AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ

Earthquake in India-Myanmar border: ಭಾರತ ಹಾಗೂ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿ ಸುಮಾರು 6 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತ ಹಾಗೂ ಗುವಾಹಟಿಗೂ ಕಂಪನದ ಅನುಭವವಾಗಿದೆ.

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ
ಇಎಮ್​ಎಸ್​ಸಿ ಬಿಡುಗಡೆ ಮಾಡಿರುವ ಭೂಕಂಪದ ಕೇಂದ್ರ ಬಿಂದು ತಿಳಿಸುವ ನಕ್ಷೆ
TV9 Web
| Updated By: shivaprasad.hs|

Updated on: Nov 26, 2021 | 8:21 AM

Share

ಚಿತ್ತಗಾಂಗ್: ಶುಕ್ರವಾರ ಬೆಳಗ್ಗೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 175 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ. ತ್ರಿಪುರಾ, ಮಣಿಪುರ, ಮಿಜೋರಾಂ ಮತ್ತು ಅಸ್ಸಾಂನಲ್ಲಿಯೂ ಕಂಪನದ ಅನುಭವವಾಗಿದೆ. ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರದ (EMSC) ವೆಬ್‌ಸೈಟ್‌ನಲ್ಲಿ ಕೋಲ್ಕತ್ತಾದವರೆಗೆ ಭೂಕಂಪದ ಅನುಭವವಾಗಿದೆ ಎಂದು ತಿಳಿಸಲಾಗಿದೆ. “ಇದು ನಾನು ಅನುಭವಿಸಿದ ಅತಿ ದೀರ್ಘಾವಧಿಯ ಭೂಕಂಪಗಳಲ್ಲಿ ಒಂದಾಗಿದೆ” ಎಂದು ಮಿಜೋರಾಂನ ಥೆನ್ಜಾಲ್‌ನ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದನ್ನು EMSC ನಲ್ಲಿ ಪೋಸ್ಟ್ ಮಾಡಲಾಗಿದೆ.

ಮಾಹಿತಿಯ ಪ್ರಕಾರ, ಬೆಳಗಿನ ಜಾವ 5.15ಕ್ಕೆ ಭೂಕಂಪ ಸಂಭವಿಸಿದೆ. ಮುಂಜಾನೆ 5.53ಕ್ಕೆ ಎರಡನೇ ಭೂಕಂಪನದ ವರದಿಗಳೂ ಇವೆ.

ಈ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

EMSC ತನ್ನ ವೆಬ್‌ಸೈಟ್‌ನಲ್ಲಿ ಪ್ರತ್ಯಕ್ಷದರ್ಶಿಗಳ ಅನುಭವಗಳನ್ನು ಪೋಸ್ಟ್ ಮಾಡಿದೆ. ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳಷ್ಟು ದೀರ್ಘವಾಗಿತ್ತು ಮತ್ತು ಅದರ ಪರಿಣಾಮಗಳು ಕಂಡುಬಂದಿವೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಮತ್ತೋರ್ವ ಪ್ರತ್ಯಕ್ಷದರ್ಶಿ ಭೂಕಂಪದ ಕೇಂದ್ರಬಿಂದುವಿನಿಂದ 184 ಕಿಮೀ ದೂರದಲ್ಲಿರುವ ಚಿತ್ತಗಾಂಗ್​ನಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಬರೆದಿದ್ದಾರೆ.

EMSC ನಂತರ ಭೂಕಂಪನದ ಕುರಿತು ಮಾಹಿತಿ ನೀಡಿದ್ದು, ಮೊದಲು ತಿಳಿಸಿದ್ದ 6.0 ರ ತೀವ್ರತೆಯನ್ನು 5.8ಕ್ಕೆ ನಿಗದಿಪಡಿಸಿದೆ. ಜೊತೆಗೆ ಕಂಪನದ ಕೇಂದ್ರ ಬಿಂದುಬವು ಈಶಾನ್ಯ ಭಾರತದ ಐಜ್ವಾಲ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.

ಇದನ್ನೂ ಓದಿ:

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ, ಬಿಎಸ್​ವೈ

ಭಾವನೆಗಳನ್ನು ಅದುಮಿಟ್ಟುಕೊಳ್ಳಬಾರದು, ಅವುಗಳನ್ನು ಹೊರಹಾಕಬೇಕು ಅನ್ನುತ್ತಾರೆ ಡಾ ಸೌಜನ್ಯ ವಶಿಷ್ಠ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು