
ಪ್ರಯಾಗ್ರಾಜ್, ಫೆಬ್ರವರಿ 27: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳ(Mahakumbh Mela)ವನ್ನು ಪ್ರಧಾನಿ ಮೋದಿ‘ ಏಕತೆಯ ಮಹಾಯಜ್ಞ’ ಎಂದು ಬಣ್ಣಿಸಿದ್ದಾರೆ. ಈ ಕುರಿತು ಬ್ಲಾಗ್ ಬರೆದಿದ್ದು, ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಲು ಒಟ್ಟಾಗಿ ಬಂದ 140 ಕೋಟಿ ಭಾರತೀಯರ ಭಕ್ತಿ ಮತ್ತು ಭಾಗವಹಿಸುವಿಕೆಗೆ ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.
45 ದಿನಗಳ ಕಾಲ ನಡೆದ ಮಹಾಕುಂಭವನ್ನು ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ಪ್ರತಿಬಿಂಬ ಎಂದು ಪ್ರಧಾನಿ ಮೋದಿ ಬಣ್ಣಿಸಿದರು. ಸಮಾಜದ ಎಲ್ಲಾ ವರ್ಗಗಳ ಜನರು ನಂಬಿಕೆ ಮತ್ತು ಭಕ್ತಿಯಲ್ಲಿ ಹೇಗೆ ಒಂದಾಗುತ್ತಾರೆ ಎಂಬುದನ್ನು ಒತ್ತಿ ಹೇಳಿದರು.
ಈ ಕಾರ್ಯಕ್ರಮವು ಏಕ ಭಾರತ ಶ್ರೇಷ್ಠ ಭಾರತ ಎನ್ನುವ ಪರಿಕಲ್ಪನೆಯನ್ನು ಸಾಕಾರಗೊಳಿಸಿತು. ಇದು ಲಕ್ಷಾಂತರ ಭಕ್ತರ ಮೇಲೆ ಶಾಶ್ವತವಾದ ಪ್ರಭಾವ ಬೀರಿತು.
ಮತ್ತಷ್ಟು ಓದಿ: Mahakumbh: ಮಹಾಕುಂಭದಲ್ಲಿ 45 ದಿನದಲ್ಲಿ 66 ಕೋಟಿಗೂ ಹೆಚ್ಚು ಭಕ್ತರಿಂದ ಪುಣ್ಯ ಸ್ನಾನ
ಈ ಮಹಾಕುಂಭದಲ್ಲಿ ಸಮಾಜದ ಪ್ರತಿಯೊಂದು ವರ್ಗದ ಜನರು ಒಟ್ಟಿಗೆ ಬಂದರು. ಈ ಅವಿಸ್ಮರಣೀಯ ಏಕತೆಯ ದೃಶ್ಯವು ಕೋಟ್ಯಂತರ ಭಾರತೀಯರಿಗೆ ಆತ್ಮ ವಿಶ್ವಾಸದ ಹಬ್ಬವಾಯಿತು. ಈ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಜನರ ಪ್ರಯತ್ನಗಳು, ಸಮರ್ಪಣೆ ಮತ್ತು ದೃಢಸಂಕಲ್ಪವು ನನ್ನನ್ನು ತುಂಬಾ ಪ್ರಭಾವಿಸಿದೆ ಎಂದು ಬರೆದಿದ್ದಾರೆ.
ಮಹಾಕುಂಭ ಮೇಳದ ನಂತರ, ಪ್ರಧಾನಿ ಮೋದಿ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಸೋಮನಾಥ ದೇವಾಲಯಕ್ಕೆ ಭೇಟಿ ನೀಡುವುದಾಗಿ ಘೋಷಿಸಿದರು. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ, ಎಲ್ಲಾ ಭಾರತೀಯರ ಯೋಗಕ್ಷೇಮ ಮತ್ತು ಏಕತೆಗಾಗಿ ಪ್ರಾರ್ಥಿಸುವ ಬಯಕೆಯನ್ನು ಅವರು ವ್ಯಕ್ತಪಡಿಸಿದರು.
ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ ಸೋಮನಾಥಕ್ಕೆ ನಾನು ಪ್ರಾರ್ಥನೆ ಸಲ್ಲಿಸಲು ಭೇಟಿ ನೀಡುತ್ತೇನೆ. ನನ್ನ ಭಕ್ತಿಯ ಕಾಣಿಕೆಗಳನ್ನು ಪ್ರತಿಯೊಬ್ಬ ಭಾರತೀಯನಿಗಾಗಿ ಅರ್ಪಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ. ನಮ್ಮ ರಾಷ್ಟ್ರದ ಜನರಲ್ಲಿ ಈ ಶಾಶ್ವತ ಏಕತೆಯ ಹರಿವು ನಿರಂತರವಾಗಿ ಮುಂದುವರಿಯಲಿ ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದರು.
ಮೋದಿ ಬರೆದಿದ್ದೇನು?
महाकुंभ संपन्न हुआ…एकता का महायज्ञ संपन्न हुआ। प्रयागराज में एकता के महाकुंभ में पूरे 45 दिनों तक जिस प्रकार 140 करोड़ देशवासियों की आस्था एक साथ, एक समय में इस एक पर्व से आकर जुड़ी, वो अभिभूत करता है! महाकुंभ के पूर्ण होने पर जो विचार मन में आए, उन्हें मैंने कलमबद्ध करने का… pic.twitter.com/TgzdUuzuGI
— Narendra Modi (@narendramodi) February 27, 2025
ಪ್ರಯಾಗ್ರಾಜ್ನಲ್ಲಿ ನಡೆದ 2025 ರ ಮಹಾಕುಂಭವು ಭಾರತದ ಶ್ರೀಮಂತ ಸಂಪ್ರದಾಯಗಳು, ಆಳವಾಗಿ ಬೇರೂರಿರುವ ನಂಬಿಕೆ ಮತ್ತು ಏಕತೆಯ ಮನೋಭಾವವನ್ನು ಎತ್ತಿ ಹಿಡಿದಿದೆ.
ಒಂದೇ ನದಿಯ ದಡದಲ್ಲಿ, ತ್ರಿವೇಣಿ ಸಂಗಮದಲ್ಲಿ, ಕೋಟ್ಯಂತರ ಸಂಖ್ಯೆಯಲ್ಲಿ ಜನರು ಹೇಗೆ ಒಟ್ಟುಗೂಡಿದರು ಎಂಬುದನ್ನು ನೋಡಿ ಇಡೀ ಜಗತ್ತು ಆಶ್ಚರ್ಯಚಕಿತವಾಗಿದೆ. ಈ ಕೋಟ್ಯಂತರ ಜನರಿಗೆ ಔಪಚಾರಿಕ ಆಹ್ವಾನವೂ ಇರಲಿಲ್ಲ ಅಥವಾ ಅವರು ಯಾವ ಸಮಯಕ್ಕೆ ಬರಬೇಕೆಂಬುದರ ಬಗ್ಗೆ ಯಾವುದೇ ಪೂರ್ವ ಮಾಹಿತಿಯೂ ಇರಲಿಲ್ಲ. ಹೀಗೆ ಜನರು ಮಹಾ ಕುಂಭಕ್ಕೆ ಹೊರಟರು. ಮತ್ತು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿ ಆಶೀರ್ವಾದ ಪಡೆದರು.
ಆ ಚಿತ್ರಗಳನ್ನು ನಾನು ಮರೆಯಲು ಸಾಧ್ಯವಿಲ್ಲ ಸ್ನಾನದ ನಂತರ ಅಪಾರ ಸಂತೋಷ ಮತ್ತು ತೃಪ್ತಿಯಿಂದ ತುಂಬಿದ ಆ ಮುಖಗಳನ್ನು ನಾನು ಮರೆಯಲು ಸಾಧ್ಯವಿಲ್ಲ. ಮಹಿಳೆಯರು, ವೃದ್ಧರು ಅಥವಾ ದಿವ್ಯಾಂಗರು, ಎಲ್ಲರೂ ಸಂಗಮಕ್ಕೆ ಬಂದಿದ್ದರು ಎಂದು ಮೋದಿ ಹೇಳಿದ್ದಾರೆ. ಮಹಾಕುಂಭ ಮೇಳಕ್ಕೆ 45 ದಿನಗಳಲ್ಲಿ 66 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ