AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಉಂಟಾಗಿದೆ. ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 60 ಭಕ್ತರು ಗಾಯಗೊಂಡಿದ್ದಾರೆ. 25 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಮೃತರಾದವರಲ್ಲಿ ಕರ್ನಾಟಕದ ನಾಲ್ವರು ಭಕ್ತರು ಕೂಡ ಸೇರಿದ್ದಾರೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ
Mahakumbh Stampede
ಸುಷ್ಮಾ ಚಕ್ರೆ
|

Updated on: Jan 29, 2025 | 7:21 PM

Share

ಪ್ರಯಾಗರಾಜ್: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದು, ಇದುವರೆಗೆ 25 ಮಂದಿ ಮೃತರನ್ನು ಗುರುತಿಸಲಾಗಿದೆ. ಉಳಿದ ಐವರ ಗುರುತುಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಈ ಘಟನೆಯಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಮಹಾ ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಮೃತರಾದವರ ಪೈಕಿ ನಾಲ್ವರು ಕರ್ನಾಟಕದವರು ಕೂಡ ಸೇರಿದ್ದಾರೆ.

ಪ್ರಯಾಗ್‌ರಾಜ್‌ ಕಾಲ್ತುಳಿತದ ಹೆಲ್ಪ್‌ಲೈನ್ ನಂಬರ್ 1920. ಮಹಾಕುಂಭ ಮೇಳಕ್ಕೆ ಧಾವಿಸಿದ ಭಕ್ತರ ಕುಟುಂಬದವರು ಹೆಲ್ಪ್‌ಲೈನ್ ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇಂದು ಮೌನಿ ಅಮಾವಾಸ್ಯೆಯಾದ್ದರಿಂದ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಾಗಿ ಆಗಮಿಸಿದ್ದರು. ಈ ವೇಳೆ ತ್ರಿವೇಣಿ ಸಂಗಮದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು.

ಇದನ್ನೂ ಓದಿ: ಮಹಾಕುಂಭ ಮೇಳ, ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ

ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬರು, ಗುಜರಾತ್‌ನ ಒಬ್ಬರು ಇದ್ದಾರೆ. ಕೆಲವು ಗಾಯಗೊಂಡ ಭಕ್ತರನ್ನು ಅವರ ಸಂಬಂಧಿಕರು ಕರೆದೊಯ್ದಿದ್ದಾರೆ. 36 ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ಹೇಳಿದರು.

8-10 ಕೋಟಿ ಭಕ್ತರು ಆಗಮಿಸುತ್ತಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಭ್ಯವಿರುವ ಎಲ್ಲಾ ಘಾಟ್‌ಗಳನ್ನು ಬಳಸುವಂತೆ ಮತ್ತು ಸಂಗಮ್ ನೋಸ್ ಕಡೆಗೆ ಧಾವಿಸದಂತೆ ಭಕ್ತರ ಬಳಿ ಅವರು ಮನವಿ ಮಾಡಿದ್ದಾರೆ. ಮಹಾಕುಂಭದಿಂದ ಹಿಂದಿರುಗುವ ಯಾತ್ರಿಕರಿಗೆ ಅಧಿಕಾರಿಗಳು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ