AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ನರೇಂದ್ರ ಗಿರಿ ಸಾವಿನ ಕೇಸ್​ ತನಿಖೆಗೆ ಸಿಬಿಐಗೆ ಶಿಫಾರಸು ಮಾಡಿದ ಯೋಗಿ ಆದಿತ್ಯನಾಥ್​; ಇನ್ನೊಬ್ಬನ ಬಂಧನ

Mahant Narendra Giri: ಭಾರತದ ಸಾಧುಗಳ ಅತಿದೊಡ್ಡ ಸಂಘಟನೆಯಾದ ಆಖಾಡ ಪರಿಷತ್​ ಅಧ್ಯಕ್ಷ ಮಹಾಂತ ನರೇಂದ್ರ ಗಿರಿಯವರ ಶವ, ಅಲಹಾಬಾದ್​​ನ ಬಾಘಂಬರಿ ಮಠದ ಕೋಣೆಯಲ್ಲಿ ಸೋಮವಾರ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಮಹಾಂತ ನರೇಂದ್ರ ಗಿರಿ ಸಾವಿನ ಕೇಸ್​ ತನಿಖೆಗೆ ಸಿಬಿಐಗೆ ಶಿಫಾರಸು ಮಾಡಿದ ಯೋಗಿ ಆದಿತ್ಯನಾಥ್​; ಇನ್ನೊಬ್ಬನ ಬಂಧನ
ಮಹಾಂತ ನರೇಂದ್ರ ಗಿರಿ ಸ್ವಾಮೀಜಿ
TV9 Web
| Edited By: |

Updated on:Sep 23, 2021 | 9:31 AM

Share

ನೊಯ್ಡಾ: ಅಖಿಲ ಭಾರತೀಯ ಆಖಾಡ ಪರಿಷದ್​ ಅಧ್ಯಕ್ಷ ಮಹಾಂತ ನರೇಂದ್ರ ಗಿರಿಯವರ (Mahant Narendra Giri Death) ಅಂತಿಮ ಸಂಸ್ಕಾರ ಬಾಘಂಬರಿ ಮಠದ ಆವರಣದಲ್ಲಿ ನಡೆದಿದೆ. ಅದರ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸ (Uttar Pradesh Police)ರು ಇನ್ನೊಬ್ಬನನ್ನು ಬಂಧಿಸಿದ್ದಾರೆ.  ಮಹಾಂತ ನರೇಂದ್ರ ಗಿರಿಯವರ ಇಬ್ಬರು ಶಿಷ್ಯರನ್ನು ಈಗಾಗಲೇ ಪೋಲೀಸರು ಬಂಧಿಸಿದ್ದು, ಇದೀಗ ಸಂದೀಪ್​ ತಿವಾರಿ ಎಂಬಾತನನ್ನೂ ವಶಕ್ಕೆ ಪಡೆದಿದ್ದಾಗಿ ಜಾರ್ಜ್​ ಟೌನ್​ ಠಾಣೆ ಪೊಲೀಸ್​ ಅಧಿಕಾರಿ ಮಹೇಶ್​ ಸಿಂಗ್​ ಹೇಳಿದ್ದಾರೆ.  

ಮಹಾಂತ ನರೇಂದ್ರ ಗಿರಿ ಸಾವಿನ ಪ್ರಕರಣ ಒಂದು ಕಗ್ಗಂಟಾಗಿದ್ದು, ಬುಧವಾರ ರಾತ್ರಿ ಯೋಗಿ ಆದಿತ್ಯನಾಥ್​ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಗೃಹ ಇಲಾಖೆ ಟ್ವೀಟ್ ಮಾಡಿ ದೃಢಪಡಿಸಿದೆ. ಇನ್ನು ಮಹಾಂತ ನರೇಂದ್ರ ಗಿರಿಯವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಮಾತನಾಡಿದ್ದ ಯೋಗಿ ಆದಿತ್ಯನಾಥ್​, ಹಲವು ಸಾಕ್ಷಿಗಳು ದೊರೆತಿವೆ. ಆರೋಪಿಗಳನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದಿದ್ದರು.

ಭಾರತದ ಸಾಧುಗಳ ಅತಿದೊಡ್ಡ ಸಂಘಟನೆಯಾದ ಆಖಾಡ ಪರಿಷತ್​ ಅಧ್ಯಕ್ಷ ಮಹಾಂತ ನರೇಂದ್ರ ಗಿರಿಯವರ ಶವ, ಅಲಹಾಬಾದ್​​ನ ಬಾಘಂಬರಿ ಮಠದ ಕೋಣೆಯಲ್ಲಿ ಸೋಮವಾರ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಾಮೀಜಿಯವರ ಇಬ್ಬರು ಶಿಷ್ಯಂದಿರಾದ ಆನಂದ ಗಿರಿ ಮತ್ತ ಆಧ್ಯ ಪ್ರಸಾದ್​ ತಿವಾರಿ ಎಂಬುವರನ್ನು ಪೊಲೀಸರು ಬಂಧಿಸಿ ಸ್ಥಳೀಯ ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಅವರಿಬ್ಬರಿಗೂ ಸದ್ಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅದರಲ್ಲೂ ಆನಂದ್ ಗಿರಿಯೇ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದಿಸಿದ್ದು ಎಂಬ ಆರೋಪ ಬಲವಾಗಿದೆ.  ಮಹಾಂತ ಗಿರಿ ಸಾವಿಗೆ ಸಂಬಂಧಪಟ್ಟಂತೆ ಡೆತ್​ನೋಟ್​, ವಿಡಿಯೋಗಳೆಲ್ಲ ಸಿಕ್ಕಿದೆ.  ಅದರಲ್ಲೂ ಡೆತ್​ ನೋಟ್​ನಲ್ಲಿ ಆನಂದ ಗಿರಿ ಹೆಸರೇ ಉಲ್ಲೇಖವಾಗಿದ್ದು, ಆತ ನನಗೆ ಬ್ಲ್ಯಾಕ್​ ಮೇಲ್​ ಮಾಡುತ್ತಿರುವುದಾಗಿ ಆರೋಪಿಸಲಾಗಿದೆ.

ಎಸ್​ಐಟಿ ರಚನೆಯಾಗಿತ್ತು ನರೇಂದ್ರ ಗಿರಿ ಸಾವಿನ ತನಿಖೆ ನಡೆಸುವ ಸಂಬಂಧ 18 ಸಿಬ್ಬಂದಿಯುಳ್ಳ ಎಸ್​ಐಟಿಯನ್ನು ಉತ್ತರ ಪ್ರದೇಶ ಸರ್ಕಾರ ರಚನೆ ಮಾಡಲಾಗಿತ್ತು. ಆದರೆ ಪ್ರತಿಪಕ್ಷಗಳು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದವು. ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಿಬಿಐಗೆ ಶಿಫಾರಸ್ಸು ಮಾಡಿದ್ದಾರೆ.

ಇದನ್ನೂ ಓದಿ: ಮಹಾಂತ ನರೇಂದ್ರ ಗಿರಿ ಸಾವಿಗೆ ಬ್ಲ್ಯಾಕ್​ಮೇಲ್ ತಿರುವು ಕೊಟ್ಟ ಮರಣಪತ್ರ ಬರೆದವರು ಯಾರು? ಪತ್ರದಲ್ಲಿ ಏನಿದೆ?

ಕೇಶ್​ ಟಿಕಾಯತ್​ಗೆ ತಿರುಗೇಟು ನೀಡಿದ ಅಸಾದುದ್ದೀನ್​ ಓವೈಸಿ

(Mahant Narendra Giri’s Death UP Chief Minister Yogi Adityanath Recommends CBI Probe)

Published On - 9:23 am, Thu, 23 September 21

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು