AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ

Earthquake in India-Myanmar border: ಭಾರತ ಹಾಗೂ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿ ಸುಮಾರು 6 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತ ಹಾಗೂ ಗುವಾಹಟಿಗೂ ಕಂಪನದ ಅನುಭವವಾಗಿದೆ.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ
ಇಎಮ್​ಎಸ್​ಸಿ ಬಿಡುಗಡೆ ಮಾಡಿರುವ ಭೂಕಂಪದ ಕೇಂದ್ರ ಬಿಂದು ತಿಳಿಸುವ ನಕ್ಷೆ
TV9 Web
| Edited By: |

Updated on: Nov 26, 2021 | 8:21 AM

Share

ಚಿತ್ತಗಾಂಗ್: ಶುಕ್ರವಾರ ಬೆಳಗ್ಗೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 175 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ. ತ್ರಿಪುರಾ, ಮಣಿಪುರ, ಮಿಜೋರಾಂ ಮತ್ತು ಅಸ್ಸಾಂನಲ್ಲಿಯೂ ಕಂಪನದ ಅನುಭವವಾಗಿದೆ. ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರದ (EMSC) ವೆಬ್‌ಸೈಟ್‌ನಲ್ಲಿ ಕೋಲ್ಕತ್ತಾದವರೆಗೆ ಭೂಕಂಪದ ಅನುಭವವಾಗಿದೆ ಎಂದು ತಿಳಿಸಲಾಗಿದೆ. “ಇದು ನಾನು ಅನುಭವಿಸಿದ ಅತಿ ದೀರ್ಘಾವಧಿಯ ಭೂಕಂಪಗಳಲ್ಲಿ ಒಂದಾಗಿದೆ” ಎಂದು ಮಿಜೋರಾಂನ ಥೆನ್ಜಾಲ್‌ನ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದನ್ನು EMSC ನಲ್ಲಿ ಪೋಸ್ಟ್ ಮಾಡಲಾಗಿದೆ.

ಮಾಹಿತಿಯ ಪ್ರಕಾರ, ಬೆಳಗಿನ ಜಾವ 5.15ಕ್ಕೆ ಭೂಕಂಪ ಸಂಭವಿಸಿದೆ. ಮುಂಜಾನೆ 5.53ಕ್ಕೆ ಎರಡನೇ ಭೂಕಂಪನದ ವರದಿಗಳೂ ಇವೆ.

ಈ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

EMSC ತನ್ನ ವೆಬ್‌ಸೈಟ್‌ನಲ್ಲಿ ಪ್ರತ್ಯಕ್ಷದರ್ಶಿಗಳ ಅನುಭವಗಳನ್ನು ಪೋಸ್ಟ್ ಮಾಡಿದೆ. ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳಷ್ಟು ದೀರ್ಘವಾಗಿತ್ತು ಮತ್ತು ಅದರ ಪರಿಣಾಮಗಳು ಕಂಡುಬಂದಿವೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಮತ್ತೋರ್ವ ಪ್ರತ್ಯಕ್ಷದರ್ಶಿ ಭೂಕಂಪದ ಕೇಂದ್ರಬಿಂದುವಿನಿಂದ 184 ಕಿಮೀ ದೂರದಲ್ಲಿರುವ ಚಿತ್ತಗಾಂಗ್​ನಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಬರೆದಿದ್ದಾರೆ.

EMSC ನಂತರ ಭೂಕಂಪನದ ಕುರಿತು ಮಾಹಿತಿ ನೀಡಿದ್ದು, ಮೊದಲು ತಿಳಿಸಿದ್ದ 6.0 ರ ತೀವ್ರತೆಯನ್ನು 5.8ಕ್ಕೆ ನಿಗದಿಪಡಿಸಿದೆ. ಜೊತೆಗೆ ಕಂಪನದ ಕೇಂದ್ರ ಬಿಂದುಬವು ಈಶಾನ್ಯ ಭಾರತದ ಐಜ್ವಾಲ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.

ಇದನ್ನೂ ಓದಿ:

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ, ಬಿಎಸ್​ವೈ

ಭಾವನೆಗಳನ್ನು ಅದುಮಿಟ್ಟುಕೊಳ್ಳಬಾರದು, ಅವುಗಳನ್ನು ಹೊರಹಾಕಬೇಕು ಅನ್ನುತ್ತಾರೆ ಡಾ ಸೌಜನ್ಯ ವಶಿಷ್ಠ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ