AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು

ಮಹಾರಾಷ್ಟ್ರದ ಭೀವಂಡಿಯಲ್ಲಿ 5 ವರ್ಷದ ಬಾಲಕ ತೆರೆದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದ್ದು, ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ. ಕಟ್ಟಡ ಆವರಣದಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂತಹ ಸರಣಿ ದುರಂತಗಳನ್ನು ತಡೆಯಲು ಎಲ್ಲಾ ವಸತಿ ಸಂಕೀರ್ಣಗಳಲ್ಲಿ ಕಡ್ಡಾಯ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲು ಸಾರ್ವಜನಿಕರು ಆಡಳಿತವನ್ನು ಒತ್ತಾಯಿಸಿದ್ದಾರೆ. ಇದು ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಚಿಂತನೆಗೆ ಹಚ್ಚಿದೆ.

ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು
ಬಾಲಕ Image Credit source: X Account- Devesh
ನಯನಾ ರಾಜೀವ್
|

Updated on: Jun 16, 2026 | 9:55 AM

Share

ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್​ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ನೇರವಾಗಿ ಟ್ಯಾಂಕ್ ಒಳಗಡೆ ಬಿದ್ದಿದ್ದಾನೆ.

ಬಾಲಕ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣವೇ ಮಗುವನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ.

ಸೆಪ್ಟಿಕ್ ಟ್ಯಾಂಕ್‌ನ ಮುಚ್ಚಳವನ್ನು ಸುರಕ್ಷಿತವಾಗಿ ಮುಚ್ಚದೇ ಇರುವುದೇ ಮುಗ್ಧ ಬಾಲಕನ ಸಾವಿಗೆ ನೇರ ಕಾರಣ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಭೀವಂಡಿ ಪ್ರದೇಶದಲ್ಲಿ ಇಂತಹ ನಿರ್ಲಕ್ಷ್ಯದ ಘಟನೆಗಳು ಇದೇ ಮೊದಲಲ್ಲ, ಈ ಹಿಂದೆಯೂ ಸಹ ತೆರೆದ ಹೊಂಡ ಹಾಗೂ ಟ್ಯಾಂಕ್‌ಗಳಿಗೆ ಬಿದ್ದು ಹಲವು ಜೀವಗಳು ಬಲಿಯಾಗಿವೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ವಸತಿ ಸಂಕೀರ್ಣಗಳಲ್ಲಿ ಕಡ್ಡಾಯ ಸುರಕ್ಷತಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸಾರ್ವಜನಿಕರು ಆಡಳಿತವನ್ನು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ

ಕಳೆದ ವರ್ಷ ಜಾರ್ಖಂಡ್‌ನ ಜಂಶೇದ್​ಪುರದ ಆಸ್ತಾ ಸಿಟಿ ಎಂಬಲ್ಲಿಯೂ ಇಂತಹುದೇ ಹೃದಯವಿದ್ರಾವಕ ಘಟನೆ ನಡೆದಿತ್ತು. ಅಲ್ಲಿ ತಂದೆಯ ಜೊತೆ ಕೆಲಸದ ಜಾಗಕ್ಕೆ ಹೋಗಿದ್ದ 5 ವರ್ಷದ ಆದರ್ಶ್ ಕುಮಾರ್ ಎಂಬ ಬಾಲಕ ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದ.

ವಿಡಿಯೋ

ಇಂತಹ ಸರಣಿ ದುರಂತಗಳು ವಸತಿ ಸಂಕೀರ್ಣಗಳಲ್ಲಿ ಮುಚ್ಚದ ನೀರಿನ ಹೊಂಡಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳು ಮಕ್ಕಳ ಪಾಲಿಗೆ ಎಷ್ಟು ಅಪಾಯಕಾರಿ ಎಂಬುದನ್ನು ನೆನಪಿಸುತ್ತವೆ. ಆಡಳಿತ ಮಂಡಳಿಗಳು ಹಾಗೂ ಪೋಷಕರು ಇಂತಹ ಜಾಗಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಉತ್ತಮ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ