AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ 54 ಡಿಟೋನೇಟರ್‌ಗಳು ಪತ್ತೆ

ಸೆಂಟ್ರಲ್ ರೈಲ್ವೇ (ಸಿಆರ್) ಮಾರ್ಗದಲ್ಲಿ ಸಾಮಾನ್ಯವಾಗಿ ಜನಸಂದಣಿ ಇರುವ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1 ನಲ್ಲಿ ಬಿದ್ದಿರುವ ಪೆಟ್ಟಿಗೆಗಳು ಸಿಕ್ಕಿವೆ.ಬಿಡಿಡಿಎಸ್ ತಂಡವು ಪೆಟ್ಟಿಗೆಗಳನ್ನು ಕಸ್ಟಡಿಗೆ ತೆಗೆದುಕೊಂಡಿತು. ಅವುಗಳನ್ನು ತೆರೆದಾಗ ಅವುಗಳಲ್ಲಿ 54 ಡಿಟೋನೇಟರ್‌ಗಳು (ಸಣ್ಣ ಪ್ರಮಾಣದ ಸ್ಫೋಟಕವನ್ನು ಒಳಗೊಂಡಿರುವ ಸಾಧನ) ಕಂಡುಬಂದಿವೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ 54 ಡಿಟೋನೇಟರ್‌ಗಳು ಪತ್ತೆ
ಡಿಟೋನೇಟರ್‌
ರಶ್ಮಿ ಕಲ್ಲಕಟ್ಟ
|

Updated on:Feb 21, 2024 | 8:13 PM

Share

ಮುಂಬೈ ಫೆಬ್ರುವರಿ 21: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಕಲ್ಯಾಣ್ ರೈಲ್ವೇ ನಿಲ್ದಾಣದ (Kalyan railway station) ಪ್ಲಾಟ್‌ಫಾರ್ಮ್‌ನಲ್ಲಿ ಬುಧವಾರ ಎರಡು ಬಾಕ್ಸ್‌ಗಳಲ್ಲಿ 50 ಕ್ಕೂ ಹೆಚ್ಚು ಡಿಟೋನೇಟರ್‌ಗಳು (detonators) ಪತ್ತೆಯಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೆಂಟ್ರಲ್ ರೈಲ್ವೇ (ಸಿಆರ್) ಮಾರ್ಗದಲ್ಲಿ ಸಾಮಾನ್ಯವಾಗಿ ಜನಸಂದಣಿ ಇರುವ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1 ನಲ್ಲಿ ಬಿದ್ದಿರುವ ಪೆಟ್ಟಿಗೆಗಳನ್ನು ಜಿಆರ್‌ಪಿ ಗಮನಿಸಿದೆ ಎಂದು ಅಧಿಕಾರಿ ಹೇಳಿದರು. ನಂತರ ಶ್ವಾನ ದಳ ಮತ್ತು ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ (ಬಿಡಿಡಿಎಸ್) ಸಿಬ್ಬಂದಿಯನ್ನು ತಕ್ಷಣವೇ ಸ್ಥಳಕ್ಕೆ ಕರೆಸಲಾಯಿತು.

ಬಿಡಿಡಿಎಸ್ ತಂಡವು ಪೆಟ್ಟಿಗೆಗಳನ್ನು ಕಸ್ಟಡಿಗೆ ತೆಗೆದುಕೊಂಡಿತು. ಅವುಗಳನ್ನು ತೆರೆದಾಗ ಅವುಗಳಲ್ಲಿ 54 ಡಿಟೋನೇಟರ್‌ಗಳು (ಸಣ್ಣ ಪ್ರಮಾಣದ ಸ್ಫೋಟಕವನ್ನು ಒಳಗೊಂಡಿರುವ ಸಾಧನ) ಕಂಡುಬಂದಿವೆ ಎಂದು ಅವರು ಹೇಳಿದರು.

ಅವರು ಇನ್ನೂ ಪ್ರಕರಣ ದಾಖಲಿಸಿಕೊಳ್ಳದಿದ್ದರೂ ಕಲ್ಯಾಣ್ ಜಿಆರ್‌ಪಿ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಡಿಟೋನೇಟರ್‌ಗಳು ಪತ್ತೆಯಾದ ಸ್ಥಳಕ್ಕೆ ಥಾಣೆ ನಗರ ಪೊಲೀಸರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಸಾಮಾನ್ಯವಾಗಿ, ಥಾಣೆ ಜಿಲ್ಲೆಯಲ್ಲಿ ಅಕ್ರಮವಾಗಿ ಕೆರೆಗಳಲ್ಲಿ ಮೀನು ಹಿಡಿಯಲು ಮತ್ತು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ಕಾರ್ಯಾಚರಣೆಗಳನ್ನು ನಡೆಸಲು ಡಿಟೋನೇಟರ್‌ಗಳನ್ನು ಬಳಸಲಾಗುತ್ತದೆ.

ಇದನ್ನೂ ಓದಿ: ವೈಎಸ್‌ಆರ್‌ಸಿಪಿಗೆ ಸಂಸದ ವಿಪಿಆರ್ ರಾಜೀನಾಮೆ; ಟಿಡಿಪಿ ಸೇರುವ ಸಾಧ್ಯತೆ

ಡಿಟೋನೇಟರ್‌ಗಳನ್ನು ನೀರಿನ ಮೂಲಕ ಆಘಾತ ತರಂಗಗಳನ್ನು ಕಳುಹಿಸಲು ಬಳಸಲಾಗುತ್ತದೆ. ಈ ಮೂಲಕ ಮೀನುಗಳನ್ನು ಕೊಲ್ಲಲಾಗುತ್ತದೆ. ಮುಂಬೈ ನಗರದ ಹೊರವಲಯದಲ್ಲಿರುವ ಕಲ್ಯಾಣ್ ರೈಲು ನಿಲ್ದಾಣವು ದೂರದ ಮತ್ತು ಉಪನಗರ ರೈಲುಗಳ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ ಮತ್ತು ಸಾಮಾನ್ಯವಾಗಿ ತುಂಬಾ ಜನದಟ್ಟಣೆಯಿಂದ ಕೂಡಿರುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Wed, 21 February 24

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್