ಮಹಾರಾಷ್ಟ್ರ: ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥ

ಮಹಾರಾಷ್ಟ್ರದ ಲಾತೂರ್​ನಲ್ಲಿರುವ ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು ಎಂದು ಹೇಳಲಾಗುತ್ತಿದೆ. ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ ಮತ್ತು ಸೊಪ್ಪಿನ ಸಾರು ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥ
ಆಸ್ಪತ್ರೆImage Credit source: DNA
Follow us
|

Updated on: Oct 06, 2024 | 11:40 AM

ಮಹಾರಾಷ್ಟ್ರದ ಲಾತೂರ್​ನಲ್ಲಿರುವ ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು ಎಂದು ಹೇಳಲಾಗುತ್ತಿದೆ. ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ ಮತ್ತು ಸೊಪ್ಪಿನ ಸಾರು ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ವಿದ್ಯಾರ್ಥಿನಿಯರಿಗೆ ವಾಂತಿ ಶುರುವಾಗಿತ್ತು, ಮಾಹಿತಿ ಪಡೆದ ಕಾಲೇಜು ಪ್ರಾಂಶುಪಾಲರು ಸ್ಥಳಕ್ಕೆ ಧಾವಿಸಿ ಲಾತೂರ್​ನವಿಲಾಸ್‌ರಾವ್ ದೇಶಮುಖ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ಉದಯ್ ಮೋಹಿತೆ ಅವರಿಗೆ ಮಾಹಿತಿ ನೀಡಿದರು.

ಅಸ್ವಸ್ಥ ವಿದ್ಯಾರ್ಥಿಗಳನ್ನು ತಕ್ಷಣವೇ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಮಧ್ಯರಾತ್ರಿಯ ವೇಳೆಗೆ ಸುಮಾರು 50 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ ಮೋಹಿತೆ ತಿಳಿಸಿದ್ದಾರೆ. ಭಾನುವಾರ ಮುಂಜಾನೆ 3 ಗಂಟೆ ವೇಳೆಗೆ ಅವರಲ್ಲಿ 20 ಮಂದಿ ಡಿಸ್ಚಾರ್ಜ್ ಆಗಿದ್ದು, ಉಳಿದ 30 ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಯಾರ ಸ್ಥಿತಿಯೂ ಚಿಂತಾಜನಕವಾಗಿಲ್ಲ ಎಂದರು.

ಮತ್ತಷ್ಟು ಓದಿ: ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಸಂತ್ರಸ್ತ ವಿದ್ಯಾರ್ಥಿಗಳ ಪೋಷಕರಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ, ಘಟನೆಯ ಕುರಿತು ಶಿವಾಜಿನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮೇಲಾಗಿ ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಧಿಕಾರಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿದರು. ಮಾದರಿ ವರದಿ ಬಂದ ನಂತರ ಆಹಾರ ವಿಷಕ್ಕೆ ಕಾರಣ ತಿಳಿಯಲಿದೆ ಎಂದರು.

ಲಾತೂರ್‌ನ ಲೋಕಸಭಾ ಸದಸ್ಯ ಶಿವಾಜಿ ಕಾಲ್ಗೆ ಕೂಡ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಕಾಂಗ್ರೆಸ್ ಸಂಸದರು ಲಾತೂರ್ ಜಿಲ್ಲಾಧಿಕಾರಿ ವರ್ಷಾ ಠಾಕೂರ್ ಘುಗೆ ಅವರನ್ನು ಸಂಪರ್ಕಿಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ