AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ

Earthquake in India-Myanmar border: ಭಾರತ ಹಾಗೂ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿ ಸುಮಾರು 6 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತ ಹಾಗೂ ಗುವಾಹಟಿಗೂ ಕಂಪನದ ಅನುಭವವಾಗಿದೆ.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ
ಇಎಮ್​ಎಸ್​ಸಿ ಬಿಡುಗಡೆ ಮಾಡಿರುವ ಭೂಕಂಪದ ಕೇಂದ್ರ ಬಿಂದು ತಿಳಿಸುವ ನಕ್ಷೆ
TV9 Web
| Edited By: |

Updated on: Nov 26, 2021 | 8:21 AM

Share

ಚಿತ್ತಗಾಂಗ್: ಶುಕ್ರವಾರ ಬೆಳಗ್ಗೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 175 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ. ತ್ರಿಪುರಾ, ಮಣಿಪುರ, ಮಿಜೋರಾಂ ಮತ್ತು ಅಸ್ಸಾಂನಲ್ಲಿಯೂ ಕಂಪನದ ಅನುಭವವಾಗಿದೆ. ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರದ (EMSC) ವೆಬ್‌ಸೈಟ್‌ನಲ್ಲಿ ಕೋಲ್ಕತ್ತಾದವರೆಗೆ ಭೂಕಂಪದ ಅನುಭವವಾಗಿದೆ ಎಂದು ತಿಳಿಸಲಾಗಿದೆ. “ಇದು ನಾನು ಅನುಭವಿಸಿದ ಅತಿ ದೀರ್ಘಾವಧಿಯ ಭೂಕಂಪಗಳಲ್ಲಿ ಒಂದಾಗಿದೆ” ಎಂದು ಮಿಜೋರಾಂನ ಥೆನ್ಜಾಲ್‌ನ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದನ್ನು EMSC ನಲ್ಲಿ ಪೋಸ್ಟ್ ಮಾಡಲಾಗಿದೆ.

ಮಾಹಿತಿಯ ಪ್ರಕಾರ, ಬೆಳಗಿನ ಜಾವ 5.15ಕ್ಕೆ ಭೂಕಂಪ ಸಂಭವಿಸಿದೆ. ಮುಂಜಾನೆ 5.53ಕ್ಕೆ ಎರಡನೇ ಭೂಕಂಪನದ ವರದಿಗಳೂ ಇವೆ.

ಈ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

EMSC ತನ್ನ ವೆಬ್‌ಸೈಟ್‌ನಲ್ಲಿ ಪ್ರತ್ಯಕ್ಷದರ್ಶಿಗಳ ಅನುಭವಗಳನ್ನು ಪೋಸ್ಟ್ ಮಾಡಿದೆ. ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳಷ್ಟು ದೀರ್ಘವಾಗಿತ್ತು ಮತ್ತು ಅದರ ಪರಿಣಾಮಗಳು ಕಂಡುಬಂದಿವೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಮತ್ತೋರ್ವ ಪ್ರತ್ಯಕ್ಷದರ್ಶಿ ಭೂಕಂಪದ ಕೇಂದ್ರಬಿಂದುವಿನಿಂದ 184 ಕಿಮೀ ದೂರದಲ್ಲಿರುವ ಚಿತ್ತಗಾಂಗ್​ನಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಬರೆದಿದ್ದಾರೆ.

EMSC ನಂತರ ಭೂಕಂಪನದ ಕುರಿತು ಮಾಹಿತಿ ನೀಡಿದ್ದು, ಮೊದಲು ತಿಳಿಸಿದ್ದ 6.0 ರ ತೀವ್ರತೆಯನ್ನು 5.8ಕ್ಕೆ ನಿಗದಿಪಡಿಸಿದೆ. ಜೊತೆಗೆ ಕಂಪನದ ಕೇಂದ್ರ ಬಿಂದುಬವು ಈಶಾನ್ಯ ಭಾರತದ ಐಜ್ವಾಲ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.

ಇದನ್ನೂ ಓದಿ:

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ, ಬಿಎಸ್​ವೈ

ಭಾವನೆಗಳನ್ನು ಅದುಮಿಟ್ಟುಕೊಳ್ಳಬಾರದು, ಅವುಗಳನ್ನು ಹೊರಹಾಕಬೇಕು ಅನ್ನುತ್ತಾರೆ ಡಾ ಸೌಜನ್ಯ ವಶಿಷ್ಠ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್