ಮಹಾರಾಷ್ಟ್ರ: ಪೊಲೀಸರಿಗೆ ಹುಲ್ಲು ಕತ್ತರಿಸುವ ಶಿಕ್ಷೆ ಕೊಟ್ಟ ನ್ಯಾಯಾಲಯ

ನ್ಯಾಯಾಲಯಕ್ಕೆ ತಡವಾಗಿ ಬಂದಿದ್ದಕ್ಕೆ ಜಿಲ್ಲಾ ನ್ಯಾಯಾಧೀಶರು ಹುಲ್ಲು ಕತ್ತರಿಸುವ ಶಿಕ್ಷೆ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮನ್ವತ್​ನಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಅನುಮಾನಾಸ್ಪದವಾಗಿ ಅಡ್ಡಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದರು.

ಮಹಾರಾಷ್ಟ್ರ: ಪೊಲೀಸರಿಗೆ ಹುಲ್ಲು ಕತ್ತರಿಸುವ ಶಿಕ್ಷೆ ಕೊಟ್ಟ ನ್ಯಾಯಾಲಯ
ನ್ಯಾಯಾಲಯ

Updated on: Nov 22, 2023 | 10:42 AM

ನ್ಯಾಯಾಲಯಕ್ಕೆ ತಡವಾಗಿ ಬಂದಿದ್ದಕ್ಕೆ ಜಿಲ್ಲಾ ನ್ಯಾಯಾಧೀಶರು ಹುಲ್ಲು ಕತ್ತರಿಸುವ ಶಿಕ್ಷೆ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮನ್ವತ್​ನಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಅನುಮಾನಾಸ್ಪದವಾಗಿ ಅಡ್ಡಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದರು.

ಬೆಳಗ್ಗೆ 11 ಗಂಟೆಗೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಿತ್ತು, ಆದರೆ ಅರ್ಧ ಗಂಟೆ ತಡವಾಗಿ ಪೊಲೀಸರು ನ್ಯಾಯಾಲಯಕ್ಕೆ ಹಾಜರಾಗಿದ್ದರು, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು ಅವರಿಗೆ ಹುಲ್ಲು ಕತ್ತರಿಸುವ ಶಿಕ್ಷೆ ನೀಡಿದ್ದಾರೆ.

ಎಸ್‌ಪಿ ಉಸ್ತುವಾರಿ ಯಶವಂತ್ ಕಾಳೆ ಅವರು ಖಚಿತಪಡಿಸಿದ್ದಾರೆ. ಕಾನ್‌ಸ್ಟೆಬಲ್‌ಗಳ ಹೇಳಿಕೆಗಳೊಂದಿಗೆ ವಿವರವಾದ ವರದಿಯನ್ನು ಸೂಕ್ತ ಕ್ರಮಕ್ಕಾಗಿ ನ್ಯಾಯಾಂಗಕ್ಕೆ ಸಲ್ಲಿಸಲಾಗಿದೆ ಎಂದು ಸೂಚಿಸಿದ್ದಾರೆ. ಘಟನೆಗೆ ಸಾಕ್ಷಿಯಾದ ಇತರ ಮೂವರು ಕಾನ್‌ಸ್ಟೆಬಲ್‌ಗಳ ಸಾಕ್ಷ್ಯಗಳನ್ನು ಟೈಮ್ಸ್ ಆಫ್ ಇಂಡಿಯಾ (TOI) ವರದಿ ಮಾಡಿದಂತೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Viral Video: ‘ನನಗೇ ಗಾಡಿ ತೆಗಿ ಅಂತೀಯಾ?’ ಟ್ರಾಫಿಕ್ ಪೊಲೀಸನಿಗೆ ಚಪ್ಪಲಿಯಿಂದ ಬಾರಿಸಿದ ‘ದಬಂಗ್’ ಮಹಿಳೆ

ಈ ಶಿಕ್ಷೆಯಿಂದ ಕೋಪಗೊಂಡ ಪೊಲೀಸರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮನ್ವತ್ ಪೊಲೀಸ್ ಠಾಣೆಯ ಕಾನ್​ಸ್ಟೆಬಲ್ ಮತ್ತು ಹೆಡ್ ಕಾನ್​ಸ್ಟೆಬಲ್ ಹುಲ್ಲು ಕಡಿಯುವ ಶಿಕ್ಷೆಗೆ ಗುರಿಯಾಗಿದ್ದಾರೆ. ಇಡೀ ಘಟನೆಯನ್ನು ಅಕ್ಟೋಬರ್ 22ರಂದು ಪೊಲೀಸ್ ಠಾಣೆಯ ಡೈರಿಯಲ್ಲಿ ದಾಖಲಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us