AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಜೀವನ ಎಲ್ಲ ಭಾರತೀಯರಿಗೂ ಸ್ಫೂರ್ತಿ’; ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಉದ್ಯಮಿ ಮಹಾನಾರ್ಯಮಾನ್ ಸಿಂಧಿಯಾ

ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ಸೆಲೆಬ್ರಿಟಿಗಳು ಮತ್ತು ಯುವ ನಾಯಕರಿಂದ ಶುಭಾಶಯಳ ಮಹಾಪೂರವೇ ಹರಿದುಬರುತ್ತಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರ ಮಹಾನಾರ್ಯಮಾನ್ ಸಿಂಧಿಯಾ ಕೂಡ ಪ್ರಧಾನಿ ಮೋದಿಯವರಿಗೆ ತಮ್ಮ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅವರು ಪ್ರಧಾನಿಯವರೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶೇಷ ಸಂದೇಶವನ್ನು ಬರೆದಿದ್ದಾರೆ.

'ನಿಮ್ಮ ಜೀವನ ಎಲ್ಲ ಭಾರತೀಯರಿಗೂ ಸ್ಫೂರ್ತಿ'; ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಉದ್ಯಮಿ ಮಹಾನಾರ್ಯಮಾನ್ ಸಿಂಧಿಯಾ
ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮಹಾನಾರ್ಯಮಾನ್ ಸಿಂಧಿಯಾ
ಸುಷ್ಮಾ ಚಕ್ರೆ
|

Updated on:Sep 17, 2026 | 6:51 PM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ದೇಶಾದ್ಯಂತ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ, ಯುವ ನಾಯಕ ಮಹಾನಾರ್ಯಮಾನ್ ಸಿಂಧಿಯಾ ಅವರು ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ್ದು, ಅವರ ಜೀವನವು ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಟ್ವೀಟ್ ಮಾಡಿದ್ದಾರೆ.

“ರಾಷ್ಟ್ರಕ್ಕೆ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೀವನವು ಪ್ರತಿಯೊಬ್ಬ ಭಾರತೀಯರಿಗೂ ರಾಷ್ಟ್ರೀಯ ಸೇವೆಯ ಹಾದಿಯಲ್ಲಿ ದಣಿವರಿಯಿಲ್ಲದೆ ಮತ್ತು ನಿರಂತರವಾಗಿ ಮುಂದುವರಿಯಲು ಒಂದು ದೊಡ್ಡ ಸ್ಫೂರ್ತಿಯಾಗಿದೆ. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಮಹಾನಾರ್ಯಮಾನ್ ಸಿಂಧಿಯಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Mahanaaryaman Scindia (1)

ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮಹಾನಾರ್ಯಮಾನ್ ಸಿಂಧಿಯಾ

ಮಹಾನಾರ್ಯಮಾನ್ ಸಿಂಧಿಯಾ ಭಾರತೀಯ ಉದ್ಯಮಿ, ಕ್ರೀಡಾ ಆಡಳಿತಗಾರ ಮತ್ತು ಗ್ವಾಲಿಯರ್‌ನ ರಾಜಮನೆತನಕ್ಕೆ ಸಂಬಂಧಿಸಿದ ವ್ಯಕ್ತಿ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರನೂ ಆಗಿರುವ ಮಹಾನಾರ್ಯಮಾನ್ ಸಿಂಧಿಯಾ ಡೆಹ್ರಾಡೂನ್‌ನ ಡೂನ್ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರೈಸಿದ್ದಾರೆ. ಬಳಿಕ, ಅಮೆರಿಕದ ಪ್ರತಿಷ್ಠಿತ ಯೇಲ್ ಯೂನಿವರ್ಸಿಟಿಯಿಂದ ಪದವಿ ಪಡೆದಿದ್ದಾರೆ. ನಂತರ ಎಂಡಿಐ ಗುರ್‌ಗಾಂವ್‌ನಿಂದ ಎಂಬಿಎ ಮುಗಿಸಿದ್ದಾರೆ.

ಇದನ್ನೂ ಓದಿ: 76 ವರ್ಷಕ್ಕೆ 76 ಕಪ್ ಚಹಾ ಫ್ರೀ: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಅಭಿಮಾನ ಮೆರೆದ ಚಹಾ ವ್ಯಾಪಾರಿ

ಇವರು ‘ಮೈಮಂಡಿ’ ಎಂಬ ಬಿ೨ಬಿ ಸ್ಟಾರ್ಟಪ್​ನ ಸಹ-ಸಂಸ್ಥಾಪಕರಾಗಿದ್ದಾರೆ. ಈ ಸಂಸ್ಥೆಯು ತರಕಾರಿ ಮಾರಾಟಗಾರರು, ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯ ರೈತರಿಗೆ ಮಾರುಕಟ್ಟೆ ಹಾಗೂ ಪೂರೈಕೆ ಸರಪಳಿಯನ್ನು ಸುಲಭಗೊಳಿಸುವ ಕೆಲಸ ಮಾಡುತ್ತದೆ. ಹಾಗೇ, ಮಧ್ಯಪ್ರದೇಶದ ಕ್ರಿಕೆಟ್ ಆಡಳಿತದಲ್ಲಿ ಸಕ್ರಿಯವಾಗಿರುವ ಇವರು, ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 17 September 26

Follow Us
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ