Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೊಸ ಪೆನ್ಸಿಲ್ ಕೇಳಿದರೆ ಅಮ್ಮ ಹೊಡೆಯುತ್ತಾರೆ; ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ

Uttar Pradesh News: ಉತ್ತರ ಪ್ರದೇಶದ ಕನ್ನೂಜ್ ಜಿಲ್ಲೆಯ ಕೃತಿ ದುಬೆ ಎಂಬ 6 ವರ್ಷದ ಬಾಲಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾಳೆ.

Viral News: ಹೊಸ ಪೆನ್ಸಿಲ್ ಕೇಳಿದರೆ ಅಮ್ಮ ಹೊಡೆಯುತ್ತಾರೆ; ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ
ನರೇಂದ್ರ ಮೋದಿಯವರಿಗೆ ಪತ್ರ ಬರೆದ ಬಾಲಕಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 01, 2022 | 12:47 PM

ನವದೆಹಲಿ: ದೇಶದಲ್ಲಿ ಬೆಲೆ ಏರಿಕೆಯ ಬಿಸಿ ಕೆಳ ವರ್ಗದವರು ಮತ್ತು ಮಧ್ಯಮ ವರ್ಗದವರಿಗೆ ತಟ್ಟುತ್ತಲೇ ಇದೆ. ಇದೀಗ ಪುಟ್ಟ ಬಾಲಕಿಗೂ ಬೆಲೆಯೇರಿಕೆಯ ಬಗ್ಗೆ ತಲೆಬಿಸಿ ಶುರುವಾಗಿದ್ದು, ತನಗೆ ಎದುರಾಗಿರುವ ಸಮಸ್ಯೆಯ ಬಗ್ಗೆ ಆ 6 ವರ್ಷದ ಬಾಲಕಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾಳೆ. ಮ್ಯಾಗಿ (Maggi), ಪೆನ್ಸಿಲ್ (Pencil) ಬೆಲೆ ಜಾಸ್ತಿ ಆಗಿರುವುದರಿಂದ ನನಗೆ ತೊಂದರೆಯಾಗಿದೆ ಎಂದು ಆ ಬಾಲಕಿ ಹಿಂದಿ(Hindi)  ಭಾಷೆಯಲ್ಲಿ ಬರೆದಿರುವ ಪತ್ರ ಇದೀಗ ವೈರಲ್ ಆಗಿದೆ.

ಉತ್ತರ ಪ್ರದೇಶದ ಕನ್ನೂಜ್ ಜಿಲ್ಲೆಯ ಕೃತಿ ದುಬೆ ಎಂಬ 6 ವರ್ಷದ ಬಾಲಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾಳೆ. ನನ್ನ ಹೆಸರು ಕೃತಿ ದುಬೆ. ನಾನು 1ನೇ ತರಗತಿಯಲ್ಲಿ ಓದುತ್ತಿದ್ದೇನೆ. ಮೋದಿಯವರೇ, ನಿಮ್ಮ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ನನ್ನ ಪೆನ್ಸಿಲ್, ರಬ್ಬರ್ ಬೆಲೆ ಕೂಡ ಹೆಚ್ಚಾಗಿದೆ. ನಾನು ಇಷ್ಟಪಟ್ಟು ತಿನ್ನುವ ಮ್ಯಾಗಿ ಬೆಲೆಯೂ ಏರಿಕೆಯಾಗಿದೆ. ಇದರಿಂದಾಗಿ ನಾನು ಪೆನ್ಸಿಲ್ ಬೇಕು ಎಂದು ಹೇಳಿದರೆ ನನ್ನ ಅಮ್ಮ ನನಗೆ ಹೊಡೆಯುತ್ತಾಳೆ. ನಾನು ಏನು ಮಾಡಬೇಕು? ಶಾಲೆಯಲ್ಲಿ ನನ್ನ ಜೊತೆ ಕೂರುವವರು ನನ್ನ ಪೆನ್ಸಿಲ್ ಕದ್ದು ನನಗೆ ಅಮ್ಮನಿಂದ ಹೊಡೆಸುತ್ತಿದ್ದಾರೆ ಎಂದು ಆಕೆ ಪತ್ರ ಬರೆದಿದ್ದಾಳೆ.

ಇದನ್ನೂ ಓದಿ: Viral News: ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ 100ಕ್ಕೆ 151 ಅಂಕ; ರಿಸಲ್ಟ್​ ನೋಡಿ ವಿದ್ಯಾರ್ಥಿಯೇ ಶಾಕ್

ಹಿಂದಿಯಲ್ಲಿರುವ ಈ ಮುದ್ದಾದ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಬಾಲಕಿಯ ತಂದೆ ವಿಶಾಲ್ ದುಬೆ ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಇದು ನನ್ನ ಮಗಳ ಮನ್ ಕಿ ಬಾತ್. ಆಕೆ ಶಾಲೆಯಲ್ಲಿ ಪೆನ್ಸಿಲ್ ಕಳೆದುಕೊಂಡು ಬಂದು, ಹೊಸ ಪೆನ್ಸಿಲ್ ಕೇಳಿದ್ದಕ್ಕೆ ಆಕೆಯ ಅಮ್ಮ ಪೆಟ್ಟು ಕೊಟ್ಟಿದ್ದಳು. ಅದರಿಂದ ಬೇಸರಗೊಂಡು ಆಕೆ ಈ ಪತ್ರ ಬರೆದಿದ್ದಾಳೆ ಎಂದು ಕೃತಿಯ ತಂದೆ ಹೇಳಿದ್ದಾರೆ.

Published On - 12:46 pm, Mon, 1 August 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !