Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahakumbh Stampede: ವಿವಿಐಪಿ ಪಾಸ್ ರದ್ದು, ಕಾಲ್ತುಳಿತದ ಬಳಿಕ ಮಹಾಕುಂಭದಲ್ಲಿ ಹಲವು ಬದಲಾವಣೆ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಘಟನೆ ಬಳಿಕ ಜಿಲ್ಲಾಡಳಿತವು ಹಲವು ಬದಲಾವಣೆಗಳನ್ನು ಮಾಡಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸುವುದರ ಜತೆಗೆ ಒಳಗೆ ಯಾವುದೇ ವಾಹನಗಳಿಗೂ ಅವಕಾಶವಿಲ್ಲ ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ನೀಡಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ.

Mahakumbh Stampede: ವಿವಿಐಪಿ ಪಾಸ್ ರದ್ದು, ಕಾಲ್ತುಳಿತದ ಬಳಿಕ ಮಹಾಕುಂಭದಲ್ಲಿ ಹಲವು ಬದಲಾವಣೆ
ಮಹಾಕುಂಭ ಮೇಳ
Follow us
ನಯನಾ ರಾಜೀವ್
|

Updated on:Jan 30, 2025 | 10:47 AM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ. ಸಂಪೂರ್ಣ ವಾಹನ ರಹಿತ ವಲಯವಾಗಿದ್ದು, ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ- ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ. ರಸ್ತೆಗಳು ಏಕಮುಖ – ಭಕ್ತರ ಸುಗಮ ಸಂಚಾರಕ್ಕಾಗಿ ಏಕಮುಖ ರಸ್ತೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮತ್ತಷ್ಟು ಓದಿ: ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ

ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಪ್ರಯಾಗ್‌ರಾಜ್‌ಗೆ ಹೊಂದಿಕೊಂಡಿರುವ ಜಿಲ್ಲೆಗಳಿಂದ ಬರುವ ವಾಹನಗಳನ್ನು ಜಿಲ್ಲೆಯ ಗಡಿಯಲ್ಲಿ ನಿಲ್ಲಿಸಲಾಗುತ್ತಿದೆ. ಫೆಬ್ರವರಿ 4 ರವರೆಗೆ ಕಟ್ಟುನಿಟ್ಟಿನ ನಿರ್ಬಂಧಗಳು – ನಗರದಲ್ಲಿ ನಾಲ್ಕು ಚಕ್ರಗಳ ವಾಹನಗಳ ಪ್ರವೇಶಕ್ಕೆ ಸಂಪೂರ್ಣ ನಿಷೇಧವಿದೆ.

ಕುಂಭ ಪ್ರದೇಶದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸುವುದು ಈ ಬದಲಾವಣೆಗಳ ಉದ್ದೇಶವಾಗಿದೆ. ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಪ್ರಯಾಗ್​ರಾಜ್, ಕೌಶಂಬಿ, ವಾರಣಾಸಿ, ಅಯೋಧ್ಯೆ, ಮಿರ್ಜಾಪುರ, ಬಸ್ತಿ, ಜಾನ್‌ಪುರ್, ಚಿತ್ರಕೂಟ, ಬಂದಾ, ಅಂಬೇಡ್ಕರ್‌ನಗರ, ಪ್ರತಾಪಗಢ ಸೇರಿದಂತೆ ಹಲವು ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ತಡರಾತ್ರಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ರಸ್ತೆಗಳಲ್ಲಿ ನಡೆಸುತ್ತಿದ್ದರೆ, ಅವರನ್ನು ಖಾಲಿ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಮೇಳಕ್ಕೆ ಭೇಟಿ ನೀಡುವ ಜನರನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಆದಿತ್ಯನಾಥ್ ಹೇಳಿದರು. ಪ್ರಯಾಗರಾಜ್‌ನ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದು, ತಮ್ಮ ಪವಿತ್ರ ಸ್ನಾನವನ್ನು ಮುಗಿಸಿ ಮನೆಗೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:46 am, Thu, 30 January 25

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ