AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ; ಐವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ

ಮಹಾರಾಷ್ಟ್ರದ ನಾಗ್ಪುರ ಬಳಿಯ ಸ್ಫೋಟಕ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರ್ಖಾನೆಯ ಮ್ಯಾನೇಜರ್ ಹಾಗೂ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ; ಐವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ
ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ
ಸುಷ್ಮಾ ಚಕ್ರೆ
|

Updated on: Jun 13, 2024 | 5:02 PM

Share

ನಾಗ್ಪುರ: ಮಹಾರಾಷ್ಟ್ರದ (Maharashtra) ನಾಗ್ಪುರದ ಬಳಿ ನಡೆದ ದುರಂತ ಘಟನೆಯೊಂದರಲ್ಲಿ, ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಇನ್ನೂ ಐವರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ಅವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಧಮ್ನಾ ಗ್ರಾಮದ ಚಾಮುಂಡಿ ಎಕ್ಸ್‌ಪ್ಲೋಸಿವ್ ಪ್ರೈವೇಟ್ ಲಿಮಿಟೆಡ್​ನಲ್ಲಿ ಈ ಘಟನೆ ನಡೆದಿದೆ.

ಕಾರ್ಮಿಕರು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಧಮ್ನಾದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 5 ಜನರು ಸಾವನ್ನಪ್ಪಿದ್ದಾರೆ ಮತ್ತು 5 ಜನರು ಗಾಯಗೊಂಡಿದ್ದಾರೆ. ನಮ್ಮ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ” ಎಂದು ನಾಗ್ಪುರದ ಪೊಲೀಸ್ ಆಯುಕ್ತ ರವೀಂದರ್ ಸಿಂಗಲ್ ತಿಳಿಸಿದ್ದಾರೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಜೂ. 16ರವರೆಗೆ ಗುಡುಗು ಸಹಿತ ಮಳೆ ಆರ್ಭಟ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಎನ್‌ಸಿಪಿ-ಎಸ್‌ಸಿಪಿ ನಾಯಕ ಅನಿಲ್ ದೇಶಮುಖ್ ಕೂಡ ಘಟನಾ ಸ್ಥಳದಲ್ಲಿದ್ದಾರೆ. ಘಟಕದ ವ್ಯವಸ್ಥಾಪಕ ಮತ್ತು ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಎನ್‌ಸಿಪಿ-ಎಸ್‌ಸಿಪಿ ನಾಯಕ ಅನಿಲ್ ದೇಶಮುಖ್ ಹೇಳಿದ್ದಾರೆ. “ಈ ಸ್ಫೋಟದ ಘಟನೆ ಗ್ರಾಮದ ದಮ್ಮನ ಬಳಿಯ ಸ್ಫೋಟಕ ಘಟಕದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಘಟಕದ ವ್ಯವಸ್ಥಾಪಕ ಮತ್ತು ಮಾಲೀಕರು ತಲೆಮರೆಸಿಕೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ,” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?