ್ಡ್ ಆಪರೇಟಿಂಗ್ ಬೇಸ್‌ಗೆ ಕಳುಹಿಸಲಾಗುತ್ತಿದೆ. ತಂಡವು ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ, ಕೋಬ್ರಾ ಕಮಾಂಡೋಗಳು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಸಿಆರ್‌ಪಿಎಫ್‌ನ ಛತ್ತೀಸ್‌ಗಢ ಸೆಕ್ಟರ್, ಇನ್ಸ್‌ಪೆಕ್ಟರ್ ಜನರಲ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಭದ್ರತಾ ಸಿಬ್ಬಂದಿಗಳು ತಮ್ಮ ಮೇಲೆ ದಾಳಿ ನಡೆಸುತ್ತಿರುವುದನ್ನು ಕಂಡು ಮಾವೋವಾದಿಗಳು ಪರಾರಿಯಾಗಿದ್ದಾರೆ. ಕೋಬ್ರಾ ಕಮಾಂಡೋಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಮತ್ತು ಘಟನೆಯಲ್ಲಿ ಮಾವೋವಾದಿಗಳಿಗೆ ಉಂಟಾದ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನ ನಡೆಯುತ್ತಿದೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಭದ್ರತಾ ಪಡೆಗಳು ಬೆಳಗ್ಗೆ 11 ಗಂಟೆಗೆ ಹಲವು ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದವು ಎಂದು ಮಾವೋವಾದಿಗಳು ಹೇಳಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಾಚರಣೆಯಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆ, ಆದರೆ ಅವರು ಸುರಕ್ಷಿತವಾಗಿದ್ದಾರೆ. ಒಂದು ಹೆಲಿಕಾಪ್ಟರ್‌ಗೆ ಗುಂಡುಗಳು ತಾಗಿದ್ದು ಅದು ಸುಕ್ಮಾದ ಎಲ್ಮಗುಂಡಾ ಕ್ಯಾಂಪ್‌ನಲ್ಲಿ ಇಳಿಯಿತು.

ಈ ಕಾರ್ಯಾಚರಣೆಯಲ್ಲಿ 55 ವರ್ಷದ ಮದ್ವಿ ಹಿದ್ಮಾ ಸಾವಿನ ವರದಿಗಳನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. 2013ರಲ್ಲಿ ದಾಂತೇವಾಡದಲ್ಲಿ 76 ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಬಲಿತೆಗೆದುಕೊಂಡ ದಾಳಿ ಸೇರಿದಂತೆ 2004ರಿಂದ ಎರಡು ಡಜನ್‌ಗಿಂತಲೂ ಹೆಚ್ಚು ದಾಳಿಗಳಲ್ಲಿ ಹಿದ್ಮಾ ಭಾಗಿಯಾಗಿದ್ದಾನೆ. ಅದೇ ವರ್ಷದಲ್ಲಿ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ನಾಯಕತ್ವವನ್ನು ನಾಶಪಡಿಸಿದ ಜಿರಾಮ್ ಘಾಟಿ ದಾಳಿಯಲ್ಲಿ ಈತನಿದ್ದು ಈತನ ತಲೆಗೆ ₹ 45 ಲಕ್ಷ ಬಹುಮಾನವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Thu, 12 January 23

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ