AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 300ಕ್ಕೂ ಹೆಚ್ಚು ಜನರು ಅಸ್ವಸ್ಥ

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿ 300 ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಿಂದಾಗಿ ರಸ್ತೆಯಲ್ಲೇ ಚಿಕಿತ್ಸೆ ನೀಡಲಾಯಿತು.

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 300ಕ್ಕೂ ಹೆಚ್ಚು ಜನರು ಅಸ್ವಸ್ಥ
Image Credit source: India Today
ನಯನಾ ರಾಜೀವ್
|

Updated on: Feb 21, 2024 | 2:14 PM

Share

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಒಂದು ವಾರದ ಧಾರ್ಮಿಕ ಕಾರ್ಯಕ್ರಮವಾದ ಹರಿಣಂ ಸಪ್ತಾಹದ ಕೊನೆಯ ದಿನದಂದು ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಬುಲ್ಧಾನ ಜಿಲ್ಲಾಧಿಕಾರಿ ಕಿರಣ್ ಪಾಟೀಲ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯ ಹೊರಗೆ ಹಲವಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು, ಸಲೈನ್ ಬಾಟಲಿಗಳನ್ನು ಮರಗಳಿಗೆ ಕೊಕ್ಕೆಯಿಂದ ನೇತುಹಾಕಲಾಗಿದೆ. ಸೋಮಠಾಣಾ ಮತ್ತು ಖಾಪರಖೇಡ್ ಗ್ರಾಮಗಳ ಭಕ್ತರು ರಾತ್ರಿ 10 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಪ್ರಸಾದವನ್ನು ಸೇವಿಸಿದ

ನಂತರ , ಅವರು ಹೊಟ್ಟೆ ನೋವು, ವಾಕರಿಕೆ ಮತ್ತು ವಾಂತಿಯಿಂದ ಬಳಲಿದ್ದಾರೆ. ಅಸ್ವಸ್ಥರಾದ ಜನರನ್ನು ಬೀಬಿ ಗ್ರಾಮದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಬೆಡ್‌ಗಳ ಕೊರತೆಯಿಂದಾಗಿ ಬಹುತೇಕ ರೋಗಿಗಳು ಆಸ್ಪತ್ರೆಯ ಹೊರಭಾಗದ ರಸ್ತೆಯಲ್ಲೇ ಚಿಕಿತ್ಸೆ ಪಡೆಯಬೇಕಾಯಿತು. ಮರಗಳಿಗೆ ಕೊಕ್ಕೆ ಹಾಕಿದ್ದ ಹಗ್ಗಗಳ ಮೇಲೆ ಸಲೈನ್ ಬಾಟಲಿಗಳನ್ನು ಅಳವಡಿಸಲಾಗಿತ್ತು.

ಮತ್ತಷ್ಟು ಓದಿ: ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು

ಇದು ಸೋಮಠಾಣಾದಲ್ಲಿ ಧಾರ್ಮಿಕ ಕಾರ್ಯಕ್ರಮದ ಆರನೇ ದಿನವಾಗಿತ್ತು. 400 ರಿಂದ 500 ಜನರಿಗೆ ಏಕಾದಶಿ ಪ್ರಸಾದ ವಿತರಿಸಲಾಯಿತು. ಎಲ್ಲ ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಬಹುತೇಕರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಾಟೀಲ್ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾದರೆ ಆಂಬ್ಯುಲೆನ್ಸ್ ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಪ್ರಸಾದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಮತ್ತು ವಿಚಾರಣೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ