Mahakumbh Mela: ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದು ಪಾಪ ತೊಳೆದುಕೊಳ್ಳಲಿದ್ದಾರೆ 9 ಸಾವಿರ ಕೈದಿಗಳು

ಉತ್ತರ ಪ್ರದೇಶದ ಜೈಲುಗಳಲ್ಲಿರುವ ಕೈದಿಗಳಿಗೂ ತ್ರಿವೇಣಿ ಸಂಗಮದ ನೀರಿನಲ್ಲಿ ಪವಿತ್ರ ಸ್ನಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಉತ್ತರ ಪ್ರದೇಶದಲ್ಲಿರುವ 75 ಜೈಲುಗಳಿಂದ 9 ಸಾವಿರ ಕೈದಿಗಳು ತ್ರಿವೇಣಿ ಸಂಗಮದ ನೀರಿನಲ್ಲಿ ಪಾಪ ತೊಳೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸಚಿವ ದಾರಾ ಸಿಂಗ್ ಚೌಹಾಣ್ ಮಾಹಿತಿ ನೀಡಿ , ಫೆಬ್ರವರಿ 21ರಂದು ಬೆಳಗ್ಗೆ 9.30ರಿಂದ 10ರವರೆಗೆ ಎಲ್ಲಾ ಜೈಲುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

Mahakumbh Mela: ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದು ಪಾಪ ತೊಳೆದುಕೊಳ್ಳಲಿದ್ದಾರೆ 9 ಸಾವಿರ ಕೈದಿಗಳು
ಜೈಲು
Image Credit source: NDTV

Updated on: Feb 20, 2025 | 12:06 PM

ಲಕ್ನೋ, ಫೆಬ್ರವರಿ 20: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದೇಶ, ವಿದೇಶಗಳಿಂದ ಜನರು ಆಗಮಿಸುತ್ತಿದ್ದಾರೆ. ಹಾಗೆಯೇ ತ್ರಿವೇಣಿ ಸಂಗಮದ ನೀರಿನಿಂದ ಪುಣ್ಯಸ್ನಾನ ಮಾಡಲು ಕೈದಿಗಳಿಗೂ ಅವಕಾಶ ಮಾಡಿಕೊಡಲಾಗಿದೆ. ಉತ್ತರ ಪ್ರದೇಶದಲ್ಲಿರುವ 75 ಜೈಲುಗಳಿಂದ 9 ಸಾವಿರ ಕೈದಿಗಳು ತ್ರಿವೇಣಿ ಸಂಗಮದ ನೀರಿನಲ್ಲಿ ಪಾಪ ತೊಳೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಚಿವ ದಾರಾ ಸಿಂಗ್ ಚೌಹಾಣ್ ಮಾಹಿತಿ ನೀಡಿ , ಫೆಬ್ರವರಿ 21ರಂದು ಬೆಳಗ್ಗೆ 9.30ರಿಂದ 10ರವರೆಗೆ ಎಲ್ಲಾ ಜೈಲುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಉತ್ತರ ಪ್ರದೇಶದ ಜೈಲು ಆಡಳಿತವು ಪ್ರಯಾಗ್​ರಾಜ್​ನ ಸಂಗಮದಿಂದ 75 ಜೈಲುಗಳಿಗೆ ಪವಿತ್ರ ಜಲವನ್ನು ತರಲು ವ್ಯವಸ್ಥೆ ಮಾಡುತ್ತಿದೆ. ರಾಜ್ಯಾದ್ಯಂತ ಏಳು ಕೇಂದ್ರ ಕಾರಾಗೃಹಗಳು ಸೇರಿದಂತೆ 75 ಜೈಲುಗಳಲ್ಲಿ ಪ್ರಸ್ತುತ 90,000 ಕ್ಕೂ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿವಿ ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ ಪವಿತ್ರ ನೀರನ್ನು ಎಲ್ಲಾ ಜೈಲುಗಳಿಗೆ ತರಲಾಗುವುದು ಮತ್ತು ಸಾಮಾನ್ಯ ನೀರಿನೊಂದಿಗೆ ಬೆರೆಸಿ ಜೈಲು ಆವರಣದೊಳಗಿನ ಸಣ್ಣ ತೊಟ್ಟಿಯಲ್ಲಿ ಸಂಗ್ರಹಿಸಲಾಗುವುದು. ಪ್ರಾರ್ಥನೆಯ ನಂತರ ಎಲ್ಲಾ ಕೈದಿಗಳು ನೀರಿನಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Mahakumbh Mela 2025: ತ್ರಿವೇಣಿ ಸಂಗಮದಲ್ಲಿ ಪತ್ನಿಯೊಂದಿಗೆ ಪುಣ್ಯಸ್ನಾನ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಫೆಬ್ರವರಿ 21 ರಂದು ಲಕ್ನೋ ಜೈಲಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಚೌಹಾಣ್, ಹಿರಿಯ ಜೈಲು ಅಧಿಕಾರಿಗಳೊಂದಿಗೆ ಭಾಗವಹಿಸುವ ನಿರೀಕ್ಷೆಯಿದೆ. ಗೋರಖ್‌ಪುರ ಜಿಲ್ಲಾ ಕಾರಾಗೃಹದ ಜೈಲರ್ ಎ.ಕೆ. ಕುಶ್ವಾಹ ಮಾತನಾಡಿ, ಪ್ರಯಾಗ್‌ರಾಜ್‌ನ ಸಂಗಮದಿಂದ ಪವಿತ್ರ ಜಲವನ್ನು ಸಂಗ್ರಹಿಸಲು ಜೈಲು ಆಡಳಿತವು ಜೈಲು ಸಿಬ್ಬಂದಿ ಅರುಣ್ ಮೌರ್ಯ ಅವರನ್ನು ಕಳುಹಿಸಿದೆ.

ಮಹಾ ಕುಂಭದಲ್ಲಿ ಕೈದಿಗಳು ಸಹ ಭಾಗವಹಿಸುವಂತೆ ಖಚಿತಪಡಿಸಿಕೊಳ್ಳಲು ‘ಗಂಗಾಜಲ’ವನ್ನು ನಿಯಮಿತ ನೀರಿನೊಂದಿಗೆ ಬೆರೆಸಲಾಗುವುದು ಎಂದು ಅವರು ಹೇಳಿದರು. ಏತನ್ಮಧ್ಯೆ, ಫೆಬ್ರವರಿ 17 ರಂದು ಉನ್ನಾವ್ ಜೈಲು ತನ್ನ ಕೈದಿಗಳಿಗಾಗಿ ಇದೇ ರೀತಿಯ ಕಾರ್ಯಕ್ರಮವನ್ನು ಆಯೋಜಿಸಿತು. ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ ಫೆಬ್ರವರಿ 26 ರಂದು ಮುಕ್ತಾಯಗೊಳ್ಳಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:18 am, Thu, 20 February 25