Mukhtar Ansari: ಅಪಹರಣ, ಕೊಲೆ ಪ್ರಕರಣದಲ್ಲಿ ದೋಷಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ

ಗಾಜಿಪುರದ ಎಂಪಿ ಎಂಎಲ್‌ಎ ನ್ಯಾಯಾಲಯವು ಗ್ಯಾಂಗ್​​ಸ್ಟರ್, ಮಾಫಿಯಾ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ.

Mukhtar Ansari: ಅಪಹರಣ, ಕೊಲೆ ಪ್ರಕರಣದಲ್ಲಿ ದೋಷಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ
ಮುಕ್ತಾರ್ ಅನ್ಸಾರಿ
ರಶ್ಮಿ ಕಲ್ಲಕಟ್ಟ

Updated on: Apr 29, 2023 | 2:29 PM

ಅಪಹರಣ, ಕೊಲೆ ಪ್ರಕರಣದಲ್ಲಿ ಘಾಜಿಪುರದ ಎಂಪಿ ಎಂಎಲ್‌ಎ ನ್ಯಾಯಾಲಯವು (Ghazipur’s MP MLA court) ಗ್ಯಾಂಗ್​​ಸ್ಟರ್, ಮಾಫಿಯಾ ಮುಖ್ತಾರ್ ಅನ್ಸಾರಿಗೆ (Mukhtar Ansari) 10 ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.ಅದೇ ವೇಳೆ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮುಖ್ತಾರ್ ಅನ್ಸಾರಿಯ ಅಣ್ಣ, ಬಿಎಸ್​​ಪಿ ಸಂಸದ ಅಫ್ಜಲ್ ಅನ್ಸಾರಿಯ(Afzal Ansari) ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಜನವರಿಯಲ್ಲಿ ಪೊಲೀಸರು ಮುಖ್ತಾರ್ ಅನ್ಸಾರಿ ವಿರುದ್ಧ 2001 ರ ಉಸ್ರಿ ಚಟ್ಟಿ ಗ್ಯಾಂಗ್​​ವಾರ್ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ರ ಅಡಿಯಲ್ಲಿ ಅನ್ಸಾರಿ ವಿರುದ್ಧ ಗಾಜಿಪುರದ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ 18 ರಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಮಾರ್ಚ್ 15 ರಂದು ಗಾಜಿಪುರ ಎಂಪಿ ಎಂಎಲ್​​ಎ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಇದು ಅನ್ಸಾರಿಯನ್ನು ಬಂದಾದಲ್ಲಿನ ಉನ್ನತ ದರ್ಜೆಯ ಜೈಲಿನಲ್ಲಿ ಇರಿಸಲು ಅನುಮತಿ ನೀಡಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅನ್ಸಾರಿ ಮತ್ತು ಆತನ ಸಹಾಯಕ ಭೀಮ್ ಸಿಂಗ್‌ಗೆ ಘಾಜಿಪುರದ ಗ್ಯಾಂಗ್​​ಸ್ಟರ್ ನ್ಯಾಯಾಲಯವು ಕೊಲೆ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಈ ಪ್ರಕರಣಗಳಲ್ಲಿ ಕಾನ್‌ಸ್ಟೆಬಲ್ ರಘುವಂಶ್ ಸಿಂಗ್ ಹತ್ಯೆ ಮತ್ತು ಘಾಜಿಪುರದ ಹೆಚ್ಚುವರಿ ಎಸ್‌ಪಿ ಮೇಲೆ ಕೊಲೆಗೈದ ಹಲ್ಲೆ ಪ್ರಕರಣಗಳು ಸೇರಿವೆ.

ಸೆಪ್ಟೆಂಬರ್ 21 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅನ್ಸಾರಿಯನ್ನು ದೋಷಿ ಎಂದು ಘೋಷಿಸಿತು. ಜೈಲರ್ ಎಸ್‌ಕೆ ಅವಸ್ತಿಗೆ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಅವರತ್ತ ಪಿಸ್ತೂಲ್ ತೋರಿಸಿದ್ದಕ್ಕಾಗಿ ಶಿಕ್ಷೆ ವಿಧಿಸಿತು. ಈ ಪ್ರಕರಣವು 2003 ರಲ್ಲಿ ಲಕ್ನೋ ಜಿಲ್ಲಾ ಕಾರಾಗೃಹದ ಜೈಲರ್ ಎಸ್‌ಕೆ ಅವಸ್ತಿ ಅವರು ಎಫ್‌ಐಆರ್ ದಾಖಲಿಸಿದ್ದು, ಜೈಲಿನಲ್ಲಿ ಅನ್ಸಾರಿ ಅವರನ್ನು ಭೇಟಿಯಾಗಲು ಬಂದ ಜನರನ್ನು ಹುಡುಕಲು ಆದೇಶಿಸುವಂತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮನ್ ಕಿ ಬಾತ್​​ 100 ಸಂಚಿಕೆಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಲ್ ಗೇಟ್ಸ್

1999ರಲ್ಲಿ ಗ್ಯಾಂಗ್ ಸ್ಟರ್ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ಲಕ್ನೋ ಪೀಠವು ಸೆಪ್ಟೆಂಬರ್ 23ರಂದು ಆತನಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿತು. 23 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿಗೆ ನ್ಯಾಯಾಲಯ ₹ 50,000 ದಂಡವನ್ನೂ ವಿಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Sat, 29 April 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us